Homeಎಲೆಮರೆಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು.

- Advertisement -
- Advertisement -

ಎಲೆಮರೆ – 9

ಅರುಣ್ ಜೋಳದಕೂಡ್ಲಿಗಿ

ಹೆಗ್ಗಡದೇವನಕೋಟೆ ಸಮೀಪದ ಮೊತ್ತಹಾಡಿ ಜೇನುಕುರುಬರ ಹಾಡಿ. ಅಲ್ಲಿ ತನ್ನದೇ ಸಮುದಾಯಕ್ಕಾಗಿ ಹೋರಾಟ ರೂಪಿಸಿದ, ಬುಡಕಟ್ಟು ಪರಂಪರೆಯ ಅಪಾರ ಜ್ಞಾನ ಹೊಂದಿದ ಸೋಮಣ್ಣ ಇಂದಿಗೂ ತನ್ನ ಸಮುದಾಯದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಜೇನುಕುರುಬರ ಸೋಮಣ್ಣನ ಬದುಕಿನ ಪಯಣ ತ್ರಾಸದಾಯಕವಾದದ್ದು. 1957 ರಲ್ಲಿ ಜನಿಸಿದ ಸೋಮಣ್ಣ ಸಾಂಪ್ರದಾಯಕ ಶಿಕ್ಷಣ ಪಡೆಯದೆ, ಮನೆಯನ್ನು ಮುತ್ತಿದ್ದ ಬಡತನದ ಬೆಂಕಿಯಲ್ಲಿ ಅರಳಿ ಬಂದದ್ದೇ ಒಂದು ಸಾಹಸ. ತಂದೆ ಕುನ್ನಯ್ಯನಿಗಿದ್ದ ಪಾರಂಪರಿಕ ಜ್ಞಾನವನ್ನು ಜತನದಿಂದ ಕಲಿತ ಸೋಮಣ್ಣ ಕಾಡುಬದುಕಿನ ಎಲ್ಲಾ ಬಗೆಯ ತಿಳಿವು, ಅರಿವುಗಳನ್ನು ಪಡೆಯುತ್ತಲೇ ಪಾರಂಪರಿಕ ಜ್ಞಾನದ ಕಣಜವಾದದ್ದೊಂದು ಸಾಹಸದ ಪಯಣ. ಬಡತನದ ಕಾರಣಕ್ಕೆ ಸ್ಥಳೀಯ ಜಮೀನ್ದಾರರಲ್ಲಿ ಜೀತಕ್ಕಿದ್ದ ಸೋಮಣ್ಣ 1976ರಲ್ಲಿ ಜೀತಕಾರ್ಮಿಕ ವ್ಯವಸ್ಥೆ (ನಿಷೇಧ) ಕಾಯ್ದೆ ಜಾರಿಗೆ ಬಂದಾಗ ಇದರಿಂದ ಮುಕ್ತಿ ಪಡೆದರು. ಆಗ ಸೋಮಣ್ಣಗೆ 19 ವರ್ಷ. ಸೋಮಣ್ಣನಿಗೆ ಸಿಕ್ಕ ಈ ಬಗೆಯ ವೈಯಕ್ತಿಕ ಮುಕ್ತಿಯು ಸಮುದಾಯದ ಮುಕ್ತಿಯೆಡೆಗೆ ಸೆಳೆಯಿತು. ತನ್ನ ಒಡನಾಡಿ ಬಂಧುಗಳಾದ ಬುಡಕಟ್ಟು ಸಮುದಾಯದ ಅಸಂಖ್ಯಾತ ಜನ ಸಂಕಷ್ಟದಲ್ಲಿರುವುದು ಅರಿವಿಗೆ ಬಂತು.

1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದಾಗ, ತಮ್ಮ ಸುತ್ತಮುತ್ತಲಿನ ನೂರಾರು ಬುಡಕಟ್ಟು ಕಾಲನಿಗಳು ಸ್ಥಳಾಂತರಗೊಂಡು ಅನಾಥಪ್ರಜ್ಞೆಯಲ್ಲಿ ಬದುಕಿದ್ದನ್ನೂ, 1974ರಲ್ಲಿ ಕಬಿನಿ ಅಣೆಕಟ್ಟು ನಿರ್ಮಾಣ ಆರಂಭವಾದಾಗ, ದೊಡ್ಡ ಪ್ರಮಾಣದಲ್ಲಿ ಅರಣ್ಯಭೂಮಿ ನಾಶವಾದದ್ದನ್ನೂ ಸೋಮಣ್ಣ ಸ್ವತಃ ನೋಡಿದ್ದರು. ಇದರಿಂದ ಕೇವಲ ನೈಸರ್ಗಿಕ ಅರಣ್ಯ ಮಾತ್ರ ನಾಶವಾಗುವುದಲ್ಲ; ಬದಲಾಗಿ ಬುಡಕಟ್ಟು ಜನರ ಜೀವನ, ಸಂಸ್ಕೃತಿ ಹಾಗೂ ಜ್ಞಾನವೂ ನಾಶವಾಗುತ್ತದೆ ಎನ್ನುವುದನ್ನು ತನ್ನ ಸಮುದಾಯಕ್ಕೆ ಸೋಮಣ್ಣ ಮನವರಿಕೆ ಮಾಡಿಕೊಡತೊಡಗಿದರು.

ಇಂತಹ ಹಾದಿಯಲ್ಲಿ ಸೋಮಣ್ಣನಿಗೆ ತನ್ನವರಿಗೆ ಭೂಮಿ ಸಿಕ್ಕರೆ ಇನ್ನೊಬ್ಬರ ಆಶ್ರಯವಿಲ್ಲದೆ ಬದುಕುತ್ತಾರೆ ಎಂಬ ಕನಸು ಚಿಗುರೊಡೆಯಿತು. ಈ ಕನಸಿನ ಜಾಡುಹಿಡಿದು ಕಳೆದ ಮೂರ್ನಾಲ್ಕು ದಶಕಗಳಿಂದ ಸೋಮಣ್ಣ ಭೂರಹಿತ ಆದಿವಾಸಿಗಳನ್ನು ಒಗ್ಗೂಡಿಸಿದ್ದಾರೆ. ಅಂತೆಯೇ ಸ್ಥಳೀಯ ಚಳವಳಿಗಳ ಸಂಗಾತಿಗಳ ಜೊತೆಗೂಡಿ ಕೂಡುಹೋರಾಟ ಕಟ್ಟಿದ್ದಾರೆ. ಇದರ ಫಲವಾಗಿ ಕಟ್ಟಿದ ರಾಜ್ಯ ಮೂಲನಿವಾಸಿ ವೇದಿಕೆಯ ಅಧ್ಯಕ್ಷನಾಗಿ ಜನಪರ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ನಿರಂತರ ಸಾಂಘಿಕ ಪ್ರಯತ್ನದಿಂದಾಗಿ ಆದಿವಾಸಿಗಳಿಗೆ ಸರಿಸುಮಾರು ಆರು ಸಾವಿರ ಎಕರೆ ಕೃಷಿ ಭೂಮಿ ಸಿಗುವಂತೆ ಮಾಡಿದ್ದಾರೆ. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನಾಗರಹೊಳೆ ಮತ್ತು ಕಾಕನಕೋಟೆ ಅರಣ್ಯ ಪ್ರದೇಶದಿಂದ ಒಕ್ಕಲೆದ್ದ ಆದಿವಾಸಿಗಳನ್ನು ಸೋಮಣ್ಣ ಸಂಘಟಿಸಿ, ಪುನರ್ವಸತಿಗಾಗಿ ಅನೇಕ ಚಳವಳಿಗಳನ್ನು ರೂಪಿಸಿದ್ದಾರೆ. ಹೀಗಾಗಿ ಆದಿವಾಸಿಗಳು ಆತಂಕಕ್ಕೆ ಒಳಗಾದಾಗಲೆಲ್ಲಾ ಅವರುಗಳು ಎದೆಗುಂದಿ ತತ್ತರಿಸಿದಾಗಲೆಲ್ಲಾ ಸೋಮಣ್ಣ ಆದಿವಾಸಿಗಳ ಎಂದೂ ಜತೆಗಾರನಾಗಿ ಶಕ್ತಿ ತುಂಬಿದ್ದಾರೆ.

`ಸೋಮಣ್ಣ ಆದಿವಾಸಿಗಳ ಅಖಂಡ ಪ್ರಜ್ಞೆ, ಹರಿತ ಮುನ್ನೋಟ, ಜಟಿಲ ಮನಸ್ಥಿತಿ ಮತ್ತು ತಪ್ತ ಅಂತರಾಳಗಳನ್ನು ಏಕೀಭವಿಸಿದಂತಿದ್ದಾನೆ. ಅರಣ್ಯಕ್ಕೆ ಸಂಬಂಧಿಸಿದ ಕಾನೂನುಗಳು ಇವರನ್ನು ದಿಕ್ಕಾಪಾಲಾಗಿಸಿವೆ. ಸ್ಥಳೀಯ ಅಧಿಕಾರಸ್ಥ ಸಮುದಾಯಗಳು, ಯಾವ ಒಳನೋಟಗಳು ಇಲ್ಲದ ಸರಕಾರಗಳು, ಎನ್‍ಜಿಓಗಳು ಯಾವೂ ಸೋಮಣ್ಣನ ತಾಯ್ನೆಲವನ್ನು ಆತನಿಗೆ ಉಳಿಸಿಕೊಟ್ಟಿಲ್ಲ’ ಎಂದು ಪ್ರೊ. ಎ.ಎಸ್.ಪ್ರಭಾಕರ್ ಅವರು ಹೇಳುತ್ತಾರೆ.

ಕಾಡುಬದುಕಿನ ಬಗ್ಗೆ ಸೋಮಣ್ಣನ ಮಾತುಗಳನ್ನು ಕೇಳಿಸಿಕೊಂಡರೆ, ಆತ ಆದಿವಾಸಿಗಳ ವಿಷಾದ ಮತ್ತು ಚಿಂತನೆಗಳ ಫಲವಾಗಿ ರೂಪುಗೊಂಡ ಅನುಭಾವಿಯಂತೆ ಕಾಣುತ್ತಾನೆ. ಸರಿಸುಮಾರು ಅರ್ಧ ಶತಮಾನದಿಂದ ಅರಣ್ಯ ಮತ್ತು ಆದಿವಾಸಿಗಳ ಮೇಲೆ ಕಣ್ಣೆದುರು ನಡೆದ ಮತ್ತು ನಡೆಯುತ್ತಲೇ ಇರುವ ‘ನಾಗರಿಕ’ ಜಗತ್ತಿನ ಕ್ರೌರ್ಯವನ್ನು ಆತ ತನ್ನ ಮುಗುಳ್ನಗೆಯಿಂದಲೇ ಎದುರಿಸಿದ್ದಾನೆ. ತನ್ನ ಮೂಲ ನೆಲೆ, ದೈವ, ತನ್ನ ಹಿರೀಕರ ಆತ್ಮಗಳು, ಒಡನಾಡಿದ್ದ ಮರ ಗಿಡ ಹೂವುಗಳು, ಸಹಜೀವನ ನಡೆಸಿದ್ದ ಕಾಡುಪ್ರಾಣಿಗಳು ಇವ್ಯಾವು ಈಗ ಸೋಮಣ್ಣನ ಜೊತೆಗಿಲ್ಲ. ಪ್ರಭುತ್ವ ಈತನನ್ನು ವಂಚಿಸಿದೆ. ದಿಕ್ಕಾಪಾಲಾದ ಆದಿವಾಸಿಗಳು ಕಾಡಂಚಿನ ಪುಟ್ಟ ಜಾಗಗಳಲ್ಲಿ, ನಗರಗಳ ಕೊಳಗೇರಿಗಳಲ್ಲಿ ಬದುಕುತ್ತಿದ್ದಾರೆ. ಒಕ್ಕಲೇಳುವಾಗ ಪ್ರಭುತ್ವ ಕೊಟ್ಟ ಭರವಸೆಗಳು ಭ್ರಮೆಗಳಾಗಿ ಹೋಗಿವೆ. ಪ್ರಾಣಿಗಳೂ ವಾಸಿಸಲು ಯೋಗ್ಯವಾಗಿಲ್ಲದ ಸ್ಥಳಗಳಲ್ಲಿ ಆದಿವಾಸಿಗಳು ಬದುಕುತ್ತಿದ್ದಾರೆ. ಆದಿವಾಸಿಗಳಿಂದ ಎಲ್ಲವನ್ನೂ ಕಿತ್ತುಕೊಂಡು ಪ್ರಭುತ್ವ ಈ ಸಮುದಾಯಗಳನ್ನು ವಂಚಿಸುತ್ತಲೇ ಬಂದಿದೆ. ಇಂದೂ ಸಹ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟಂತೆ ಮಾಡಿ ಸೋಮಣ್ಣನಿಗೆ ವಂಚನೆ ಮಾಡಲಾಗಿದೆ. ಇದು ಕೇವಲ ಸೋಮಣ್ಣನಿಗೆ ಆದ ವಂಚನೆಯಲ್ಲ. ಕರ್ನಾಟಕದ ಆದಿವಾಸಿ ಸಮುದಾಯಗಳಿಗೆ ಆದ ವಂಚನೆಯೇ ಆಗಿದೆ.

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು. ಆಗ ಪ್ರಶಸ್ತಿ ಪ್ರದಾನ ಮಾಡಿದ ದೇವನೂರ ಮಹಾದೇವ `ಇವತ್ತು ಅಂತಃಕರಣದ ಧ್ವನಿ ಮಾತಾಗಿದೆ, ಕರುಳಬಳ್ಳಿ ಸ್ಪಂದಿಸಿದೆ, ಅಂತಃಕರಣದ ಮಿಡಿತಕ್ಕೆ ಬೆಲೆ ಕಟ್ಟಲಾಗದು. ಮೂಲನಿವಾಸಿಗಳ ಉಸಿರಲ್ಲಿ ಮನುಕುಲದ ಉಸಿರಾಟ ಇದೆ, ಇಂತಹ ಬದುಕು ನಾಗರಿಕ ಜಗತ್ತಿನ ದಬ್ಬಾಳಿಕೆಗೆ ನಲುಗಿ ತತ್ತರಿಸಿದೆ. ಮೂಲನಿವಾಸಿಗಳು ಈ ನೆಲದ ಮಾಜಿ ಒಡೆಯರು. ಆದ್ದರಿಂದ ಆದಿವಾಸಿಗಳ ಇಂತಹ ಸಂಗತಿಗಳನ್ನು ಹುಡುಕಿ ಮತ್ತೆ ಬೀಜ ಬಿತ್ತಬೇಕಾಗಿದೆ. ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಅಂತಃಕರಣದ ಸ್ನೇಹಿತರಂತ ನೂರು ಜನ ಈ ರಾಜ್ಯದಲ್ಕಿ ಸಿಕ್ಕಿದರೆ ಸಾಕು ನಾವು ನಮ್ಮ ಕನಸುಗಳನ್ನು ನನಸು ಮಾಡಬಹುದು’ ಎಂದಿದ್ದರು.

ಪ್ರಶಸ್ತಿ ಸ್ವೀಕರಿಸಿದ ಸೋಮಣ್ಣ `ವಿಶಾಲ ಮನಸಿನ ಜನರು ಇವತ್ತು ನನಗೆ ಪ್ರಶಸ್ತಿ ಕೊಟ್ಟಿದ್ದೀರ, ಸರ್ಕಾರ ಪ್ರಶಸ್ತಿ ಕೊಟ್ಟಿದ್ರೂ ಕೂಡ ಇಷ್ಟೊಂದು ಸಂತೋಷ ಆಗ್ತಿರ್ಲಿಲ್ಲ. ನೀವು ಕೊಟ್ಟಿರೋ ಪ್ರಶಸ್ತಿ ಸುಪ್ರೀಂಕೋರ್ಟ್ ತೀರ್ಪಿಗಿಂತಲೂ ದೊಡ್ಡದು. ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ, ರಾಜ್ಯದ ಮೂಲೆಮೂಲೆಯ ಜನರು ಬಂದು ಜಾತಿಧರ್ಮದ ಭೇದವಿಲ್ಲದೆ ನನ್ನನ್ನು ಕಂಡಿದಿರಲ್ವಾ ಇದಕ್ಕಿಂತ ಹೆಚ್ಚು ನನಗೇನು ಬೇಕು? ಎನ್ನುತ್ತಾ ಭಾವುಕರಾದರು. ಸೋಮಣ್ಣನಂತಹವರ ಹಕ್ಕೊತ್ತಾಯದ ಹೋರಾಟಗಳಿಗೆ ಜನಪರ ಚಳವಳಿಗಾರರು, ಅಧ್ಯಯನಕಾರರು, ಪತ್ರಕರ್ತರು, ಚಿಂತಕರು ಜೊತೆಯಾಗಿ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....