ಜನಸಂಖ್ಯೆ ಆಧಾರದ ಮೇಲೆ ಚುನಾವಣಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿದರೆ, ಜನಸಂಖ್ಯೆ ಬೆಳವಣಿಗೆಯನ್ನು ನಿಯಂತ್ರಿಸಿರುವ ದಕ್ಷಿಣ ಭಾರತಕ್ಕೆ ಸಂಸತ್ತಿನಲ್ಲಿ ಸೋಲಾಗಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ಹೇಳಿರುವುದಾಗಿ barandbench.com ವರದಿ ಮಾಡಿದೆ.
ದಕ್ಷಿಣ ಭಾರತದ ಜನಸಂಖ್ಯೆ ಕಡಿಮೆಯಾಗುತ್ತಿದ್ದರೆ, ಉತ್ತರ ಭಾರತದಲ್ಲಿ ಕುಟುಂಬಗಳು ದೊಡ್ಡದಾಗುತ್ತಿವೆ ಎಂದು ಕೋರ್ಟ್ ಹೇಳಿದೆ.
ಸಂತಾನೋತ್ಪತ್ತಿ ಚಿಕಿತ್ಸೆ ವಿಫಲಗೊಂಡ ಬಳಿಕ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಹಕ್ಕನ್ನು ಕೋರಿ ಕೆಲವು ಪೋಷಕರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.
ಒಂದು ಪ್ರಕರಣದಲ್ಲಿ ಈಗಾಗಲೇ ಸಹಜ ಹೆರಿಗೆಯ ಮೂಲಕ ಮಗುವನ್ನು ಹೊಂದಿರುವ ಪೋಷಕರು ಎರಡನೇ ಮಗುವನ್ನು ಪಡೆಯಲು ಪರ್ಯಾಯ ಮಾರ್ಗವನ್ನು ಅನ್ವೇಷಿಸುತ್ತಿರುವುದನ್ನು ಗಮನಿಸಿದ ನ್ಯಾ.ನಾಗರತ್ನ ಅವರು, “ಒಂದು ಮಗುವನ್ನು ನಾವು ಅರ್ಥ ಮಾಡಿಕೊಳ್ಳಬಲ್ಲೆವು. ಆದರೆ, ಮೊದಲ ಮಗು ಸಾಮಾನ್ಯವಾಗಿ ಜನಿಸಿದೆ ಮತ್ತು ಈಗ ಇನ್ ವಿಟ್ರೋ ಫರ್ಟಿಲೈಸೇಷನ್ (ಐವಿಎಫ್) ಮೂಲಕ ಎರಡನೇ ಮಗು? ದಕ್ಷಿಣ ಭಾರತವನ್ನು ನೋಡಿ, ಅಲ್ಲಿ ಕುಟುಂಬಗಳ ಗಾತ್ರ ಕಡಿಮೆಯಾಗುತ್ತಿದೆ. ಕ್ಷೇತ್ರ ಪುನರ್ವಿಂಗಡಣೆ ವಿಷಯದಲ್ಲಿ ಇದೇ ಸಮಸ್ಯೆಯಾಗಿರುವುದು. ದಕ್ಷಿಣ ಭಾರತದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಉತ್ತರ ಭಾರತದಲ್ಲಿ ಕುಟುಂಬಗಳು ದೊಡ್ಡದಾಗಿ ಬೆಳೆಯುತ್ತಿವೆ” ಎಂದು ಹೇಳಿದ್ದಾರೆ.
ಈ ನಡುವೆ, ಅರ್ಜಿದಾರರ ಪರ ವಕೀಲರು, ಐವಿಎಫ್ ಮೇಲೆ ಯಾವುದೇ ನಿರ್ಬಂಧವಿಲ್ಲದಿದ್ದರೂ, ಬಾಡಿಗೆ ತಾಯತ್ತನದ ಮೇಲೆ ನಿರ್ಬಂಧವಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಚಿತ್ರರಂಗದ ಜನರಿಂದಾಗಿ ಬಾಡಿಗೆ ತಾಯ್ತನವು ಫ್ಯಾಷನ್ ಆಗಿಬಿಟ್ಟಿದೆ. ಸಂವಿಧಾನದ ವಿಧಿ 21 ಕೂಡ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿದೆ. ಈ ಚಿತ್ರರಂಗದ ಜನರಿಂದಾಗಿ ಇದು ( ಬಾಡಿಗೆ ತಾಯ್ತನ) ಫ್ಯಾಷನ್ ಆಗಿದೆ ಎಂದು ನ್ಯಾ.ನಾಗರತ್ನ ಹೇಳಿದ್ದಾರೆ.
ಅಂತಿಮವಾಗಿ, ನ್ಯಾಯಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿದೆ.
ಎನ್ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್


