Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...