Homeಫ್ಯಾಕ್ಟ್‌ಚೆಕ್ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

- Advertisement -
- Advertisement -

ಗುರುವಾರ (ಮೇ.8) ರಾತ್ರಿ ಭಾರತದ ಹಲವು ಪ್ರದೇಶಗಳ ಮೇಲೆ ವಿವಿಧ ರೀತಿಯಲ್ಲಿ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿತ್ತು. ಅದನ್ನು ಭಾರತ ಯಶಸ್ವಿಯಾಗಿ ತಡೆದಿದೆ ಎಂದು ವರದಿಯಾಗಿದೆ.

ದೇಶದ ಬಹುತೇಕ ದೃಶ್ಯ ಮಾಧ್ಯಮಗಳು ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂಬ ಸುದ್ದಿಯನ್ನು ನೇರ ಪ್ರಸಾರ ರೀತಿಯಲ್ಲಿ ಪ್ರಕಟಿಸಿತ್ತು. ಇದೇ ವೇಳೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರತ-ಪಾಕಿಸ್ತಾನ ಪರಸ್ಪರ ದಾಳಿ ಮಾಡಿಕೊಂಡಿವೆ ಎಂಬ ಹಲವು ಸುದ್ದಿ ಮತ್ತು ವಿಡಿಯೋಗಳು ಹರಿದಾಡಿತ್ತು. ಅಂತಹ ವಿಡಿಯೋಗಳನ್ನು ದೇಶದ ಮುಖ್ಯವಾಹಿನಿ ಮಾಧ್ಯಮಗಳೂ ಪ್ರಸಾರ ಮಾಡಿತ್ತು.

ವೈರಲ್ ವಿಡಿಯೋಗಳ ಪೈಕಿ 37 ಸೆಕೆಂಡ್‌ ವಿಡಿಯೋವೊಂದನ್ನು ಹೆಚ್ಚಿನ ಜನರು ಹಂಚಿಕೊಂಡಿದ್ದರು. ಅದರಲ್ಲಿ, ಯಾವುದೋ ಸ್ಪೋಟ ಸಂಭವಿಸಿದ ಬಳಿಕದ ಚಿತ್ರಣ ಇತ್ತು. ಸುತ್ತಲು ಕಾರುಗಳು ನಿಂತಿರುವುದು, ಬೆಂಕಿ ಹೊತ್ತಿ ಉರಿಯುತ್ತಿರುವುದು ಮತ್ತು ಒಬ್ಬರು ವ್ಯಕ್ತಿ ಹಿಂದಿ/ಉರ್ದು ಭಾಷೆಯಲ್ಲಿ “ನಿಮ್ಮ ಮಕ್ಕಳು ಮತ್ತು ವೃದ್ಧರನ್ನು ಕರೆದುಕೊಂಡು ಹೋಗಿ, ನಿಮ್ಮ ಮನೆಗೆ ಬೀಗ ಹಾಕಿ ಮತ್ತು ಮುಂದಿನ ರಸ್ತೆಯ ಕಡೆಗೆ ಹೋಗಿ…”ಇತ್ಯಾದಿ ಹೇಳುವುದು ಆ ವಿಡಿಯೋದಲ್ಲಿ ಇತ್ತು.

ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದ ತನ್ನ ನೇರ ಪ್ರಸಾರದ ಸಮಯದಲ್ಲಿ ಮೇಲೆ ತಿಳಿಸಿದ ವಿಡಿಯೋವನ್ನು ಪ್ಲೇ ಮಾಡಿತ್ತು. ವಾಹಿನಿಯ ನಿರೂಪಕರಲ್ಲಿ ಒಬ್ಬರು “ಇದೀಗ ನೀವು ಕರಾಚಿಯ ದೃಶ್ಯಗಳನ್ನು ನೋಡುತ್ತಿದ್ದೀರಿ, ಅಲ್ಲಿ ಎಲ್ಲವೂ ನಾಶವಾಗಿದೆ” ಎಂದಿದ್ದರು. ಮತ್ತೊಬ್ಬ ನಿರೂಪಕ “ಇದು ಐಎನ್ಎಸ್ ವಿಕ್ರಾಂತ್ ನಡೆಸಿದ ದಾಳಿ ದೃಶ್ಯವಾಗಿದೆ” ಎಂದಿದ್ದರು.

ಎಬಿಪಿ ಆನಂದ ಈಗ ನೇರ ಪ್ರಸಾರ ವಿಡಿಯೋವನ್ನು ಡಿಲಿಟ್ ಮಾಡಿದೆ. ಅದರೆ, ಅದರ ಸಂಗ್ರಹ ತುಣುಕು ಮತ್ತು ಆರ್ಕೈವ್ ಲಿಂಕ್ ಕೆಳಗಿದೆ. ವಿಡಿಯೋದಲ್ಲಿ 5 ನಿಮಿಷ 8 ಸೆಕೆಂಡ್‌ ಅವಧಿಯಲ್ಲಿ ನಾವು ಮೇಲ್ಗಡೆ ವಿವರಿಸಿದ ದೃಶ್ಯವಿದೆ.

ಆರ್ಕೈವ್ ಲಿಂಕ್

VC : youtube.com/@abpanandatv Via altnews.in

ಎಬಿಪಿ ಆನಂದ ತನ್ನ ವೆಬ್‌ಸೈಟ್‌ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಲೈವ್ ಅಪ್ಡೇಟ್ ನೀಡಲು ಮತ್ತು ಭಾರತ-ಪಾಕಿಸ್ತಾನ ಉದ್ವಿಗ್ನತೆ ಕುರಿತು ವರದಿ ಪ್ರಕಟಿಸಲೂ ಅದೇ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ಇಮೇಜ್ ಬಳಸಿಕೊಂಡಿತ್ತು. ಅದರ ಆರ್ಕೈವ್ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.

ಎರಡೂ ಪುಟಗಳ ಸ್ಕ್ರೀನ್ ಶಾಟ್‌ಗಳು ಕೆಳಗಿವೆ

ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಅನ್ನು ಎಬಿಪಿ ಆನಂದ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ “ಬಿಗ್ ಬ್ರೇಕಿಂಗ್: ಐಎನ್‌ಎಸ್ ವಿಕ್ರಾಂತ್‌ನ ಪ್ರಮುಖ ಕಾರ್ಯಾಚರಣೆ, ಬೃಹತ್ ಸ್ಫೋಟ, ಕರಾಚಿ ಧ್ವಂಸ, ಭಾರತದಿಂದ ಸತತ ದಾಳಿಗಳು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿತ್ತು. ನಂತರ ಪೋಸ್ಟ್ ಎಡಿಟ್ ಮಾಡಿ ವೈರಲ್ ಕ್ಲಿಪ್‌ನ ಸ್ಕ್ರೀನ್‌ಶಾಟ್ ಜಾಗಕ್ಕೆ ಪಾಕಿಸ್ತಾನದ ರಾಷ್ಟ್ರ ಧ್ವಜದ ಚಿತ್ರವನ್ನು ಬದಲಿಸಿದೆ (ಆರ್ಕೈವ್)

Credit: altnews.in

ಅದೇ ವೈರಲ್ ವಿಡಿಯೋವನ್ನು ಹಲವಾರು ಎಕ್ಸ್‌ ಹ್ಯಾಂಡಲ್‌ಗಳು ಹಂಚಿಕೊಂಡಿತ್ತು.

ಎಕ್ಸ್‌ ಬಳಕೆದಾರರಾದ ನೈನಾ ಯಾದವ್ (@NAINAYADAV_06) (ತಮ್ಮ ಎಕ್ಸ್‌ ಬಯೋದಲ್ಲಿ ಪತ್ರಕರ್ತೆ ಎಂದು ಹೇಳಿಕೊಂಡಿದ್ದಾರೆ) ಅವರು ಮೇ 8 ರಂದು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಲಾಹೋರ್‌ನ ಜಿನ್ನಾ ಮಾರುಕಟ್ಟೆ ರಸ್ತೆ ಸಂಪೂರ್ಣವಾಗಿ ನಾಶವಾಯಿತು” #IndiaPakistanWar ಎಂದು ಬರೆದುಕೊಂಡಿದ್ದರು. (ಆರ್ಕೈವ್)

 

 

 

 

 

 

 

 

 

 

 

 

 

 

@IndiaTales7, @JaipurDialogues, @mkr4411, @wokeflix_, @iSinghApurva, @SonOfBharat7, @KreatelyMedia, @madhur_panktiya ಮುಂತಾದ ಎಕ್ಸ್‌ ಬಳೆದಾರರು ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದರು. ಅವುಗಳು ಕೆಲವು ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿವೆ.

ನಾವು ಇಲ್ಲಿ ಉಲ್ಲೇಖಿಸಿದ ಬಹುತೇಕ ಎಕ್ಸ್ ಬಳಕೆದಾರರು ಈ ಹಿಂದೆ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಂಡವರಾಗಿದ್ದಾರೆ.

ಫ್ಯಾಕ್ಟ್‌ಚೆಕ್ 

ವೈರಲ್ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್‌ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ ಮತ್ತು ವಿವಿಧ ಕೀ ವರ್ಡ್‌ಗಳನ್ನು ಬಳಸಿ ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಸಾಮಾಜಿಕ ಜಾಲತಾಣ ಥ್ರೆಡ್‌ನಲ್ಲಿ ವೈರಲ್ ಕ್ಲಿಪ್‌ಗೆ ಹೋಲಿಕೆಯಾಗುವ ಫೋಟೋವೊಂದು ನಮಗೆ ದೊರೆತಿದೆ.

ಫೆಬ್ರವರಿ 1, 2025ರಂದು joe.kendra ಎಂಬವರು ಫೋಟೋ ಪೋಸ್ಟ್ ಮಾಡಿದ್ದು, “ಮತ್ತೊಂದು ಅಪಘಾತ ಅಮೆರಿಕದ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ಜನನಿಬಿಡ ಪ್ರದೇಶದಲ್ಲಿ ವೈದ್ಯಕೀಯ ಸಾರಿಗೆ ಲಿಯರ್‌ಜೆಟ್ ಅವಳಿ ಎಂಜಿನ್ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ಹೇಳಿವೆ. ಈ ಪ್ರದೇಶದಲ್ಲಿ ಮೂರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ” ಎಂದು ಬರೆದುಕೊಂಡಿದ್ದರು.

 

 

 

 

 

 

 

 

 

ಈ ಪೋಸ್ಟ್‌ನ ಸುಳಿವು ಹಿಡಿದುಕೊಂಡ ನಾವು ಕೀ ವರ್ಡ್‌ ಬಳಸಿ ವಿಡಿಯೋಗಾಗಿ ಹುಡುಕಾಟ ನಡೆಸಿದ್ದೇವೆ. ಈ ವೇಳೆ ಫೆಬ್ರವರಿ 1, 2025ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದು ನಮಗೆ ಲಭ್ಯವಾಗಿದೆ. Hakan Tuluhan ಎಂಬ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ 1 ನಿಮಿಷ 4 ಸೆಕೆಂಡ್‌ನ ವಿಡಿಯೋದಲ್ಲಿ, 25 ಸೆಕಂಡ್‌ನಿಂದ ಎಬಿಪಿ ಆನಂದ ಸುದ್ದಿ ವಾಹಿನಿ ಮತ್ತು ಇತರ ಎಕ್ಸ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ತುಣುಕನ್ನು ನೋಡಬಹುದು.

ವಿಡಿಯೋದ ಡಿಸ್ಕ್ರಿಪ್ಶನ್‌ನಲ್ಲಿ “ಇದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದ್ದು” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಡಂಕಿನ್ ಡೋನಟ್ಸ್ ಔಟ್‌ಲೆಟ್‌ಗೆ ಪ್ರವೇಶಿಸುತ್ತಿರುವಂತೆ ಕಾಣುತ್ತಿದೆ. ದೃಶ್ಯಗಳು ಸ್ವಲ್ಪ ಅಸ್ಪಷ್ಟವಾಗಿದ್ದರೂ, ಡಂಕಿನ್ ಡೋನಟ್ಸ್ ಸೈನ್‌ಬೋರ್ಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಔಟ್‌ಲೆಟ್ ಇರುವಿಕೆ ಮತ್ತು ಸೈನ್‌ನೇಜ್‌ನ ಆಕಾರ ಮತ್ತು ಬಣ್ಣವನ್ನು ಆಧರಿಸಿ, ಅದನ್ನು ಗುರುತಿಸಬಹುದು.

Credi: altnews.in

ಔಟ್‌ಲೆಟ್‌ ಇರುವಿಕೆಯನ್ನು ಗೂಗಲ್ ಮ್ಯಾಪ್‌ ಮೂಲಕ ನೋಡಬಹುದು..ಲಿಂಕ್ ಇಲ್ಲಿದೆ 

Credit : altnews.in

ಆದ್ದರಿಂದ, ಐಎನ್ಎಸ್ ವಿಕ್ರಾಂತ್‌ನ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನದಲ್ಲಿ ನಾಶ ಸಂಭವಿಸಿದೆ ಎಂದು ಎಬಿಪಿ ಆನಂದ ಮತ್ತು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದ ವೈರಲ್ ಕ್ಲಿಪ್ ವಾಸ್ತವವಾಗಿ ಮೂರು ತಿಂಗಳ ಹಳೆಯದು ಮತ್ತು ಫಿಲಡೆಲ್ಫಿಯಾದ್ದಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...