Homeಮುಖಪುಟ'ನನ್ನ ಸಿಂಧೂರ ವಾಪಸ್ ಕೊಡಿ': ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

- Advertisement -
- Advertisement -

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ.

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ.

ಫಿರೋಝ್‌ಪುರದ ಬಿಎಸ್‌ಎಫ್‌ನ 24 ನೇ ಬೆಟಾಲಿಯನ್‌ನ ಯೋಧ ಪೂರ್ಣಂ ಸಾಹು ಅವರನ್ನು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಒಂದು ದಿನದ ನಂತರ, ಅಂದರೆ ಏಪ್ರಿಲ್ 23ರಂದು ಭಾರತ-ಪಾಕ್ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಅಂತಾರಾಷ್ಟ್ರೀಯ ಗಡಿಯಲ್ಲಿ ಸ್ಥಳೀಯ ರೈತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸಹಾಯ ಮಾಡುವಾಗ ಸಾಹು ಅವರು ತಪ್ಪಿ ಗಡಿ ದಾಟಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಪಾಕಿಸ್ತಾನಿ ಪಡೆಗಳು ಸಾಹು ಅವರನ್ನು ಬಂಧಿಸಿ, ಅವರ ಕಣ್ಣಿಗೆ ಕಪ್ಪು ಪಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದೆ.

ಯೋಧ ಸಾಹು ಬಂಧನವಾಗಿ 20 ದಿನ ಕಳದರೂ, ಅವರನ್ನು ವಾಪಸ್ ಕರೆ ತರುವ ಕುರಿತು ಯಾವುದೇ ದೊಡ್ಡ ಬೆಳವಣಿಗೆಗಳು ನಡೆಯುತ್ತಿಲ್ಲ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ರಿಶ್ರಾ ವಾರ್ಡ್ ಸಂಖ್ಯೆ 13ರಲ್ಲಿರುವ ಸಾಹು ಅವರ ಕುಟುಂಬ ತೀವ್ರ ದುಖಃ ಮತ್ತು ಆತಂಕದಲ್ಲಿ ದಿನ ದೂಡುತ್ತಿದೆ. ಸಾಹು ಅವರ ಪತ್ನಿ ರಜನಿ ಸಾಹು ಏಳು ತಿಂಗಳ ಗರ್ಭಿಣಿಯಾಗಿದ್ದು, ತನ್ನ ಗಂಡನನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

“ನನ್ನ ಗಂಡನನ್ನು ಪಾಕಿಸ್ತಾನಿ ಸೇನೆ ಅಪಹರಿಸಿದೆ. ಅವರು ಸೇನೆಯ ವಶದಲ್ಲಿದ್ದಾರೆ. ಅವರ ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ಯುವ ಫೋಟೋ ಬಿಡುಗಡೆ ಮಾಡಿದ್ದಾರೆ” ಎಂದು ರಜಿನಿ ಸಾಹು ಅಳುತ್ತಾ ಹೇಳಿದ್ದಾರೆ.

ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು ಕುಟುಂಬಕ್ಕೆ ಕರೆ ಮಾಡಿದ್ದರು

“ಬಿಎಸ್‌ಎಫ್ ಅಧಿಕಾರಿಗಳು ನಮ್ಮ ಮನೆಗೆ ಭೇಟಿ ನೀಡಿ ನನ್ನ ಗಂಡನನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಈಗ ಪರಿಸ್ಥಿತಿ ಯುದ್ಧದಂತಿದೆ. ಮುಂದೆ ಏನು ಸುದ್ದಿ ಬರುತ್ತದೆಯೋ ಗೊತ್ತಿಲ್ಲ” ಎಂದು ರಜನಿ ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ತಿಂಗಳ ರಜೆ ಮುಗಿಸಿ ಹಿಂತಿರುಗಿದ ಪೂರ್ಣಂ, ಏಪ್ರಿಲ್ 1 ರಂದು ಕರ್ತವ್ಯಕ್ಕೆ ಮರಳಿದ್ದರು. ಏಪ್ರಿಲ್ 22ರ ರಾತ್ರಿ, ಅಪಹರಣಕ್ಕೆ ಒಳಗಾಗುವ ಕೆಲ ಗಂಟೆಗಳ ಮೊದಲು, ನನ್ನ ಆರೋಗ್ಯ ವಿಚಾರಿಸಲು ಕೊನೆಯ ಬಾರಿಗೆ ಕರೆ ಮಾಡಿದ್ದರು. ಆ ಬಳಿಕ ಇಷ್ಟು ದಿನ ಕಳೆದರೂ, ಅವರು ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ” ಎಂದು ರಜನಿ ತಿಳಿಸಿದ್ದಾರೆ.

ದಂಪತಿಯ ಎಂಟು ವರ್ಷದ ಮಗನನ್ನು ಈಗ ನೆರೆಹೊರೆಯವರು ನೋಡಿಕೊಳ್ಳುತ್ತಿದ್ದಾರೆ. ಆತನಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಿಲ್ಲ. ಪೂರ್ಣಂ ಅವರ ತಂದೆ, ನಿವೃತ್ತ ಭದ್ರತಾ ಸಿಬ್ಬಂದಿ ಭೋಲಾ ಸಾಹು ಅವರು, ಆರಂಭಿಕ ಭರವಸೆಗಳ ನಂತರದ ಸೇನೆಯ ಮೌನದ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ.

“ನಾವು ನಮ್ಮ ಸೊಸೆಯೊಂದಿಗೆ ಫಿರೋಝ್‌ಪುರಕ್ಕೆ ಹೋಗಿದ್ದೆವು. ಸೇನಾ ಅಧಿಕಾರಿಗಳು ಮಗನನ್ನು ಕರೆತರಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗ ಯಾವುದೇ ಮಾಹಿತಿ ಇಲ್ಲ. ಪ್ರಧಾನ ಮಂತ್ರಿಯನ್ನು ಸಂಪರ್ಕಿಸಲು ನಮಗೆ ಸಾಧ್ಯವಾದರೆ, ಮಗನನ್ನು ವಾಪಸ್ ಕರೆತರಲು ಬೇಡಿಕೊಳ್ಳುತ್ತೇವೆ.” ಎಂದು ಹೇಳಿದ್ದಾರೆ.

“ನನ್ನ ಮಗ 18 ವರ್ಷಗಳಿಂದ ದೇಶ ಸೇವೆ ಮಾಡಿದ್ದಾನೆ. ಇಂದು ನಾವು ಪರಿತ್ಯಕ್ತರಾಗಿದ್ದೇವೆಂದು ಅನಿಸುತ್ತಿದೆ” ಎಂದು ಪೂರ್ಣ ಸಾಹು ಅವರ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯು ರಿಶ್ರಾದ ಸ್ಥಳೀಯ ಬಂಗಾಳಿ ಅಲ್ಲದ ವಲಸೆ ಸಮುದಾಯವನ್ನು, ವಿಶೇಷವಾಗಿ ಬಿಹಾರ ಮತ್ತು ಉತ್ತರ ಪ್ರದೇಶದ ಸೆಣಬಿನ ಗಿರಣಿ ಕಾರ್ಮಿಕ ಸಮುದಾಯವನ್ನು ಒಂದುಗೂಡಿಸಿದೆ. ಸ್ಥಳೀಯರು ವಾರ್ಡ್ ಸಂಖ್ಯೆ 13 ಯೋಧ ಪೂರ್ಣಂ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಟಿವಿ ಪರದೆಯಲ್ಲಿ 24/7 ಸುದ್ದಿಗಳನ್ನು ಪ್ರಸಾರ ಆಗುತ್ತಿದೆ ಎಂದು ವರದಿಗಳು ಹೇಳಿವೆ.

“ಒಂದೆಡೆ ಸಂಘರ್ಷ, ಮತ್ತೊಂದೆಡೆ ಶಾಂತಿ. ಇದರಿಂದ ನಾವು ಗೊಂದಲಕ್ಕೀಡಾಗಿದ್ದೇವೆ. ಪೂರ್ಣ> ಸುರಕ್ಷಿತವಾಗಿ ಮನೆಗೆ ಬರಲೆಂದು ಬೇಡಿಕೊಳ್ಳುತ್ತೇವೆ. ಅವರು ಮನೆಗೆ ಬಂದರೆ ನಾವು ‘ಸಿಂಧೂರ’ ಆಚರಣೆ ಮಾಡುತ್ತೇವೆ” ಎಂದು ಯೋಧ ಪೂರ್ಣಂ ಅವರ ಸಹೋದರ ಶ್ಯಾಮ್‌ಸುಂದರ್ ಶಾವ್ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳೆದ ಸೋಮವಾರ ಗೃಹ ಸಚಿವಾಲಯದಿಂದ ತ್ವರಿತ ಪರಿಹಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಹೂಗ್ಲಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾಗಿ ದೃಢಪಡಿಸಿದ್ದಾರೆ.

“ನಾನು ಬಿಎಸ್‌ಎಫ್ ಕಮಾಂಡರ್‌ಗಳೊಂದಿಗೆ ಮಾತನಾಡಿದ್ದೇನೆ. ಅವರು ಪೂರ್ಣಂ ಅವರ ಬಿಡುಗಡೆಗೆ ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಪೂರ್ಣಂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಆದರೆ, ಅವರ ಪರಿಸ್ಥಿತಿ ಹದಗೆಟ್ಟಿದೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಬಗ್ಗೆ ಕೇಳಿದ ಕೂಡಲೇ ಒಮ್ಮೆಲೆ ಆಘಾತ ವ್ಯಕ್ತಪಡಿಸಿ, ಮುಖದ ಮೇಲೆ ಮುಸುಕನ್ನು ಎಳೆದುಕೊಂಡ ಯೋಧ ಪೂರ್ಣಂ ಪತ್ನಿ ರಜನಿ “ನನ್ನ ಸಿಂಧೂರವನ್ನು ನನಗೆ ಮರಳಿ ಕೊಡಿ” ಎಂದು ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೌಜನ್ಯ : thewire.in

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...