Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...