Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...