Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...