Homeಮುಖಪುಟಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಒಂದು ದಿನದ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ. ಕದನ ವಿರಾಮದ

ಮೇ 10 ರಂದು ಬರೆದ ತಮ್ಮ ಪತ್ರದಲ್ಲಿ, ಹಿರಿಯ ಕಾಂಗ್ರೆಸ್ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕೆಂಬ ವಿರೋಧ ಪಕ್ಷದ ಸರ್ವಾನುಮತದ ವಿನಂತಿಯನ್ನು ಪುನರುಚ್ಚರಿಸಿದ್ದಾರೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮದ ಬಗ್ಗೆ ಚರ್ಚಿಸುವುದು ಪ್ರಮುಖವಾಗಿದೆ. ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಇದು ಒಂದು ಅವಕಾಶವಾಗಿದೆ” ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 28 ರಂದು ಪ್ರಧಾನಿಯವರನ್ನು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ವಿನಂತಿಸಿ ಬರೆದ ತನ್ನ ಮತ್ತು ರಾಹುಲ್ ಗಾಂಧಿಯವರ ಪತ್ರಗಳನ್ನು ನೆನಪಿಸಿಕೊಂಡಿದ್ದಾರೆ. “ರಾಜ್ಯಸಭೆಯಲ್ಲಿ ವಿಪಕ್ಷ ನಾಯಕನಾಗಿ, ನಾನು ಈ ವಿನಂತಿಯನ್ನು ಬೆಂಬಲಿಸಿ ಬರೆಯುತ್ತಿದ್ದೇನೆ. ನೀವು ಒಪ್ಪುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದಕ್ಕೂ ಮೊದಲು, ಕಾಶ್ಮೀರ ಸಮಸ್ಯೆಯನ್ನು ಅಂತರರಾಷ್ಟ್ರೀಯೀಕರಣಗೊಳಿಸುವ ಪ್ರಯತ್ನಗಳನ್ನು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತೀವ್ರವಾಗಿ ಆಕ್ಷೇಪಿಸಿದ್ದಾರೆ. ವಿಶೇಷ ಸಂಸತ್ತಿನ ಅಧಿವೇಶನ ಮತ್ತು ಸರ್ವಪಕ್ಷ ಸಭೆಗಾಗಿ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರುವ ಅವರು, ಭಾರತ ಮತ್ತು ಪಾಕಿಸ್ತಾನಗಳು ಅದನ್ನು ಘೋಷಿಸುವ ಮೊದಲೆ ಸರ್ಕಾರವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸಿ ಅದನ್ನು ಘೋಷಿಸಿರುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಸಮಸ್ಯೆಯು ದ್ವಿಪಕ್ಷೀಯ ವಿಷಯವಾಗಿದ್ದು, ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಸ್ವೀಕಾರಾರ್ಹವಲ್ಲ ಎಂದು ಸಚಿನ್ ಪೈಲಟ್ ಹೇಳಿದ್ದಾರೆ. ಜೊತೆಗೆ ಎರಡೂ ದೇಶಗಳು ತಟಸ್ಥ ಸ್ಥಳದಲ್ಲಿ ಸಭೆ ಸೇರುತ್ತವೆ ಎಂಬ ಅಮೆರಿಕದ ಅಧಿಕಾರಿಗಳ ಹೇಳಿಕೆಯನ್ನು ಅವರು ಸಹ ಪ್ರಶ್ನಿಸಿದ್ದಾರೆ. ಕದನ ವಿರಾಮದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...