Homeಮುಖಪುಟಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

- Advertisement -
- Advertisement -

ತಮಿಳುನಾಡು ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ) ಮತ್ತು ಅದರ ‘ತ್ರಿಭಾಷಾ ಸೂತ್ರ’ವನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ವಜಾಗೊಳಿಸಿದೆ.

ಸಂವಿಧಾನದ 32ನೇ ವಿಧಿಯಡಿಯಲ್ಲಿ ಯಾವುದೇ ರಾಜ್ಯ ಎನ್‌ಇಪಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಹೇಳಿದೆ.

ಜಿ.ಎಸ್ ಮಣಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ:

“ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ, 2020 ಅನ್ನು ಅಳವಡಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬುದು ಒಂದು ಸಂಕೀರ್ಣ ವಿಷಯವಾಗಿದೆ. ಸಂವಿಧಾನದ 32ನೇ ವಿಧಿಯ ಮೂಲಕ ಸುಪ್ರೀಂ ಕೋರ್ಟ್ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಬಹುದು. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ 2020ರಂತಹ ನೀತಿಯನ್ನು ಅಳವಡಿಸಿಕೊಳ್ಳಲು ರಾಜ್ಯವನ್ನು ನೇರವಾಗಿ ಒತ್ತಾಯಿಸಲು ಸಾಧ್ಯವಿಲ್ಲ. ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ರಾಜ್ಯದ ಕ್ರಮ ಅಥವಾ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ನ್ಯಾಯಾಲಯವು ಮಧ್ಯಪ್ರವೇಶಿಸಬಹುದು. ಈ ಅರ್ಜಿಯಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾದ ಬಗ್ಗೆ ಪ್ರಸ್ತಾಪಿಸಿಲ್ಲ. ಹಾಗಾಗಿ, ಈ ಬಗ್ಗೆ ಪರಿಶೀಲಿಸಲು ಸೂಚಿಸುವ ಅಗತ್ಯವಿಲ್ಲ. ಅರ್ಜಿದಾರರು ತಮಿಳುನಾಡು ರಾಜ್ಯದವರಾಗಿರಬಹುದು. ಆದರೆ, ಅವರ ಸ್ವಂತ ಒಪ್ಪಿಗೆಯ ಮೇರೆಗೆ, ಅವರು ಈಗ ನವದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ, ಈ ಅರ್ಜಿಯನ್ನು ವಜಾಗೊಳಿಸಲಾಗಿದೆ.”

“ಪಿಐಎಲ್‌ನ ಮುಖ್ಯ ವಿಷಯವನ್ನು ನ್ಯಾಯಾಲಯವು ಸೂಕ್ತ ಕ್ರಮದಲ್ಲಿ ಪರಿಶೀಲಿಸಬಹುದು” ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.

ಅಲ್ಲದೆ, ತಕ್ಷಣ ವಿಷಯವನ್ನು ಕೈಗೆತ್ತಿಕೊಂಡಿದೆ. ಈ ವೇಳೆ ಖುದ್ದಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರನ್ನು, “ನೀವು ಯಾರು? ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ನಿಮಗೆ ಏಕೆ ಕಾಳಜಿ ಅಥವಾ ಯಾವ ರೀತಿಯ ಕಾಳಜಿ? ಎಂದು ಪೀಠ ಪ್ರಶ್ನಿಸಿದೆ.

ಅದಕ್ಕೆ ಉತ್ತರಿಸಿದ ಅರ್ಜಿದಾರ, “ತಾನು ತಮಿಳುನಾಡಿನವನು, ಈಗ ದೆಹಲಿಯಲ್ಲಿ ನೆಲೆಸಿದ್ದೇನೆ. ಹಿಂದಿ ಕಲಿಸುವುದಿಲ್ಲ ಎಂಬ ತಮಿಳುನಾಡಿನ ನೀತಿಯಿಂದಾಗಿ, ತನಗೆ ಸುಲಭವಾಗಿ ಹಿಂದಿ ಕಲಿಯಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಪಾರ್ದಿವಾಲಾ ಅವರು, “ಈಗ ದೆಹಲಿಯಲ್ಲಿ ಇದ್ದೀರಲ್ವ ಹಿಂದಿ ಕಲಿಯಿರಿ” ಎಂದು ಹೇಳಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಎನ್‌ಇಪಿಗೆ ಜಾರಿಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2020ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿಯನ್ನು (ಎನ್‌ಇಪಿ) ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಎನ್‌ಇಪಿಯ ತ್ರಿಭಾಷ ಸೂತ್ರ ಹಿಂದಿ ಹೇರಿಕೆಯ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...