Homeಮುಖಪುಟಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಯುದ್ಧ ಎಂದರೆ ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದ ಸೇನೆಯ ಮಾಜಿ ಮುಖ್ಯಸ್ಥ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ 

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ದಾಳಿ ಮತ್ತು ನಂತರ ನಾಲ್ಕು ದಿನಗಳ ತೀವ್ರ ಸಂಘರ್ಷ ಆರಂಭವಾದ ಈ ವಾರವು ಪ್ರಕ್ಷುಬ್ಧ ವಾರವಾಗಿದೆ ಎಂದು ನರವಾಣೆ ಹೇಳಿದ್ದಾರೆ.

“ಈ ಸಂಘರ್ಷ ಅಂತಿಮವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಘೋಷಣೆಯಲ್ಲಿ ಕೊನೆಗೊಂಡಿತು. ಇದು ಕೇವಲ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಯಾಗಿದೆ, ಕದನ ವಿರಾಮವಲ್ಲ ಎಂಬುವುದನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಮುಂಬರುವ ದಿನಗಳು ಮತ್ತು ವಾರಗಳಲ್ಲಿ ಏನಾಗುತ್ತದೆ ಎಂಬುವುದು ವೀಕ್ಷಿಸಿ” ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಯುದ್ಧವನ್ನು ಸ್ಥಗಿತಗೊಳಿಸುವುದರ ವಿರುದ್ಧ ಹಲವಾರು ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿದ ಅವರು, “ಅಂಕಿಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಯುದ್ಧದ ವೆಚ್ಚವನ್ನು ಪರಿಗಣಿಸಿದರೆ, ನಷ್ಟಗಳು ತುಂಬಾ ದೊಡ್ಡದಾಗುತ್ತದೆ ಅಥವಾ ದುಸ್ತರವಾಗುತ್ತದೆ. ಅದಕ್ಕೂ ಮೊದಲು ಬುದ್ಧಿವಂತ ವ್ಯಕ್ತಿ ಯುದ್ಧ ನಿಲ್ಲುಸುವ ಕರೆಯನ್ನು ನೀಡುತ್ತಾರೆ ಎಂದು ಅರಿತುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಭಯೋತ್ಪಾದಕರ ಮೂಲಸೌಕರ್ಯಗಳ ಮೇಲೆ ಮಾತ್ರವಲ್ಲದೆ ಅವರ ಪ್ರದೇಶದೊಳಗಿನ ಅವರ ವಾಯುನೆಲೆಗಳ ಮೇಲೂ ನಾವು ನಡೆಸಿದ ದಾಳಿಗಳ ಮೂಲಕ, ಈ ಹಾದಿಯಲ್ಲಿ ಮುಂದುವರಿದರೆ ಅದರ ಬೆಲೆ ತುಂಬಾ ಹೆಚ್ಚಾಗಿರುತ್ತದೆ ಎಂದು ನಾವು ಪಾಕಿಸ್ತಾನಕ್ಕೆ ಸಾಬೀತುಪಡಿಸಿದ್ದೇವೆ ಎಂದು ನಾನು ನಂಬುತ್ತೇನೆ. ಹಾಗಾಗಿಯೆ ಅಂತಿಮವಾಗಿ ಅವರ ಡಿಜಿಎಂಒ ಕದನ ವಿರಾಮದ ಸಾಧ್ಯತೆಯ ಬಗ್ಗೆ ಚರ್ಚಿಸಲು ನಮ್ಮದನ್ನು ಕರೆಯುವಂತೆ ಮಾಡಿತು” ಎಂದು ಅವರು ಹೇಳಿದ್ದಾರೆ.

“ನಾನು ಶಕ್ತಿ ಮತ್ತು ವಿನಾಶವನ್ನು ಉಲ್ಲೇಖಿಸಿದೆ, ಆದರೆ ಸಾಮಾಜಿಕವಾಗಿ ಕಳೆದುಹೋದ ಜೀವಗಳ ಬಗ್ಗೆ ಕೂಡಾ ಹೇಳಬೇಕಿದೆ. ದಾಳಿಯಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಳ್ಳುವ ಅಥವಾ ಗಡಿ ಪ್ರದೇಶಗಳಲ್ಲಿ ಶೆಲ್ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಕ್ಕಳ ಬಗ್ಗೆ ಮಾತಾಡಬೇಕಿದೆ. ಆದರೆ, ಈ ರೀತಿಯ ವಿನಾಶವನ್ನು ಯಾರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ಆದರೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಈ ಆಘಾತವು ತಲೆಮಾರುಗಳವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

“ಪಿಟಿಎಸ್‌ಡಿ (ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್) ಎಂಬುದೂ ಇದೆ. ಭಯಾನಕ ದೃಶ್ಯಗಳನ್ನು ನೋಡಿದ ಜನರು 20 ವರ್ಷಗಳ ನಂತರವೂ ಚಳಿಯಲ್ಲೂ ಬೆವರುತ್ತಾರೆ, ಅಂತಹ ಜನರಿಗೆ ಮನೋವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ” ಎಂದು ಅವರು ಹೇಳಿದ್ದಾರೆ.

“ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ. ಇದು ನಿಮ್ಮ ಬಾಲಿವುಡ್ ಸಿನಿಮಾ ಅಲ್ಲ. ಇದು ತುಂಬಾ ಗಂಭೀರವಾದ ವ್ಯವಹಾರ. ಯುದ್ಧ ಅಥವಾ ಹಿಂಸೆಯನ್ನು ನಾವು ಕೊನೆಯ ಅಸ್ತ್ರವಗಿ ಬಳಸಬೇಕು. ಅದಕ್ಕಾಗಿಯೇ ನಮ್ಮ ಪ್ರಧಾನಿ ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದಾರೆ. ಅವಿವೇಕಿ ಜನರು ಯುದ್ಧ ಮಾಡಲು ನಮ್ಮನ್ನು ಬಲವಂತಪಡಿಸಿದರೂ, ನಾವು ಅದಕ್ಕಾಗಿ ಬೆಂಬಲ ವ್ಯಕ್ತಪಡಿಸಬಾರದು” ಎಂದು ಅವರು ಹೇಳಿದ್ದಾರೆ.

“ಆದರೂ, ಪೂರ್ಣ ಪ್ರಮಾಣದ ಯುದ್ಧಕ್ಕೆ ನಾವು ಏಕೆ ಹೋಗಿಲ್ಲ ಎಂದು ಜನರು ಕೇಳುತ್ತಿದ್ದಾರೆ. ಒಬ್ಬ ಮಿಲಿಟರಿ ವ್ಯಕ್ತಿಯಾಗಿ, ಸರ್ಕಾರ ಆದೇಶಿಸಿದರೆ, ನಾನು ಯುದ್ಧಕ್ಕೆ ಹೋಗುತ್ತೇನೆ. ಆದರೆ ಅದು ನನ್ನ ಮೊದಲ ಆಯ್ಕೆಯಾಗಿರುವುದಿಲ್ಲ” ಎಂದು ಮಾಜಿ ಭಾರತೀಯ ಸೇನಾ ಮುಖ್ಯಸ್ಥರೂ ಆಗಿರುವ ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತಾನು ರಾಜತಾಂತ್ರಿಕತೆಯನ್ನು ಆರಿಸಿಕೊಳ್ಳುವುದಾಗಿ ಅವರು ಹೇಳಿದ್ದು, ಸಂವಾದದ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿದರೆ ಸಶಸ್ತ್ರ ಸಂಘರ್ಷದ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆಯಲ್ಲಿ ನಾವೆಲ್ಲರೂ ಸಮಾನ ಪಾಲುದಾರರು. ದೇಶಗಳ ನಡುವೆ ಮಾತ್ರವಲ್ಲದೆ, ಕುಟುಂಬಗಳಲ್ಲಿ ಅಥವಾ ರಾಜ್ಯಗಳು, ಪ್ರದೇಶಗಳು ಮತ್ತು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ನಾವು ಪ್ರಯತ್ನಿಸಬೇಕು. ಯಾವುದಕ್ಕೂ ಹಿಂಸಾಚಾರ ಉತ್ತರವಲ್ಲ” ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...