Homeಮುಖಪುಟಕೇಂದ್ರದಿಂದ ನಿರ್ಬಂಧ ಆರೋಪ: 'ದಿ ವೈರ್' ಸಂಪಾದಕರು ಹೇಳಿದ್ದೇನು?

ಕೇಂದ್ರದಿಂದ ನಿರ್ಬಂಧ ಆರೋಪ: ‘ದಿ ವೈರ್’ ಸಂಪಾದಕರು ಹೇಳಿದ್ದೇನು?

- Advertisement -
- Advertisement -

‘ರಫೇಲ್ ಜೆಟ್’ ಕುರಿತ ವರದಿಯ ಬಗ್ಗೆ ದೂರು ಬಂದ ಹಿನ್ನೆಲೆ, ತಾಂತ್ರಿಕ ಮಿತಿಯ ಕಾರಣ ಭಾರತದಲ್ಲಿ ನಮ್ಮ ವೆಬ್‌ಸೈಟ್ ನಿರ್ಬಂಧಿಸಲಾಗಿತ್ತು ಎಂಬುವುದಾಗಿ ಕೇಂದ್ರ ಸರ್ಕಾರ ಮೇ 9, ಶುಕ್ರವಾರ ಹೇಳಿದೆ ಎಂದು ಸ್ವತಂತ್ರ ಸುದ್ದಿ ಸಂಸ್ಥೆ ‘ದಿ ವೈರ್’ನ ಸಂಪಾದಕರು ತಿಳಿಸಿದ್ದಾರೆ.

ವೆಬ್‌ಸೈಟ್‌ ನಿರ್ಬಂಧಕ್ಕೆ ಕಾರಣವಾದ ವರದಿಯನ್ನು ಪ್ರಸ್ತುತ ತೆಗೆದು ಹಾಕಿದ್ದೇವೆ. ಆದರೂ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಈ ಅಸಂವಿಧಾನಿಕ ದಾಳಿಗೆ ಪರಿಹಾರಗಳನ್ನು ಹುಡುಕುತ್ತೇವೆ ಎಂದು ದಿ ವೈರ್‌ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಮೇ 9, ಶುಕ್ರವಾರದಂದು ಭಾರತದಲ್ಲಿ ದಿ ವೈರ್ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿದ್ಧಾರ್ಥ್ ವರದರಾಜನ್ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (ಎಂಇಐಟಿವೈ) ಪತ್ರ ಬರೆದು ವೆಬ್‌ಸೈಟ್ ಅನ್ನು ಏಕೆ ನಿರ್ಬಂಧಿಸಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು.

ಅದಕ್ಕೆ ಉತ್ತರಿಸಿದ್ದ ಎಂಐಬಿ, ತಾಂತ್ರಿಕ ಮಿತಿಗಳಿಂದಾಗಿ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿದೆ. http ವೆಬ್‌ಸೈಟ್‌ಗಳಲ್ಲಿ ನಿರ್ದಿಷ್ಟ ಉಪ-ಪುಟಗಳನ್ನು ಅಲ್ಲ, ಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ನಿರ್ಬಂಧಕ್ಕೆ ಕಾರಣವಾದ ಕಂಟೆಂಟ್ ಬಗ್ಗೆ ಕೈಗೊಂಡ ಕ್ರಮಗಳನ್ನು ತಿಳಿಸಿ, ಅದು ನಮಗೆ ನಿರ್ಬಂಧ ತೆಗೆದು ಹಾಕಲು ಸಹಕಾರಿಯಾಗುತ್ತದೆ ಎಂಬುವುದಾಗಿ ಹೇಳಿದೆ ಎಂದು ಸಿದ್ದಾರ್ಥ್ ತಿಳಿಸಿದ್ದಾರೆ.

ವೆಬ್‌ಸೈಟ್‌ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವುದು ನಮ್ಮ ಆದ್ಯತೆಯಾಗಿತ್ತು. ಹಾಗಾಗಿ, ಸರ್ಕಾರದ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಹಾಗಾಗಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗೆ ಭಾರತದ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳುವ ಹಕ್ಕನ್ನು ನಮ್ಮಲ್ಲೇ ಉಳಿಸಿಕೊಂಡು, ಮೇ 9, ಶುಕ್ರವಾರ ರಾತ್ರಿ 10.40ಕ್ಕೆ ನಮ್ಮ ವರದಿಯನ್ನು ಸಾರ್ವಜನಿಕರಿಗೆ ಕಾಣದಂತೆ ತೆಗೆದು ಹಾಕಿರುವುದಾಗಿ ಸರ್ಕಾರಕ್ಕೆ ತಿಳಿಸಿದೆವು ಎಂದಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಾವು ಎಂಐಬಿಗೆ ತಿಳಿಸಿದ್ದೇವೆ. ಏಕೆಂದರೆ ಎಂಐಬಿ ಮೊದಲು ನಮಗೆ ನೋಟಿಸ್ ನೀಡಿ, ನಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕಾಗಿತ್ತು. ವರದಿಯನ್ನು ತೆಗೆದು ಹಾಕುವಂತೆ ಸರ್ಕಾರದ ನೀಡಿದ್ದ ಸೂಚನೆಯನ್ನು ಪಾಲಿಸಲು ನಾವು ನಿರಾಕರಿಸಿದ್ದರೆ ಮಾತ್ರ ನಮ್ಮ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಬಹುದಿತ್ತು ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಮೇ 8ರಂದು ನಾವು ರಫೆಲ್ ಕುರಿತ ವರದಿ ಪ್ರಕಟಿಸಿದ್ದೆವು. ಅದಕ್ಕೂ ಕನಿಷ್ಠ 12 ಗಂಟೆಗಳ ಮೊದಲು ಸಿಎನ್‌ಎನ್‌ ಈ ಬಗ್ಗೆ ವರದಿ ಮಾಡಿತ್ತು. ಅದು ಈಗಲೂ ಇದೆ. ಭಾರತದಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಮ್ಮ ಸುದ್ದಿಯನ್ನು ಮಾತ್ರ ಅಳಿಸಿಹಾಕಲು ಮತ್ತು ಪ್ರಕಟಗೊಂಡ 24 ಗಂಟೆಗಳ ನಂತರವೂ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಸರ್ಕಾರ ಏಕೆ ಬಯಸಿತ್ತು ಎಂಬುವುದು ನನಗೆ ಅರ್ಥವಾಗುತ್ತಿಲ್ಲ. ನಿರ್ಬಂಧ ವಿಧಿಸುವ ಮುನ್ನ ನಮಗೆ ಯಾವುದೇ ಸೂಚನೆ ನೀಡಿರಲಿಲ್ಲ. ಅಲ್ಲದೆ, ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿತ್ತು ಎಂದು ಸಿದ್ದಾರ್ಥ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲೂ ಕೂಡ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿತ್ತು. ತುರ್ತು ಅಧಿಕಾರಗಳನ್ನು ಚಲಾಯಿಸುವಾಗಲೂ ಕೂಡ ಮೊದಲ ಹೆಜ್ಜೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಸಂಬಂಧಪಟ್ಟ ಪಕ್ಷಕ್ಕೆ ನಿರ್ದೇಶನ ನೀಡುವುದಾಗಿದೆ. ನಾವು ಪತ್ರ ಬರೆದ ನಂತರವೂ ಏಳು ಗಂಟೆಗಳ ಕಾಲ ಎಂಐಬಿಉತ್ತರಿಸಿರಲಿಲ್ಲ ಎಂದು ಸಿದ್ದಾರ್ಥ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ರಚಿಸಲಾದ ಅಂತರ-ಇಲಾಖೆಯ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮತ್ತು ಸ್ಪಷ್ಟೀಕರಣಗಳನ್ನು ನೀಡಲು ದಿ ವೈರ್‌ಗೆ ಅವಕಾಶ ನೀಡಲಾಗುವುದು ಎಂದು ಎಂಐಬಿ ಪತ್ರದಲ್ಲಿ ತಿಳಿಸಿದೆ ಎಂದು ಸಿದ್ದಾರ್ಥ್ ಮಾಹಿತಿ ನೀಡಿದ್ದಾರೆ.

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....