Homeಅಂತರಾಷ್ಟ್ರೀಯಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

- Advertisement -
- Advertisement -

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಪ್ರಸ್ತಾವಿತ ಒಪ್ಪಂದದಡಿಯಲ್ಲಿ ಅಮೆರಿಕವು ಮೇ 14ರ ವೇಳೆಗೆ ಚೀನಾದ ಹೆಚ್ಚಿನ ಆಮದುಗಳ ಮೇಲಿನ ಒಟ್ಟು 145 ಶೇಕಡ ಸುಂಕವನ್ನು ಶೇಕಡ 30ಕ್ಕೆ ಇಳಿಸಲಿದೆ. ಇದರಲ್ಲಿ ಫೆಂಟನಿಲ್‌ಗೆ ಸಂಬಂಧಿಸಿದ ಸುಂಕಗಳು ಸೇರಿವೆ.

ಇದಕ್ಕೆ ಪ್ರತಿಯಾಗಿ, ಚೀನಾ ಅಮೆರಿಕದ ಸರಕುಗಳ ಮೇಲಿನ ತನ್ನ 125 ಶೇಕಡ ಸುಂಕವನ್ನು ಶೇಕಡ 10ಕ್ಕೆ ಇಳಿಸಲಿದೆ. ಎರಡು ದೇಶಗಳ ನಡುವಿನ ಈ ಸುಂಕ ಕಡಿತವು ಈಗ ತಾತ್ಕಾಲಿಕವಾಗಿದ್ದು, ಕನಿಷ್ಠ ಮುಂದಿನ 90 ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ವ್ಯಾಪಾರ ಮಾತುಕತೆಯ ಸಮಯದಲ್ಲಿ ಎರಡೂ ಕಡೆಯವರು ಧನಾತ್ಮಕವಾಗಿ ನಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಮಾತುಕತೆಯನ್ನು “ಪ್ರೊಡಕ್ಟಿವ್ ಅಂಡ್ ಕನ್‌ಸ್ಟ್ರಕ್ಟಿವ್” ಎಂದು ಬಣ್ಣಿಸಿದರೆ, ಚೀನಾದ ಉಪಾಧ್ಯಕ್ಷ ಹಿ ಲೈಫೆಂಗ್ “ಇನ್‌- ಡೆಪ್ತ್‌ ಅಂಡ್ ಕ್ಯಾಂಡಿಡ್” ಎಂದಿದ್ದಾರೆ.

ಶ್ವೇತ ಭವನವು ಮಾತುಕತೆಯಲ್ಲಿ ‘ವ್ಯಾಪಾರ ಒಪ್ಪಂದ’ ಮಾಡಿಕೊಳ್ಳಲಾಗಿದೆ ಎಂಬಂತೆ ಪ್ರತಿಕ್ರಿಯಿಸಿದೆ. ಆದರೂ, ಅದು ಇನ್ನೂ ನಿರ್ದಿಷ್ಟ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಸಮಗ್ರ ಜಂಟಿ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ಜನವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸರಕುಗಳ ಆಮದುಗಳ ಮೇಲೆ ಭಾರಿ ಸುಂಕಗಳನ್ನು ವಿಧಿಸಿದ್ದರು. ಚೀನಾ ಕೂಡ ಹೆಚ್ಚಿನ ಸುಂಕಗಳನ್ನು ವಿಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತ್ತು. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ಸಮರ ಏರ್ಪಟ್ಟಿತ್ತು. ಆ ಬಳಿಕ ನಡೆದ ಅಮೆರಿಕ ಮತ್ತು ಚೀನಾ ಅಧಿಕಾರಿಗಳ ನಡುವಿನ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ.

ತೀವ್ರ ಸುಂಕ ಹೆಚ್ಚಳವು ಜಾಗತಿಕ ಹಣಕಾಸು ಮಾರುಕಟ್ಟೆಗಳನ್ನು ಅಲುಗಾಡಿಸಿತ್ತು ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹುಟ್ಟುಹಾಕಿತ್ತು.

ಜಿನೀವಾದಲ್ಲಿ ನಡೆದ ಎರಡು ದಿನಗಳ ಮಾತುಕತೆಯ ಕೊನೆಯಲ್ಲಿ, ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಯಭಾರಿ ಜೇಮೀಸನ್ ಗ್ರೀರ್, ಈ ಒಪ್ಪಂದವು ಚೀನಾದೊಂದಿಗಿನ ಅಮೆರಿಕದ 1.2 ಟ್ರಿಲಿಯನ್ ಡಾಲರ್ ವ್ಯಾಪಾರ ಕೊರತೆ ನೀಗಿಸಲು ಸಹಾಯ ಮಾಡಲಿದೆ ಎಂದಿದ್ದಾರೆ.

ಜಂಟಿ ಹೇಳಿಕೆಯಲ್ಲಿ, ವ್ಯಾಪಾರ ಸಂಘರ್ಷವನ್ನು ಶಮನಗೊಳಿಸುವಲ್ಲಿ ‘ಗಣನೀಯ ಪ್ರಗತಿ’ ಸಾಧಿಸಲಾಗಿದೆ ಎಂದು ಯುಎಸ್ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಎರಡೂ ಕಡೆಯಿಂದ ಹಲವು ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ನಿರಂತರ ಸಂವಾದವನ್ನು ನಿರ್ವಹಿಸಲು ಶಾಶ್ವತ ಆರ್ಥಿಕ ಮತ್ತು ವ್ಯಾಪಾರ ಸಮಾಲೋಚನಾ ಕಾರ್ಯವಿಧಾನವನ್ನು ಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ವಾಣಿಜ್ಯ ಸಂಸ್ಥೆಯ ಇನ್ಸ್‌ಪೆಕ್ಟರ್ ಜನರಲ್ ನ್ಗೋಜಿ ಒಕೊಂಜೊ-ಇವೆಲಾ ಅವರು ಎರಡು ದೇಶಗಳ ನಡುವಿನ ಚರ್ಚೆಯ ಫಲಿತಾಂಶವನ್ನು ಸ್ವಾಗತಿಸಿದ್ದಾರೆ. ಇದನ್ನು ಒಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಮುಂದಿನ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಅವಾಮಿ ಲೀಗ್‌ ಪಕ್ಷಕ್ಕೆ ನಿಷೇಧ ಹೇರಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...