Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...