Homeಮುಖಪುಟವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಪುತ್ರಿಯ ಆನ್‌ಲೈನ್ ಟ್ರೋಲ್ | ರಾಷ್ಟ್ರೀಯ ಮಹಿಳಾ ಆಯೋಗ ಖಂಡನೆ

- Advertisement -
- Advertisement -

ಮೇ 10 ರಂದು ಭಾರತ ಮತ್ತು ಪಾಕಿಸ್ತಾನವು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಒಪ್ಪಂದ ಮಾಡಿಕೊಂಡ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅವರ ಕುಟುಂಬ ಮತ್ತು ವಿಶೇಷವಾಗಿ ಅವರ ಮಗಳ ಮೇಲೆ ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ನಡೆಸುತ್ತಿರುವ ಆನ್‌ಲೈನ್ ಟ್ರೋಲಿಂಗ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಮಿಸ್ರಿ ಅವರ ಮಗಳ ವೈಯಕ್ತಿಕ ಸಂಪರ್ಕ ವಿವರಗಳನ್ನು ಹಂಚಿಕೊಳ್ಳುವುದನ್ನು ಖಂಡಿಸಿದ್ದಾರೆ. ಇದು “ತೀವ್ರ ಬೇಜವಾಬ್ದಾರಿ ಕೃತ್ಯ” ಮತ್ತು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ “ಗೌಪ್ಯತೆಯ ಗಂಭೀರ ಉಲ್ಲಂಘನೆ” ಎಂದು ಕರೆದಿದೆ.

ಮಿಸ್ರಿಯಂತಹ ಹಿರಿಯ ನಾಗರಿಕ ಸೇವಕರ ಕುಟುಂಬ ಸದಸ್ಯರ ಮೇಲಿನ ವೈಯಕ್ತಿಕ ದಾಳಿಗಳು ಸ್ವೀಕಾರಾರ್ಹವಲ್ಲ ಮಾತ್ರವಲ್ಲದೆ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ರಹತ್ಕರ್ ಒತ್ತಿ ಹೇಳಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಥಳಗಳಲ್ಲಿ ಸಂಯಮ ಮತ್ತು ಗೌರವಕ್ಕಾಗಿ ಕರೆ ನೀಡಿರುವ ಅವರು, ನಾಗರಿಕರು ಅಂತಹ ನಡವಳಿಕೆಯನ್ನು ಮೀರಿ ನಿಲ್ಲುವಂತೆ ಒತ್ತಾಯಿಸಿದ್ದಾರೆ. “ನಾವು ಘನತೆ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಆರಿಸಿಕೊಳ್ಳೋಣ” ಎಂದು ರಹತ್ಕರ್ ಹೇಳಿದ್ದಾರೆ.

ಈ ನಡುವೆ ಮಿಸ್ರಿ ಅವರ ಕುಟುಂಬದ ಪರವಾಗಿ ಹಿರಿಯ ರಾಜತಾಂತ್ರಿಕ ನಿರುಪಮಾ ಮೆನನ್ ರಾವ್ ಮತ್ತು ರಾಜಕಾರಣಿಗಳಾದ ಅಸಾದುದ್ದೀನ್ ಓವೈಸಿ ಮತ್ತು ಅಖಿಲೇಶ್ ಯಾದವ್ ಧ್ವನಿಯೆತ್ತಿದ್ದಾರೆ.

“ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಸಂಬಂಧಿಸಿದಂತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಅವರ ಕುಟುಂಬವನ್ನು ಟ್ರೋಲ್ ಮಾಡುವುದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ನಿರುಪಮಾ ಮೆನನ್ ರಾವ್ ಅವರು ಹೇಳಿದ್ದಾರೆ.

ಒಬ್ಬ ಸಮರ್ಪಿತ ರಾಜತಾಂತ್ರಿಕರಾಗಿರುವ ಮಿಶ್ರಿ ಅವರು ವೃತ್ತಿಪರತೆ ಮತ್ತು ದೃಢಸಂಕಲ್ಪದಿಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ ಮತ್ತು ಅವರನ್ನು ದೂಷಣೆ ಮಾಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದ್ದಾರೆ.

“ಅವರ ಮಗಳ ವೈಯಕ್ತಿಕ ಮಾಹಿತಿಯನ್ನು ಹುಡುಕುವುದು ಮತ್ತು ಅವರ ಪ್ರೀತಿಪಾತ್ರರನ್ನು ನಿಂದಿಸುವುದು ಎಲ್ಲಾ ಸಭ್ಯತೆಯ ಗೆರೆಯನ್ನು ಮೀರುತ್ತದೆ. ಈ ವಿಷಕಾರಿ ದ್ವೇಷದ ನಡುವೆ, ನಮ್ಮ ರಾಜತಾಂತ್ರಿಕ ಮಿಸ್ತಿ ಅವರ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು, ಅವರನ್ನು ಕೆಡವಬಾರದು. #StopTrollingMisri #SupportDiplomats #VikramMisri #IndianDiplomacy #NoToDoxxing,” ಎಂದು ರಾವ್ ಪೋಸ್ಟ್ ಮಾಡಿದ್ದರು. ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ಭಾರತ ಪಾಕಿಸ್ತಾನ ಕದನ ವಿರಾಮ | 32 ವಿಮಾನ ನಿಲ್ದಾಣಗಳು ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...