Homeಮುಖಪುಟದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

ದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

- Advertisement -
- Advertisement -

ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ದ್ವೇಷ ಭಾಷಣ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಗ್ರಾಮದ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಮ್ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿ, ವಿಷಾದ ಪತ್ರ ಬರೆದಿದೆ.

ಶ್ರೀ ಗೋಪಾಲಕೃಷ್ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಅಧ್ಯಕ್ಷರು ಸರಳೀಕಟ್ಟೆ ಮುಸ್ಲಿಮ್ ಒಕ್ಕೂಟದವರಿಗೆ ಪತ್ರ ಬರೆದು ದ್ವೇಷ ಭಾಷಣದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹಿಂದಿನ ಹಾಗೆಯೇ ಸೌಹಾರ್ದಯುತವಾದ ಬದುಕು ನಡೆಯಬೇಕಾಗಿದೆ. ಮುಸ್ಲಿಮರ ಸಹಕಾರವನ್ನು ದೇವಸ್ಥಾನ ಆಡಳಿತ ಮಂಡಳಿ ಸ್ವಾಗತಿಸುತ್ತದೆ. ಮುಂದೆಯೂ ಎಲ್ಲಾ ಸಮುದಾಯದವರು ಒಬ್ಬರಿಗೊಬ್ಬರು ಸಹಕಾರದೊಂದಿಗೆ ಬದುಕಬೇಕು ಎಂಬುದು ನಮ್ಮ ಆಶಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಸ್ಪಷ್ಠೀಕರಣ ನೀಡುವ ಸಲುವಾಗಿ ಹಿಂದೂ – ಮುಸ್ಲಿಮ್ ಮುಖಂಡರ ಸಭೆ ನಡೆಸಲಾಯಿತು. ಸಭೆಯಲ್ಲಿ ಘಟನೆ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿತು ಎನ್ನಲಾಗಿದೆ.

ಸ್ಥಳೀಯ ಮುಸ್ಲಿಮರು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಎಲ್ಲಾ ರೀತಿಯ ಸಹಾಯ ಸಹಕಾರಗಳನ್ನು ಮಾಡಿದ್ದರು. ಮುನೀರ್ ಎಂಬವರು ಮರವನ್ನು ನೀಡಿದ್ದರು, ಅಬ್ಬಾಸ್ ಎಂಬವರು ವೇದಿಕೆ ನಿರ್ಮಿಸಲು ಸ್ಥಳವನ್ನು ನೀಡಿದ್ದರು, ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಟಿ.ಎಚ್.ಉಸ್ತಾದರ ಮಕ್ಕಳ ಒಡೆತನದ ಜಮೀನಿನಲ್ಲಿ ನೀಡಲಾಗಿತ್ತು, ನೀರಿನ ವ್ಯವಸ್ಥೆಗೆ ಮತ್ತು ಅನ್ನ ಸಂತರ್ಪಣೆಗೆ ಮುಸ್ಲಿಮರ ಜಾಗವನ್ನೇ ಬಳಸಲಾಗಿತ್ತು. ಇದಲ್ಲದೆ ಆರ್ಥಿಕವಾಗಿಯೂ ಗ್ರಾಮದ ಮುಸ್ಲಿಮರು ದೇವಸ್ಥಾನಕ್ಕೆ ಸಹಾಯವನ್ನು ನೀಡಿದ್ದರು. ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಸ್ಥಳೀಯ ಮುಸ್ಲಿಮರು ಬ್ಯಾನರ್ ಗಳನ್ನು ಅಳವಡಿಸಿದ್ದರ ಬಗ್ಗೆ ಮುಸ್ಲಿಮ್ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಗಮನ ಸೆಳೆದರು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

 

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...