Homeಕರ್ನಾಟಕಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಹೋರಾಟಕ್ಕೆ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾದ 'ಸಂಯುಕ್ತ ಹೋರಾಟ - ಕರ್ನಾಟಕ' ಬೆಂಬಲ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮೇ 20ರಂದು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಬಲ ನೀಡಲಿದ್ದು, ರಾಜ್ಯದ ಗ್ರಾಮೀಣ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕರು, ರೈತರು ತಮ್ಮ ಕೆಲಸಗಳನ್ನು ನಿಲ್ಲಿಸಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ದ ಸಂಯೋಜಕ ಟಿ. ಯಶವಂತ ಅವರು ಹೇಳಿದರು. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮೇ 20 ಸಾರ್ವತ್ರಿಕ ಮುಷ್ಕರ

‘ಸಂಯುಕ್ತ ಹೋರಾಟ ಕರ್ನಾಟಕ’ ಎಂಬುದು ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಮೇ 20ರಂದು ದೇಶದಾದ್ಯಂತ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ಭಾಗವಹಿಸಲಿದ್ದೇವೆ ಎಂದು ಅವರು ತಿಳಿಸಿದರು.

ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “2020ರ ಈಚೆಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂದುವರಿದ ಹೋರಾಟ ನಡೆಯುತ್ತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜೆಸಿಟಿಯು ಸಾರ್ವತ್ರಿಕ ಮುಷ್ಕರಕ್ಕೆ ಜಂಟಿಯಾಗಿ ತೀರ್ಮಾನಿಸಿವೆ. ರೈತರು ನಡೆಸಿದ್ದ ಒಂದು ವರ್ಷಗಳ ಕಾಲದ ಹೋರಾಟದ ವೇಳೆ, ಕೇಂದ್ರ ಸರ್ಕಾರ ರೈತರಿಗೆ ನೀಡಿದ ಮಾತನ್ನು ಇನ್ನೂ ಈಡೇಡಿಸಿಲ್ಲ. ನಮ್ಮ ಈ ಹೋರಾಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನಡೆಯುತ್ತಿದೆ” ಎಂದರು.

“ಬಿಜೆಪಿ ತಂದ ಕಾನೂನನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಚಾಚು ತಪ್ಪದೆ ಜಾರಿ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ವಿದ್ಯುತ್ ನೀತಿಯನ್ನು ವಿರೋಧ ಮಾಡಿದ್ದ ಕಾಂಗ್ರೆಸ್ ಈಗ ಅದನ್ನು ಜಾರಿ ಮಾಡುತ್ತಿದೆ. ಭೂ ಮಸೂದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದರೂ ಅದನ್ನು ಇನ್ನೂ ಮಾಡಿಲ್ಲ. ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ನಿಷೇಧ ಮತ್ತು ತಿದ್ದುಪಡಿ ಕಾಯ್ದೆಯಿಂದ ರೈತರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಸ್ವಾಮಿನಾಥನ್ ವರದಿ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಆದರೆ ಇಲ್ಲಿನ ಸರ್ಕಾರ ಅದರ ಬಗ್ಗೆ ಮಾತನಾಡುತ್ತಲೆ ಇಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ಬದಲಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರಬಹುದು, ಆದರೆ ನೀತಿಗಳು ಹಾಗೆ ಇವೆ. ಮೇ 20ರಂದು ನಡೆಯಲಿರುವ ಮುಷ್ಕರದಲ್ಲಿ ರಾಜ್ಯದ ಎಲ್ಲಾ ಕಡೆ ಲಕ್ಷಾಂತರ ಜನರು ಬೀದಿಗೆ ಇಳಿಯುತ್ತಾರೆ. ಬಂಧನಕ್ಕೆ ಒಳಗಾಗುತ್ತಾರೆ. ಜೈಲ್ ಭರೋ ನಡೆಯುತ್ತದೆ. ಕೇಂದ್ರ ಮತ್ತು ಸರ್ಕಾರ ಈಗಾದರೂ ಕಾನೂನನ್ನು ವಾಪಾಸು ತೆಗೆದುಕೊಂಡರೆ ನಾವು ಹೋರಾಟದ ಬಗ್ಗೆ ಮರುಪರಿಶೀಲನೆ ಮಾಡುತ್ತೇವೆ.” ಎಂದು ಅವರು ಹೇಳಿದರು.

ಕಾರ್ಮಿಕ ನಾಯಕಿ ಎಸ್. ವರಲಕ್ಷ್ಮಿ ಮಾತನಾಡಿ, “ಸಂಪತ್ತು ಸೃಷ್ಟಿಸುವ ರೈತ ಮತ್ತು ಕಾರ್ಮಿಕರಿಗಾಗಿ ಇದ್ದ ಕಾನೂನುಗಳನ್ನು ವ್ಯಾಪಾರವನ್ನು ಸುಲಭ ಮಾಡಲು ಬೇಕಾಗಿ ಸರ್ಕಾರ ಬದಲಾವಣೆ ಮಾಡುತ್ತಿವೆ. ಅದರ ಬದಲಾಗಿ ನಾಲ್ಕು ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ಜಾರಿ ಮಾಡುತ್ತಿದೆ. ಈ ಬದಲಾವಣೆಯಿಂದ 80% ಕಾರ್ಮಿಕರು ಯಾವುದೇ ಕಾರ್ಮಿಕ ಕಾಯ್ದೆ ಅಡಿಯಲ್ಲಿ ಬರುವುದಿಲ್ಲ. ಸಂಘ ಕಟ್ಟುವ ಹಕ್ಕು, ಸಾಮೂಹಿಕ ಚೌಕಾಶಿಯ, ಮುಷ್ಕರದ ಹಕ್ಕನ್ನು ಈ ಕೋಡ್‌ಗಳ ಕಿತ್ತುಕೊಳ್ಳುತ್ತವೆ” ಎಂದು ಹೇಳಿದರು.

“ಈ ಕಾನೂನಿನ ಪ್ರಕಾರ ಮುಷ್ಕರಕ್ಕೆ 60 ದಿನಗಳ ಮುಂಚೆ ನೋಟಿಸ್ ನೀಡಬೇಕು. ಈ ಹಿಂದೆ 14 ದಿನಗಳ ಮುಂಚೆ ನೋಟಿಸ್ ನೀಡಿದರೆ ಹೇಳಿದರೆ ಸಾಕಿತ್ತು. ಈ ವೇಳೆ ಮುಷ್ಕರಕ್ಕೆ ಹೋಗುವ ಕಾರ್ಮಿಕರಿಗೆ ಸೆರೆಮನೆ ವಾಸ ಶಿಕ್ಷೆ, ದಂಡ ಹಾಕಿ ಹಕ್ಕು ಕೇಳುವ ಕಾರ್ಮಿಕರನ್ನು ಬೆದರಿಸಲಾಗುತ್ತದೆ. 70% ಕಾರ್ಮಿಕರು ಈಗ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ಇಎಸ್ಐ ಮತ್ತು ಪಿಎಫ್ಐ ಐಚ್ಛಿಕವಾಗಿ ಮಾಡಲಾಗಿದೆ. ಕಟ್ಟಡ ಕಾರ್ಮಿಕರ ಸೆಸ್‌ಗಳನ್ನು ರದ್ದು ಮಾಡಲಾಗಿದೆ. ಈ ಕಾನೂನಿನ ಮೂಲಕ ಕಾರ್ಮಿಕರ ಎಲ್ಲಾ ಸವಲತ್ತುಗಳನ್ನು ಕಿತ್ತುಕೊಂಡಿದ್ದಾರೆ.” ಎಂದು ಅವರು ಹೇಳಿದರು.

“ಹೊಸ ಕಾರ್ಮಿಕ ಕೋಡ್‌ನಲ್ಲಿ ಕೆಲಸದ ಅವಧಿಯನ್ನು 8ರಿಂದ 12ಕ್ಕೆ ಹೆಚ್ಚಿಸುತ್ತಿದ್ದಾರೆ. ಅದಾಗ್ಯೂ ಓವರ್‌ ಟೈಮ್ ಕೆಲಸಕ್ಕೆ ಹೆಚ್ಚುವರಿ ವೇತನ ಕೊಡುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಲೇಬರ್ ಕೋಡ್ ಕಾರ್ಮಿಕರ ಮರಣ ಶಾಸನ. ಇದು ಜಾರಿಗೆ ಬಂದರೆ ರಾಜ-ಮಹಾರಾಜರ ಕಾಲದಲ್ಲಿ ಇದ್ದಂತೆ ಕಾರ್ಮಿಕರು ದಾಸ್ಯಕ್ಕೆ ಒಳಗಾಗುತ್ತಾರೆ” ಎಂದು ಅವರು ಎಚ್ಚರಿಸಿದರು.

“ರಾಜ್ಯದ ಸಿದ್ದರಾಮಯ್ಯ ಸರ್ಕಾರದ ಮೇಲೆ ಕಾರ್ಮಿಕ ಸಂಘಟನೆಗಳಿಗೆ ಹೆಚ್ಚು ತೀರಾ ಬೇಸರವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟ್‌ಗಳ ಪರವಾಗಿದೆ ಎಂಬುವು ಎಲ್ಲರಿಗೂ ತಿಳಿದಿರುವಂತದ್ದೆ. ಅವರಿಂದ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ರಾಜ್ಯದ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಹೇಳುವುದನ್ನು ಮಾಡುತ್ತಿರುವುದು ನಮಗೆ ತೀರಾ ಬೇಸರದ ವಿಚಾರ. ಅದಾಗ್ಯೂ, ಒಂದು ದಿನದ ಮುಷ್ಕರಕ್ಕೆ ಈ ಹೋರಾಟ ನಿಲ್ಲುವುದಿಲ್ಲ.‌ ಬೆವರು ಸುರಿಸಿ ದುಡಿಯುವ ಜನರ ಕೋಪ ಒಮ್ಮೆ ಸ್ಪೋಟ ಆಯಿತು ಎಂದರೆ ಅದನ್ನು ನಿಮಗೆ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಅವರು ಎಚ್ಚರಿಕೆ ನೀಡಿದರು.

ಕಾರ್ಮಿಕ ಮುಖಂಡ ಕೆ.ವಿ.ಭಟ್ ಮಾತನಾಡಿ, “ಕೇಂದ್ರ ಕಾರ್ಮಿಕ ಜಂಟಿ ಸಮಿತಿ ದೇಶದಲ್ಲಿ ಕಳೆದ 30 ವರ್ಷಗಳಿಂದ ಒಟ್ಟಾಗಿ ಹೋರಾಟ ಮಾಡುತ್ತಲೇ ಬಂದಿದೆ. ಆ ಎಲ್ಲಾ ಹೋರಾಟಗಳ ಮುಂದುವರಿಕೆಯಾಗಿ ಈ ಮುಷ್ಕರ ನಡೆಯುತ್ತಿದೆ. ಕೇಂದ್ರ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಕರಣ ಮಾಡಲು ಮತ್ತು ಅದನ್ನು ಬಿಡಿಗಾಸಿಗೆ ಮಾರಾಟ ಮಾಡಲು ಹೊರಟಿದೆ. ಇದನ್ನು ಕೈ ಬಿಡಬೇಕು ಎಂಬುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿ ಮೇಲೆ ಬೆಲೆ ಏರಿಕೆ ಮಾಡುತ್ತಿವೆ. ಎರಡು ಸರ್ಕಾರಗಳು ಅದಕ್ಕೆ ಕಡಿವಾಣ ಹಾಕಬೇಕು ಎಂಬುವುದು ನಮ್ಮ ಬೇಡಿಕೆ. ಸಾವಿರಾರು ಕೋಟಿ ಜನರ ತೆರಿಗೆ ಹಣದಿಂದ ಕಟ್ಟಿರುವ ವಿದ್ಯುತ್ ವಲಯವನ್ನು ಬಿಡಿಗಾಸಿಗೆ ಖಾಸಗಿಗೆ ವಹಿಸಲಾಗುತ್ತಿದೆ. ಕೇಂದ್ರ ಸರ್ಕಾರ ತನ್ನ ನೀತಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರದೊಂದಿಗೆ ತಿಕ್ಕಾಟ ನಡೆಸುತ್ತಿದೆ. ತನ್ನ ನೀತಿ ಜಾರಿ ಮಾಡಿದರೆ ಮಾತ್ರ ಅನುದಾನ ನೀಡುತ್ತೇವೆ ಎಂದು ಹಿಂಬಾಗಿಲ ಮೂಲಕ ಕಾನೂನು ಜಾರಿಗೆ ತರುವ ಪ್ರಯತ್ನ ನಡೆಸುತ್ತಿದೆ” ಎಂದು ಹೇಳಿದರು.

ಈ ಹಿಂದೆ ಕೇಂದ್ರದ ನೀತಿ, ನಿಲುವುಗಳನ್ನು ವಿರೋಧ ಮಾಡಿಕೊಂಡು ಬಂದ ರಾಜ್ಯ ಸರ್ಕಾರ ಈಗ ವಚನ ಭ್ರಷ್ಟವಾಗಿದೆ. ಈ ಎಲ್ಲಾ ಬೇಡಿಕೆಗಾಗಿ ನಮ್ಮ ಹೋರಾಟ ನಡೆಯುತ್ತಿದ್ದು, ಅದರ ಭಾಗವಾಗಿ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾ ಸಮಾವೇಶ ನಡೆಯುತ್ತಿವೆ ಎಂದು ಅವರು ಹೇಳಿದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಉಭಯ ದೇಶಗಳ ರೈತರು ಮತ್ತು ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. “ದೇಶದಲ್ಲಿ ರೈತರ ಭೂಮಿಯನ್ನು, ಕಾರ್ಮಿಕರಿಂದ ಅವರ ಬದುಕುವ ಹಕ್ಕು ಮತ್ತು ಅವರ ಹೋರಾಟದ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ದುಡಿವ ಜನರ ಮೇಲೆ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ದಾಳಿ ಮಾಡುತ್ತಿವೆ. ಕೇಂದ್ರ ಸರ್ಕಾರಕ್ಕಿಂತ ನಮಗೆ ನಿರೀಕ್ಷೆಗಳಿದ್ದ ರಾಜ್ಯ ಸರ್ಕಾರದ ಬಗ್ಗೆ ಹೆಚ್ಚು ಭ್ರಮನಿರಸನ ಆಗಿದ್ದೇವೆ” ಎಂದು ಹೇಳಿದರು. ಮೇ 20 ಸಾರ್ವತ್ರಿಕ ಮುಷ್ಕರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ವಿಸ್ತೃತ ದಾಳಿಗೆ ಇಸ್ರೇಲ್ ಸಂಪುಟ ಅನುಮೋದನೆ: 24 ಒತ್ತೆಯಾಳುಗಳ ಕುರಿತು ಬಿಡುಗಡೆಯಾದವರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...