Homeಮುಖಪುಟನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

ನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

- Advertisement -
- Advertisement -

ನಮ್ಮದೆ ಸರ್ಕಾರವನ್ನು ಟೀಕಿಸುವುದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಭಾರತ ಪಾಕಿಸ್ತಾನ ಸಂಘರ್ಷದ ನಡುವೆ ನೆರೆಯ ದೇಶದ ಸೇನಾ ಅಧಿಕಾರಿಯ ಹೇಳಿಕೆಗಳನ್ನು ಟೀಕಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ನಮ್ಮದೆ ಸರ್ಕಾರದ ಟೀಕೆ

“ಭಾರತದ ಜನರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಪಾಕಿಸ್ತಾನ ಸೇನಾ ವಕ್ತಾರರು ಬಹಳ ಖುಷಿ ಪಡುತ್ತಿದ್ದಾರೆ. ನಾಗರಿಕರು ತಮ್ಮದೇ ಸರ್ಕಾರವನ್ನು ಟೀಕಿಸುವುದನ್ನು ನೋಡುವಾಗ ಪಾಕಿಸ್ತಾನಕ್ಕೆ ಆಶ್ಚರ್ಯವಾಗಬಹುದು. ಆದರೆ ಅದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ. ಅದರ ಬಗ್ಗೆ ಪಾಕಿಸ್ತಾನದ ಪರಿಚಯವಿಲ್ಲದಿರುವುದು ಆಶ್ಚರ್ಯಕರವಲ್ಲ” ಮಿಶ್ರಿ ಶನಿವಾರ ನಡೆದ ಸರ್ಕಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಭಾರತ ಸರ್ಕಾರದ ಕ್ರಮಗಳನ್ನು ಟೀಕಿಸಿದ ಹಲವಾರು ಭಾರತೀಯರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಮಿಸ್ರಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡ ಪಾಕ್: ಮಿಸ್ರಿ

ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನ ನಡೆಸುತ್ತಿರುವ ದಾಳಿಯಗಳನ್ನು ಮಿಶ್ರಿ ಖಂಡಿಸಿದ್ದಾರೆ. ಭಾರತದಲ್ಲಿ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವನ್ನು ಬಿತ್ತಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕ ಮೂಲಸೌಕರ್ಯ ಮತ್ತು ಜನರನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿದೆ” ಎಂದು ಮಿಶ್ರಿ ಹೇಳಿದ್ದಾರೆ

ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು ನಗರಗಳಲ್ಲಿ ಬೆಳಿಗ್ಗೆ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ. ಮಧ್ಯಾಹ್ನದ ಸುಮಾರಿಗೆ ಶ್ರೀನಗರದಲ್ಲಿ ಮತ್ತೆ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ಅದು ಹೇಳಿದೆ.

“ಇಂದು ಬೆಳಿಗ್ಗೆ, ಪಾಕಿಸ್ತಾನವು ರಾಜೌರಿ ಪಟ್ಟಣದ ಮೇಲೆ ಶೆಲ್ ದಾಳಿ ನಡೆಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ. ಅಲ್ಲಿ ನಾಗರಿಕ ಸಾವುನೋವುಗಳು ಮತ್ತು ಹಾನಿಯನ್ನು ಹೆಚ್ಚಿಸಿದೆ” ಎಂದು ಮಿಸ್ರಿ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಭಾರತ ನಾಶಪಡಿಸಿದ ಒಂದು ದಿನದ ನಂತರ ಶುಕ್ರವಾರ ಮತ್ತು ಶನಿವಾರ ಭಾರತ ಡ್ರೋನ್ ದಾಳಿ ಮತ್ತು ಪ್ರತಿದಾಳಿ ನಡೆಸಿದೆ. ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಭಾರತವು ಆಪರೇಷನ್ ಸಿಂಧೂರ್ ಎಂಬ ದಾಳಿ ನಡೆಸಿತ್ತು. ನಮ್ಮದೆ ಸರ್ಕಾರದ ಟೀಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...