Homeಮುಖಪುಟಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

- Advertisement -
- Advertisement -

ಭಾರತದ 36 ಸ್ಥಳಗಳ ಮೇಲೆ ಟರ್ಕಿ ಡ್ರೋನ್ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದೆ. 300-400 ಡ್ರೋನ್‌ಗಳ ಸಮೂಹವು ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಭಾರತೀಯ ಸ್ಥಳಗಳನ್ನು ಗುರಿಯಾಗಿಸಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಸಂಸ್ಥೆಗಳನ್ನು ಗುರಾಣಿಯಾಗಿ ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಗುರುವಾರ (ಮೇ.8) ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಶುಕ್ರವಾರ (ಮೇ.9) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಗುರುವಾರ ತಡರಾತ್ರಿ ಭಾರತದ ಉತ್ತರ ಮತ್ತು ಪಶ್ಚಿಮ ವಲಯಗಳಲ್ಲಿನ 15 ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು.

“ನಮ್ಮ ಸಶಸ್ತ್ರ ಪಡೆಗಳು ಚಲನಶೀಲ ಮತ್ತು ಚಲನಶೀಲವಲ್ಲದ ವಿಧಾನಗಳನ್ನು ಬಳಸಿಕೊಂಡು ಅನೇಕ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಭಟಿಂಡಾ ಮಿಲಿಟರಿ ನೆಲೆಯನ್ನು ಗುರಿಯಾಗಿಸಲು ಕಳುಹಿಸಲಾದ ಒಂದು ಪಾಕಿಸ್ತಾನಿ ಸಶಸ್ತ್ರ ಮಾನವರಹಿತ ವೈಮಾನಿಕ ವಾಹನದ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಹೇಳಿದರು.

“ಭಾರತದ ನೆಲೆಗಳನ್ನು ಗುರಿಯಾಗಿಸುವ ತನ್ನ ಪ್ರಯತ್ನಗಳನ್ನು ಪಾಕಿಸ್ತಾನವು ಹಾಸ್ಯಾಸ್ಪದವಾಗಿ ನಿರಾಕರಿಸುವುದು ಅದರ ದ್ವಂದ್ವತೆಗೆ ಮತ್ತೊಂದು ಉದಾಹರಣೆಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ಪ್ರತಿಕ್ರಿಯಿಸಿವೆ. ಪಾಕಿಸ್ತಾನದ ನಾಲ್ಕು ವಾಯು ರಕ್ಷಣಾ ತಾಣಗಳ ಮೇಲೆ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಿದೆ ಮತ್ತು ಒಂದು ಡ್ರೋನ್ ಎಡಿ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ ಎಂದು ಹೇಳಿದರು.

ಪಾಕಿಸ್ತಾನದಿಂದ ಬರುತ್ತಿರುವ ಹೇಳಿಕೆಗಳನ್ನು ತಳ್ಳಿ ಹಾಕಿದ ವಿಕ್ರಮ್ ಮಿಸ್ರಿ, ಆ ದೇಶದ ವಿರುದ್ದ ಕಿಡಿಕಾರಿದರು. ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ವಿಶೇಷವಾಗಿ, ಪೂಂಚ್‌ನಲ್ಲಿರುವ ಗುರುದ್ವಾರದ ಮೇಲೆ ಪಾಕಿಸ್ತಾನ ದಾಳಿ ಮಾಡಿತ್ತು. ಈ ಘಟನೆಯಲ್ಲಿ ಕೆಲವು ಸ್ಥಳೀಯ ಸಿಖ್ ಸಮುದಾಯದ ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಡ್ರೋನ್ ಮೂಲಕ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ. ಇದು ಪಾಕಿಸ್ತಾನದ ಸುಳ್ಳು ಅಭಿಯಾನದ ಒಂದು ಭಾಗವಾಗಿದೆ ಎಂದರು.

ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದ ನಂತರ, ಭಾರತೀಯ ಸಶಸ್ತ್ರ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡಿವೆ. ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ. ಲಾಹೋರ್‌ನ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಸೋಫಿಯಾ ಖುರೇಷಿ ತಿಳಿಸಿದರು

ಮೇ 7ರಂದು ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, “ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ಭಾರತ ಹೇಳಿತ್ತು.

ಮೇ 7 ಮತ್ತು 8 ನಡುವೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ ಮತ್ತು ಕ್ಷಿಪಣಿಗಳ ಮೂಲಕ ದಾಳಿ ಮಾಡಲು ಪಾಕಿಸ್ತಾನ ಪ್ರಯತ್ನಿಸಿದೆ. ಎಲ್ಲಾ ದಾಳಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಮೂಲಕ ತಟಸ್ಥಗೊಳಿಸಲಾಗಿದೆ ಎಂದು ವಿಂಗ್ ಕಮಾಂಡ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ದಾಳಿ ಮಾಡಿತ್ತು. ನಮ್ಮದು ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ ದಾಳಿಯಾಗಿತ್ತು ಎಂದು ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುನರುಚ್ಚರಿಸಿದರು.

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...