Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...