Homeಮುಖಪುಟ'ಕರಾಚಿ ಬೇಕರಿ' ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

‘ಕರಾಚಿ ಬೇಕರಿ’ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಹೆಸರು ಬದಲಿಸಲು ಒತ್ತಡ

- Advertisement -
- Advertisement -

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಹೈದರಾಬಾದ್‌ನ ‘ಕರಾಚಿ ಬೇಕರಿ’ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಕಾರ್ಯಕರ್ತರ ಗುಂಪು ‘ಭಾರತ್ ಮಾತಾಕಿ ಜೈ’ ಎಂಬ ಘೋಷಣೆ ಕೂಗುತ್ತಾ ಹೈದರಾಬಾದ್‌ನ ಶಂಶಾಬಾದ್‌ನಲ್ಲಿರುವ ಕರಾಚಿ ಬೇಕರಿಯ ಶಾಖೆ ಮೇಲೆ ದಾಳಿ ಮಾಡಿದ್ದಾರೆ. ಮೇ. 10, ಶನಿವಾರ ಈ ಘಟನೆ ನಡೆದಿದೆ.

ಪಾಕಿಸ್ತಾನದ ನಗರ ಕರಾಚಿಯ ಹೆಸರನ್ನು ಹೊಂದಿರುವ ಕರಾಚಿ ಬೇಕರಿಯನ್ನು 1953ರಲ್ಲಿ ಖಾನ್‌ಚಂದ್ ರಾಮನಾನಿ ಎಂಬ ಸಿಂಧಿ ಹಿಂದೂ ವ್ಯಕ್ತಿ ಸ್ಥಾಪಿಸಿದರು, ಅವರು ದೇಶ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದವರು. ಪ್ರಸ್ತುತ ರಾಮನಾನಿ ಅವರ ಮೊಮ್ಮಕ್ಕಳಾದ ಹರೀಶ್ ಮತ್ತು ರಾಜೇಶ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ಕೇಸರಿ ಶಾಲು ಧರಿಸಿ, ಕೈಯಲ್ಲಿ ಭಾರತದ ರಾಷ್ಟ್ರಧ್ವಜ ಹಿಡಿದುಕೊಂಡ ಪುರುಷರ ಗುಂಪೊಂದು ಕೋಲುಗಳಿಂದ ‘ಕರಾಚಿ ಬೇಕರಿ’ಯ ಸೈನ್‌ ಬೋರ್ಡ್‌ಗೆ ಹೊಡೆದು ಹಾನಿಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ.

“ಭಾರತ್ ಮಾತಾಕಿ ಜೈ”, “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಜೈ ಜವಾನ್” ಎಂಬ ಘೋಷಣೆಗಳನ್ನು ದಾಳಿ ನಡೆಸಿದವರು ಕೂಗಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ (ಆರ್‌ಜಿಐ) ವಿಮಾನ ನಿಲ್ದಾಣ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ಬಾಲರಾಜು, “ಬೇಕರಿ ಮೇಲೆ ದಾಳಿ ಮಾಡಿದವರು ಬಿಜೆಪಿ ಬೆಂಬಲಿಗರು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆಚ್ಚಿನ ದಾಳಿ ತಡೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 126 ಮತ್ತು ಆಸ್ತಿ ಹಾನಿಗೆ ಸಂಬಂಧಿಸಿದ ಇತರ ಸೆಕ್ಷನ್‌ಗಳಡಿಯಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕರಾಚಿ ಬೇಕರಿ’ಯನ್ನು ಬಲಪಂಥೀಯರು ಈ ಹಿಂದೆಯೂ ಗುರಿ ಮಾಡಿದ್ದರು. ಪಾಕಿಸ್ತಾನದ ಹೆಸರನ್ನು ಬದಲಾಯಿಸುವಂತೆ ಅದರ ಮಾಲೀಕರಿಗೆ ಒತ್ತಡ ಹೇರುತ್ತಿದ್ದರು. ಇತ್ತೀಚೆಗೆ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾದ ಬಳಿಕ, ತಮ್ಮ ಸಂಸ್ಥೆಗೆ ರಕ್ಷಣೆ ಒದಗಿಸುವಂತೆ ಕರಾಚಿ ಬೇಕರಿಯ ಮಾಲೀಕರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಜಿತೇಂದರ್ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಬೇಕರಿ ಮೇಲೆ ದಾಳಿ ನಡೆದಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಸೃಷ್ಟಿಯಾದ ಬಳಿಕ ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೇಳಿಕೆಯೊಂದನ್ನು ನೀಡಿದ್ದ ಕರಾಚಿ ಬೇಕರಿ, “ನಾವು ಹೆಮ್ಮೆಯಿಂದ ಭಾರತೀಯರು. ನಮ್ಮ ಹೆಸರು ನಮ್ಮ ಇತಿಹಾಸದ ಭಾಗವಾಗಿದೆ, ನಮ್ಮ ರಾಷ್ಟ್ರೀಯತೆಯಲ್ಲ” ಎಂದು ಹೇಳಿಕೊಂಡಿತ್ತು.

 

View this post on Instagram

 

A post shared by Karachi Bakery (@karachibakery)

ಹೈದರಾಬಾದ್ ಸೇರಿದಂತೆ ತೆಲಂಗಾಣದ ಪ್ರಮುಖ ನಗರಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಿಸಿರುವ ಕರಾಚಿ ಬೇಕರಿ, ಬಿಸ್ಕೇಟ್‌ ಮತ್ತು ಇತರ ಕರಿದ ತಿಂಡಿಗಳಿಗೆ ಪ್ರಸಿದ್ದಿಯನ್ನು ಪಡೆದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಹೈದರಾಬಾದ್‌ನ ಬಲಪಂಥೀಯ ಗುಂಪುಗಳ ಸದಸ್ಯರು ಹಲವಾರು ಕರಾಚಿ ಬೇಕರಿ ಮಳಿಗೆಗಳ ಸೈನ್‌ಬೋರ್ಡ್‌ಗಳಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಹಾಕುತ್ತಿದ್ದಾರೆ. ವಿಶಾಖಪಟ್ಟಣಂನ ಬಲಪಂಥೀಯ ಗುಂಪು ಕೂಡ ಮೇ 6 ರಂದು ಅಂಗಡಿಯೊಂದರಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು, ಸಂಸ್ಥೆಯು ಕರಾಚಿ ಎಂಬ ಹೆಸರನ್ನು ಬದಲಾಯಿಸಲು ಒತ್ತಾಯಿಸಿತ್ತು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕುರಿತ ಟ್ರೋಲ್ ವಿರೋಧಿಸಿದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...