Homeಮುಖಪುಟದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

ದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

- Advertisement -
- Advertisement -

ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ದ್ವೇಷ ಭಾಷಣ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಗ್ರಾಮದ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಮ್ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿ, ವಿಷಾದ ಪತ್ರ ಬರೆದಿದೆ.

ಶ್ರೀ ಗೋಪಾಲಕೃಷ್ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಅಧ್ಯಕ್ಷರು ಸರಳೀಕಟ್ಟೆ ಮುಸ್ಲಿಮ್ ಒಕ್ಕೂಟದವರಿಗೆ ಪತ್ರ ಬರೆದು ದ್ವೇಷ ಭಾಷಣದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹಿಂದಿನ ಹಾಗೆಯೇ ಸೌಹಾರ್ದಯುತವಾದ ಬದುಕು ನಡೆಯಬೇಕಾಗಿದೆ. ಮುಸ್ಲಿಮರ ಸಹಕಾರವನ್ನು ದೇವಸ್ಥಾನ ಆಡಳಿತ ಮಂಡಳಿ ಸ್ವಾಗತಿಸುತ್ತದೆ. ಮುಂದೆಯೂ ಎಲ್ಲಾ ಸಮುದಾಯದವರು ಒಬ್ಬರಿಗೊಬ್ಬರು ಸಹಕಾರದೊಂದಿಗೆ ಬದುಕಬೇಕು ಎಂಬುದು ನಮ್ಮ ಆಶಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಸ್ಪಷ್ಠೀಕರಣ ನೀಡುವ ಸಲುವಾಗಿ ಹಿಂದೂ – ಮುಸ್ಲಿಮ್ ಮುಖಂಡರ ಸಭೆ ನಡೆಸಲಾಯಿತು. ಸಭೆಯಲ್ಲಿ ಘಟನೆ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿತು ಎನ್ನಲಾಗಿದೆ.

ಸ್ಥಳೀಯ ಮುಸ್ಲಿಮರು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಎಲ್ಲಾ ರೀತಿಯ ಸಹಾಯ ಸಹಕಾರಗಳನ್ನು ಮಾಡಿದ್ದರು. ಮುನೀರ್ ಎಂಬವರು ಮರವನ್ನು ನೀಡಿದ್ದರು, ಅಬ್ಬಾಸ್ ಎಂಬವರು ವೇದಿಕೆ ನಿರ್ಮಿಸಲು ಸ್ಥಳವನ್ನು ನೀಡಿದ್ದರು, ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಟಿ.ಎಚ್.ಉಸ್ತಾದರ ಮಕ್ಕಳ ಒಡೆತನದ ಜಮೀನಿನಲ್ಲಿ ನೀಡಲಾಗಿತ್ತು, ನೀರಿನ ವ್ಯವಸ್ಥೆಗೆ ಮತ್ತು ಅನ್ನ ಸಂತರ್ಪಣೆಗೆ ಮುಸ್ಲಿಮರ ಜಾಗವನ್ನೇ ಬಳಸಲಾಗಿತ್ತು. ಇದಲ್ಲದೆ ಆರ್ಥಿಕವಾಗಿಯೂ ಗ್ರಾಮದ ಮುಸ್ಲಿಮರು ದೇವಸ್ಥಾನಕ್ಕೆ ಸಹಾಯವನ್ನು ನೀಡಿದ್ದರು. ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಸ್ಥಳೀಯ ಮುಸ್ಲಿಮರು ಬ್ಯಾನರ್ ಗಳನ್ನು ಅಳವಡಿಸಿದ್ದರ ಬಗ್ಗೆ ಮುಸ್ಲಿಮ್ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಗಮನ ಸೆಳೆದರು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

 

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...