Homeಮುಖಪುಟಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

1971 ರ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾರತ ಗೆದ್ದ ನಂತರ ಬಾಂಗ್ಲಾದೇಶ ರಚನೆಗೆ ಕಾರಣವಾದ ಪರಿಸ್ಥಿತಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು ತಪ್ಪಾಗಿ ನಿರ್ವಹಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ. ಬಾಂಗ್ಲಾ ವಿಮೋಚನೆಯನ್ನು ಒಂದು ತಂತ್ರಗತ ವಿಜಯವೆಂದು ಕರೆದರೂ, ರಾಜತಾಂತ್ರಿಕ ವೈಫಲ್ಯವೆಂದು ಅವರು ವಿಮರ್ಶಿಸಿದ್ದಾರೆ. ಬಾಂಗ್ಲಾದೇಶ ವಿಮೋಚನೆಯನ್ನು

“ಇಂದಿರಾ ಗಾಂಧಿ ಇಂದು ಜೀವಂತವಾಗಿದ್ದರೆ, ನಮ್ಮ ಸಶಸ್ತ್ರ ಪಡೆಗಳು ಗೆದ್ದ ನಿರ್ಣಾಯಕ ವಿಜಯವನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ರಾಷ್ಟ್ರವು ಅವರನ್ನು ಪ್ರಶ್ನಿಸುತ್ತಿತ್ತು. ಬಾಂಗ್ಲಾದೇಶದ ರಚನೆಯು ಚೌಕಾಶಿಯಾಗಿರಲಿಲ್ಲ – ಅದು ಕಳೆದುಹೋದ ಐತಿಹಾಸಿಕ ಅವಕಾಶ.” ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರಸ್ತುತ ಉದ್ವಿಗ್ನತೆ ಮತ್ತು ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ಎರಡು ದೇಶಗಳ ನಡುವೆ ಕದನ ವಿರಾಮದ ಹಿನ್ನೆಲೆಯಲ್ಲಿ 1971 ರ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರ ನಿಲುವನ್ನು ಹಲವಾರು ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದರು. ಇದರ ನಂತರ ಸಿಎಂ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಹಿಮಂತ ಬಿಸ್ವಾ ಸರ್ಮಾ ಅವರ ಈ ಎಕ್ಸ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ಸೃಷ್ಟಿ: ಒಂದು ತಂತ್ರಗತ ವಿಜಯ, ಆದರೆ ರಾಜತಾಂತ್ರಿಕ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. “1971ರ ಯುದ್ಧದಲ್ಲಿ ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿತು. ಇದರಿಂದ ಪಾಕಿಸ್ತಾನ ಎರಡು ಭಾಗವಾಗಿ ವಿಭಜನೆಗೊಂಡು ಬಾಂಗ್ಲಾದೇಶ ಸೃಷ್ಟಿಯಾಯಿತು. ಆದರೆ, ಈ ಗೆಲುವಿನ ಹೊರತಾಗಿಯೂ ಭಾರತದ ರಾಜಕೀಯ ನಾಯಕತ್ವವು ದೀರ್ಘಕಾಲೀನ ತಂತ್ರಗತ ಲಾಭಗಳನ್ನು ಪಡೆಯುವಲ್ಲಿ ವಿಫಲವಾಯಿತು.” ಎಂದು ಅವರು ಹೇಳಿದ್ದಾರೆ.

“ಭಾರತವು ವಿಮೋಚನೆಯ ಸಮಯದಲ್ಲಿ ಜಾತ್ಯತೀತ ಬಾಂಗ್ಲಾದೇಶವನ್ನು ಬೆಂಬಲಿಸಿದ್ದರೂ, 1988ರ ವೇಳೆಗೆ ಬಾಂಗ್ಲಾದೇಶವು ಇಸ್ಲಾಂ ಅನ್ನು ರಾಷ್ಟ್ರಧರ್ಮವನ್ನಾಗಿ ಘೋಷಿಸಿತು. ಇಂದು ಢಾಕಾದಲ್ಲಿ ರಾಜಕೀಯ ಇಸ್ಲಾಂ ಪ್ರಬಲವಾಗಿದೆ, ಇದು ಭಾರತ ಹೋರಾಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಹಿಂದೂ ಜನಸಂಖ್ಯೆ ಒಮ್ಮೆ 20% ಇತ್ತು, ಆದರೆ ಈಗ ಅದು 8%ಕ್ಕಿಂತ ಕಡಿಮೆಯಾಗಿದೆ. ವ್ಯವಸ್ಥಿತ ತಾರತಮ್ಯ ಮತ್ತು ಹಿಂಸೆಯಿಂದ ಹಿಂದೂಗಳು ತೊಂದರೆ ಅನುಭವಿಸುತ್ತಿದ್ದಾರೆ, ಆದರೆ ಭಾರತ ಈ ವಿಷಯದಲ್ಲಿ ಹೆಚ್ಚಾಗಿ ಮೌನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಯುದ್ಧದಲ್ಲಿ ಭಾರತ ಪ್ರಾಬಲ್ಯ ಹೊಂದಿದ್ದರೂ, ಸಿಲಿಗುರಿ ಕಾರಿಡಾರ್ (ಚಿಕನ್‌ನ ನೆಕ್) ಎಂಬ ಈ ಪ್ರದೇಶದ ದುರ್ಬಲತೆಯನ್ನು ಪರಿಹರಿಸಲು ಭಾರತ ವಿಫಲವಾಯಿತು. ಉತ್ತರ ಬಾಂಗ್ಲಾದೇಶದ ಮೂಲಕ ಸುರಕ್ಷಿತ ಭೂ ಮಾರ್ಗವನ್ನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ಲ, ಇದರಿಂದ ಈಶಾನ್ಯ ರಾಜ್ಯಗಳ ಸಂಪರ್ಕ ಸಮಸ್ಯೆ ಉಳಿದಿದೆ.” ಎಂದು ಅವರು ಹೇಳಿದ್ದಾರೆ.

“ಅಕ್ರಮ ಬಾಂಗ್ಲಾದೇಶಿ ವಲಸಿಗರ ಮರಳಿ ಕಳುಹಿಸುವ ಯಾವುದೇ ಒಪ್ಪಂದವನ್ನು ಮಾಡಲಾಗಿಲ್ಲ. ಇದರಿಂದ ಅಸ್ಸಾಂ, ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಜನಸಂಖ್ಯಾಶಾಸ್ತ್ರೀಯ ಬದಲಾವಣೆ ಉಂಟಾಗಿ ಸಾಮಾಜಿಕ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ. ಜೊತೆಗೆ, ಭಾರತವು ಚಿತ್ತಗಾಂಗ್ ಬಂದರಿಗೆ ಪ್ರವೇಶವನ್ನು ಪಡೆಯಲು ವಿಫಲವಾಯಿತು. ಐವತ್ತು ವರ್ಷಗಳ ನಂತರವೂ ಈಶಾನ್ಯ ರಾಜ್ಯಗಳು ಭೂಪರಿವೃತವಾಗಿಯೇ ಉಳಿದಿವೆ, ಇದು ಆರ್ಥಿಕ ಅಭಿವೃದ್ಧಿಗೆ ತೊಡಕಾಗಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ದಶಕಗಳವರೆಗೆ ಭಾರತ ವಿರೋಧಿ ಉಗ್ರಗಾಮಿ ಗುಂಪುಗಳಿಗೆ ಆಶ್ರಯವಾಗಿತ್ತು, ಇದು 1971ರಲ್ಲಿ ಭಾರತ ಮಾಡಬೇಕಿದ್ದ ತಂತ್ರಗತ ಕ್ರಮಗಳ ಕೊರತೆಯಿಂದ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

1971 ರ ಭಾರತ-ಪಾಕಿಸ್ತಾನ ಯುದ್ಧವನ್ನು ಬಾಂಗ್ಲಾದೇಶ ವಿಮೋಚನಾ ಯುದ್ಧ ಎಂದೂ ಕರೆಯುತ್ತಾರೆ. ಇದು ಹಿಂದಿನ ಪೂರ್ವ ಪಾಕಿಸ್ತಾನದಲ್ಲಿ ಇಸ್ಲಾಮಾಬಾದ್‌ ಸರ್ಕಾರದ ವಿರುದ್ಧ ನಡೆದ ದಂಗೆಯಿಂದ ಪ್ರಾರಂಭವಾಯಿತು. ಆ ವರ್ಷದ ಮಾರ್ಚ್‌ನಿಂದ, ಬಂಗಾಳಿ ರಾಷ್ಟ್ರೀಯವಾದಿಗಳು ಬಂಗಾಳಿ ಜನಸಂಖ್ಯೆಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಮೇಲೆ ಪಾಕಿಸ್ತಾನಿ ಪಡೆಗಳು ಕ್ರೂರವಾಗಿ ದಮನ ಮಾಡುತ್ತಿತ್ತು.

ಆಗಿನ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರು ಬಾಂಗ್ಲಾದೇಶದ ಪರವಾಗಿ ತಿಂಗಳುಗಟ್ಟಲೆ ಬೆಂಬಲ ನೀಡಿದ್ದರು. ಅದಾಗ್ಯೂ, ಭಾರತೀಯ ಸೇನೆಯು ಡಿಸೆಂಬರ್ 3, 1971 ರಂದು ಪಾಕಿಸ್ತಾನದೊಂದಿಗೆ ಪೂರ್ಣ ಪ್ರಮಾಣದ ಯುದ್ಧದಲ್ಲಿ ಔಪಚಾರಿಕವಾಗಿ ತೊಡಗಿತು.

ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಮತ್ತು ಅವರ ಸೈನಿಕರು ಢಾಕಾದಲ್ಲಿ ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿಯನ್ನು ಒಳಗೊಂಡ ಮಿತ್ರಪಕ್ಷಗಳಿಗೆ ಶರಣಾದರು. ಬಾಂಗ್ಲಾದೇಶದಲ್ಲಿ ಈ ದಿನವನ್ನು ‘ಬಿಜಯ್ ದಿಬೋಷ್’ ಎಂದು ಆಚರಿಸಲಾಗುತ್ತದೆ ಮತ್ತು ಪಾಕಿಸ್ತಾನದಿಂದ ಔಪಚಾರಿಕ ಸ್ವಾತಂತ್ರ್ಯ ಪಡೆದ ದಿನ ಎಂದು ಆಚರಿಸುತ್ತದೆ.

ಭಾರತ ಮತ್ತು ಪಾಕಿಸ್ತಾನ ನಾಲ್ಕು ದಿನಗಳ ಮಿಲಿಟರಿ ಉದ್ವಿಗ್ನತೆಯನ್ನು ಕೊನೆಗೊಳಿಸಲು ನಿರ್ಧರಿಸಿದ ಮೇ 10ರ ಕದನ ವಿರಾಮದ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು 1971 ರ ಯುದ್ಧದ ಸಮಯದಲ್ಲಿ ಅಮೆರಿಕದ ಒತ್ತಡಕ್ಕೆ ಇಂದಿರಾ ಗಾಂಧಿ ಮಣಿಯದಿರುವ ಬಗ್ಗೆ ನೆನಪಿಸಿದ್ದರು. ಇದರ ನಂತರ, ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಇಂದಿರಾ ಗಾಂಧಿ ಅವರ ಫೋಟೋವನ್ನು ಪೋಸ್ಟ್ ಮಾಡಿ, “ಇಂದಿರಾ ಗಾಂಧಿ – ಧೈರ್ಯ | ಮನವರಿಕೆ | ಬಲ” ಎಂಬ ಶೀರ್ಷಿಕೆಯನ್ನು ನೀಡಿತ್ತು. ಬಾಂಗ್ಲಾದೇಶ ವಿಮೋಚನೆಯನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

43 ರೋಹಿಂಗ್ಯಾ ನಿರಾಶ್ರಿತರನ್ನು ಅಂತರರಾಷ್ಟ್ರೀಯ ಜಲಪ್ರದೇಶಕ್ಕೆ ಬಿಟ್ಟುಬಂದ ಭಾರತೀಯ ಅಧಿಕಾರಿಗಳು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...