Homeಮುಖಪುಟಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಯುದ್ಧ ಎಂದರೆ ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದ ಸೇನೆಯ ಮಾಜಿ ಮುಖ್ಯಸ್ಥ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ 

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ದಾಳಿ ಮತ್ತು ನಂತರ ನಾಲ್ಕು ದಿನಗಳ ತೀವ್ರ ಸಂಘರ್ಷ ಆರಂಭವಾದ ಈ ವಾರವು ಪ್ರಕ್ಷುಬ್ಧ ವಾರವಾಗಿದೆ ಎಂದು ನರವಾಣೆ ಹೇಳಿದ್ದಾರೆ.

“ಈ ಸಂಘರ್ಷ ಅಂತಿಮವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಘೋಷಣೆಯಲ್ಲಿ ಕೊನೆಗೊಂಡಿತು. ಇದು ಕೇವಲ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯಾಗಿದೆ, ಕದನ ವಿರಾಮವಲ್ಲ ಎಂಬುವುದನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಮುಂಬರುವ ದಿನಗಳು ಮತ್ತು ವಾರಗಳಲ್ಲಿ ಏನಾಗುತ್ತದೆ ಎಂಬುವುದು ವೀಕ್ಷಿಸಿ” ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಯುದ್ಧವನ್ನು ಸ್ಥಗಿತಗೊಳಿಸುವುದರ ವಿರುದ್ಧ ಹಲವಾರು ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿದ ಅವರು, “ಅಂಕಿಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಯುದ್ಧದ ವೆಚ್ಚವನ್ನು ಪರಿಗಣಿಸಿದರೆ, ನಷ್ಟಗಳು ತುಂಬಾ ದೊಡ್ಡದಾಗುತ್ತದೆ ಅಥವಾ ದುಸ್ತರವಾಗುತ್ತದೆ. ಅದಕ್ಕೂ ಮೊದಲು ಬುದ್ಧಿವಂತ ವ್ಯಕ್ತಿ ಯುದ್ಧ ನಿಲ್ಲುಸುವ ಕರೆಯನ್ನು ನೀಡುತ್ತಾರೆ ಎಂದು ಅರಿತುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ಮಾತ್ರವಲ್ಲದೆ ಅವರ ಪ್ರದೇಶದೊಳಗಿನ ಅವರ ವಾಯುನೆಲೆಗಳ ಮೇಲೂ ನಾವು ನಡೆಸಿದ ದಾಳಿಗಳ ಮೂಲಕ, ಈ ಹಾದಿಯಲ್ಲಿ ಮುಂದುವರಿದರೆ ಅದರ ಬೆಲೆ ತುಂಬಾ ಹೆಚ್ಚಾಗಿರುತ್ತದೆ ಎಂದು ನಾವು ಪಾಕಿಸ್ತಾನಕ್ಕೆ ಸಾಬೀತುಪಡಿಸಿದ್ದೇವೆ ಎಂದು ನಾನು ನಂಬುತ್ತೇನೆ. ಹಾಗಾಗಿಯೆ ಅಂತಿಮವಾಗಿ ಅವರ ಡಿಜಿಎಂಒ ಕದನ ವಿರಾಮದ ಸಾಧ್ಯತೆಯ ಬಗ್ಗೆ ಚರ್ಚಿಸಲು ನಮ್ಮದನ್ನು ಕರೆಯುವಂತೆ ಮಾಡಿತು” ಎಂದು ಅವರು ಹೇಳಿದ್ದಾರೆ.

“ನಾನು ಶಕ್ತಿ ಮತ್ತು ವಿನಾಶವನ್ನು ಉಲ್ಲೇಖಿಸಿದೆ, ಆದರೆ ಸಾಮಾಜಿಕವಾಗಿ ಕಳೆದುಹೋದ ಜೀವಗಳ ಬಗ್ಗೆ ಕೂಡಾ ಹೇಳಬೇಕಿದೆ. ದಾಳಿಯಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಳ್ಳುವ ಅಥವಾ ಗಡಿ ಪ್ರದೇಶಗಳಲ್ಲಿ ಶೆಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಕ್ಕಳ ಬಗ್ಗೆ ಮಾತಾಡಬೇಕಿದೆ. ಆದರೆ, ಈ ರೀತಿಯ ವಿನಾಶವನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ಆದರೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಈ ಆಘಾತವು ತಲೆಮಾರುಗಳವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

“ಪಿಟಿಎಸ್‌ಡಿ (ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್) ಎಂಬುದೂ ಇದೆ. ಭಯಾನಕ ದೃಶ್ಯಗಳನ್ನು ನೋಡಿದ ಜನರು 20 ವರ್ಷಗಳ ನಂತರವೂ ಚಳಿಯಲ್ಲೂ ಬೆವರುತ್ತಾರೆ, ಅಂತಹ ಜನರಿಗೆ ಮನೋವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದ್ದಾರೆ.

“ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ. ಇದು ನಿಮ್ಮ ಬಾಲಿವುಡ್ ಸಿನಿಮಾ ಅಲ್ಲ. ಇದು ತುಂಬಾ ಗಂಭೀರವಾದ ವ್ಯವಹಾರ. ಯುದ್ಧ ಅಥವಾ ಹಿಂಸೆಯನ್ನು ನಾವು ಕೊನೆಯ ಅಸ್ತ್ರವಗಿ ಬಳಸಬೇಕು. ಅದಕ್ಕಾಗಿಯೇ ನಮ್ಮ ಪ್ರಧಾನಿ ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದಾರೆ. ಅವಿವೇಕಿ ಜನರು ಯುದ್ಧ ಮಾಡಲು ನಮ್ಮನ್ನು ಬಲವಂತಪಡಿಸಿದರೂ, ನಾವು ಅದಕ್ಕಾಗಿ ಬೆಂಬಲ ವ್ಯಕ್ತಪಡಿಸಬಾರದು” ಎಂದು ಅವರು ಹೇಳಿದ್ದಾರೆ.

“ಆದರೂ, ಪೂರ್ಣ ಪ್ರಮಾಣದ ಯುದ್ಧಕ್ಕೆ ನಾವು ಏಕೆ ಹೋಗಿಲ್ಲ ಎಂದು ಜನರು ಕೇಳುತ್ತಿದ್ದಾರೆ. ಒಬ್ಬ ಮಿಲಿಟರಿ ವ್ಯಕ್ತಿಯಾಗಿ, ಸರ್ಕಾರ ಆದೇಶಿಸಿದರೆ, ನಾನು ಯುದ್ಧಕ್ಕೆ ಹೋಗುತ್ತೇನೆ. ಆದರೆ ಅದು ನನ್ನ ಮೊದಲ ಆಯ್ಕೆಯಾಗಿರುವುದಿಲ್ಲ” ಎಂದು ಮಾಜಿ ಭಾರತೀಯ ಸೇನಾ ಮುಖ್ಯಸ್ಥರೂ ಆಗಿರುವ ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ರಾಜತಾಂತ್ರಿಕತೆಯನ್ನು ಆರಿಸಿಕೊಳ್ಳುವುದಾಗಿ ಅವರು ಹೇಳಿದ್ದು, ಸಂವಾದದ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿದರೆ ಸಶಸ್ತ್ರ ಸಂಘರ್ಷದ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯಲ್ಲಿ ನಾವೆಲ್ಲರೂ ಸಮಾನ ಪಾಲುದಾರರು. ದೇಶಗಳ ನಡುವೆ ಮಾತ್ರವಲ್ಲದೆ, ಕುಟುಂಬಗಳಲ್ಲಿ ಅಥವಾ ರಾಜ್ಯಗಳು, ಪ್ರದೇಶಗಳು ಮತ್ತು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ನಾವು ಪ್ರಯತ್ನಿಸಬೇಕು. ಯಾವುದಕ್ಕೂ ಹಿಂಸಾಚಾರ ಉತ್ತರವಲ್ಲ” ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...