Homeಕರ್ನಾಟಕಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು...

ಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು ಸಂಯುಕ್ತ ಹೋರಾಟ ಕರೆ

- Advertisement -
- Advertisement -

ಬೆಂಗಳೂರು: ಇದೇ ಮೇ 20ರಂದು ಜೆಸಿಟಿಯು ಮತ್ತು ಎಸ್‌ ಕೆ ಎಂ‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಮಿಕರೊಂದಿಗೆ ಅಂದು ರೈತರು ಕೂಡ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಎರಡರ ವಿರುದ್ಧವೂ ಪ್ರತಿಭಟನೆಯನ್ನು ದಾಖಲಿಸಬೇಕಿದೆ ಎಂದು ರಾಜ್ಯ ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ-ಕರ್ನಾಟಕವು ಹೇಳಿಕೆಯಲ್ಲಿ ಕರೆ ನೀಡಿದೆ.

ಅಂಬಾನಿ-ಅದಾನಿಯಂತಹ ಬಕಾಸುರ ಕಂಪನಿಗಳ ಕಣ್ಣಿ ಬಿದ್ದಿರುವುದು ಕಾರ್ಮಿಕರ ಶ್ರಮ ಮತ್ತು ಸಾರ್ವಜನಿಕ ಸಂಪತ್ತಿನ ಮೇಲೆ ಮಾತ್ರವಲ್ಲ ರೈತರ ಭೂಮಿ ಮತ್ತು ಬೆಳೆಯ ಮೇಲೆ ಸಹ. ನಮ್ಮ ಭೂಮಿಯನ್ನು ಅವರು ಕಬಳಿಸಬೇಕಿದೆ, ನಮ್ಮ ಬೆಳೆಯನ್ನು ಅವರು ನಿಯಂತ್ರಿಸಬೇಕಿದೆ. ಆದ್ದರಿಂದ ಭೂಮಿಯ ಖರೀದಿಯ ಮೇಲೆ, ಭೂಮಿಯ ಗುತ್ತಿಗೆ ಮೇಲೆ ಇದ್ದ ನಿರ್ಬಂಧಗಳನ್ನೆಲ್ಲಾ ತೆಗೆದು, ಯಾರು ಎಷ್ಟು ಬೇಕಾದರೂ ಖರೀದಿಸಬಹುದು, ಯಾರು ಯಾರಿಂದ ಬೇಕಾದರೂ ಭೂಮಿಯನ್ನು ಗುತ್ತಿಗೆಗೆ ಪಡೆದುಕೊಳ್ಳಬಹುದು ಎಂಬ ಕಾನೂನುಗಳನ್ನು ತರಲಾಗುತ್ತಿದೆ. ಇವುಗಳನ್ನೆಲ್ಲಾ ಪ್ರತಿಭಟಿಸಿ ನಾವು ಮೇ 20ರ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ರೈತ ವರ್ಗಕ್ಕೆ ಕರೆ ನೀಡುತ್ತೇವೆ ಎಂದು ಸಂಯುಕ್ತ ಹೋರಾಟ ಹೇಳಿದೆ.

ರೈತರ ಬೆಳೆಯ ಬೆಲೆ ನಿಗದಿ, ಬೆಲೆ ನಿಯಂತ್ರಣ ಹಾಗೂ ಬೆಂಬಲ ಬೆಲೆಯ ಜಾರಿಗಾಗಿ ಇದ್ದ ಎಪಿಎಂಸಿಗಳನ್ನು ದುರ್ಬಲಗೊಳಿಸಿ, ಮುಚ್ಚಿಹಾಕಿ ಕೃಷಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಖಾಸಗೀ ಕಂಪನಿಗಳಿಗೆ ಒಪ್ಪಿಸುವ ಸಂಚು ರೂಪಗೊಂಡಿದೆ. ರೈತರ ಬೆಳೆಯನ್ನೆಲ್ಲಾ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ, ರೇಟಿನ ಜೂಜಾಟ ನಡೆಸಿ, ಮನಬಂದ ಬೆಲೆಗೆ ಮಾರಿ ರೈತರನ್ನೂ ಮತ್ತು ಸಾರ್ವಜನಿಕರನ್ನು ಇಬ್ಬರನ್ನೂ ದೋಚುವ ಪರವಾನಗಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ರೈತರು ತಮ್ಮ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ತರಬೇಕೆಂದು ಒತ್ತಾಯಿಸುತ್ತಿದ್ದರೂ, ಐತಿಹಾಸಿಕ ದೆಹಲಿ ರೈತಾಂದೋಲನಕ್ಕೆ ಮಣಿದು, ಅದನ್ನು ಜಾರಿ ಮಾಡುವುದಾಗಿ ತಾತ್ವಿಕವಾಗಿ ಒಪ್ಪಿಕೊಂಡಿದ್ದರೂ, ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯನ್ನೂ ಇಡದೆ, ರೈತರನ್ನು ಖಾಸಗೀ ಮಾರುಕಟ್ಟೆಯ ಜೂಜಾಟಕ್ಕೆ ತಳ್ಳುವ ಹುನ್ನಾರಗಳೇ ಚಾಲ್ತಿಯಲ್ಲಿವೆ. ಅದಕ್ಕಾಗಿಯೇ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿ ರಾಷ್ಟ್ರೀಯ ಚೌಕಟ್ಟು ನೀತಿ”ಯನ್ನು ಕೇಂದ್ರ ಸರ್ಕಾರವು ಸಿದ್ಧಪಡಿಸಿ ರಾಜ್ಯಗಳ ಮೂಲಕ ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅದು ಆರೋಪಿಸಿದೆ.

ಮೋದಿ ಸರ್ಕಾರವು ಇದುವರೆಗೆ ಕಾರ್ಪೊರೇಟ್‌ ಕಂಪನಿಗಳ 50 ಲಕ್ಕ ಕೋಟಿಗೂ ಹೆಚ್ಚಿನ ಸಾಲವನ್ನು ಮನ್ನಾ ಮಾಡಿ ಪೋಷಿಸಿದೆ. ಆದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು ಅಗತ್ಯವಿರುವ 5 ಲಕ್ಷ ಕೋಟಿ ಹಣ ತನ್ನ ಬಳಿ ಇಲ್ಲ ಎಂದು ನಾಟಕವಾಡುತ್ತಿದೆ. ವಾಸ್ತವದಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಬದಲು, ಅವರನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿ, ಅವರು ಭೂಮಿಯನ್ನು ಬಂಡವಾಳಿಗರಿಗೆ ಮಾರಿಕೊಂಡು ಹಳ್ಳಿಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ. ಕಾರ್ಪೊರೇಟ್‌ ಪರವಾಗಿ ನಡೆಯುತ್ತಿರುವ ಈ ಹುನ್ನಾರುಗಳು ರೈತರು ಮತ್ತು ಕಾರ್ಮಿಕರನ್ನು ಮಾತ್ರವಲ್ಲ,ಇಡೀ ದೇಶದ ಜನರ ಮೇಲೆ ವಿಪರೀತಕರ ಪರಿಣಾಮಗಳನ್ನು ಬೀರಲಿವೆ. ಮುಖ್ಯವಾಗಿ ಸರ್ವ ಕ್ಷೇತ್ರಗಳ ಖಾಸಗೀಕರಣ ಮತ್ತು ಕೇಂದ್ರ ಸರ್ಕಾರ ನಡೆಸಿರುವ ಜಿ ಎಸ್‌ ಟಿ ಮತ್ತು ಸೆಸ್‌ ಲೂಟಿಯಿಂದಾಗಿ ಬೆಲೆಗಳು ಏರುತ್ತಾ ಹೋಗಲಿದೆ, ಬದುಕು ದುಬಾರಿಯಾಗುತ್ತಾ ಹೋಗಲಿದೆ. ಮತ್ತೊಂದೆಡೆ ರೈತರನ್ನು ಭೂಮಿಯಿಂದ ಬಿಡಿಸುವ, ಮತ್ತು ಆದಾಯವನ್ನು ಕುಗ್ಗಿಸುತ್ತವೆ. ಒಟ್ಟಾರೆ ಕಂಪನಿಗಳ ಹಿತ ಕಾಯಲು ರೈತರ, ಕಾರ್ಮಿಕರ, ಯುವ ತಲೆಮಾರಿನ ಹಾಗೂ ಎಲ್ಲಾ ಜನಸಾಮಾನ್ಯರ ಬದುಕನ್ನು ಸಂಕಷ್ಟದ ಕೂಪಕ್ಕೆ ತಳ್ಳಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಸಂಯುಕ್ತ ಹೋರಾಟವು ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರವಂತೂ ಜನಸಾಮಾನ್ಯರ ಪರವಾಗಿ ಇದ್ದಿದ್ದಿಲ್ಲ, ಅದು ಸದಾ ಕಂಪನಿಗಳ ಪರ, ಖಾಸಗೀಕರಣದ ಪರ ನಿಲುವನ್ನೇ ತಾಳಿದೆ. ಹಾಗಾಗಿ ಅದರ ಜೊತೆ ಗುದ್ದಾಡಬೇಕೇ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವ ಸ್ಥಿತಿ ಇಲ್ಲ. ಆದರೆ ಬಿಜೆಪಿ ತರುತ್ತಿರುವ ಈ ನೀತಿಗಳನ್ನೆಲ್ಲ ವಿರೋಧ ಪಕ್ಷವಾಗಿದ್ದಾಗ ವಿರೋಧಿಸಿದ್ದ ಮತ್ತು ತಾನು ಅಧಿಕಾರಕ್ಕೆ ಬಂದರೆ ಅವನ್ನೆಲ್ಲಾ ರದ್ದು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಲಿಖಿತ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಪಕ್ಷ ಅದಿಕಾರಕ್ಕೆ ಬಂದ ನಂತರ ಚಾಚೂ ತಪ್ಪದೆ ಬಿಜೆಪಿಯ ನೀತಿಗಳನ್ನೇ ಪಾಲಿಸುತ್ತಿದೆ. ಬಗರ್‌ ಹುಕುಂ ರೈತರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಇದ್ದಬದ್ದ ಭೂಮಿಯನ್ನೂ ರೈತರಿಂದ ಕಸಿದು ಕಂಪನಿಗಳಿಗೆ ನೀಡುವ ಕೆಲಸ ಮಾಡುತ್ತಿದೆ. ಇದೊಂದು ವಿಶ್ವಾಸ ದ್ರೋಹದ ಕೆಲಸವಾಗಿದೆ ಎಂದು ಅದು ತಿಳಿಸಿದೆ.

ಹೀಗಾಗಿಯೇ ಮೇ 20ರಂದು ದೇಶವ್ಯಾಪಿಯಾಗಿ ನಡೆಸುತ್ತಿರುವ ಮುಷ್ಕರದಲ್ಲಿ ನಾಡಿನ ರೈತರೆಲ್ಲಾ ಭಾಗವಹಿಸಲು ಕರೆ ನೀಡುತ್ತೇವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ನಮ್ಮ ಜಿಲ್ಲೆಯ ಎಲ್ಲಾ ರೈತರು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸಬೇಕಿದೆ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸಬೇಕಿದೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸಬೇಕಿದೆ ಎಂದು ಅದು ಎಚ್ಚರಿಸಿದೆ.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಬಿಜೆಪಿ ಜಾರಿಗೆ ತಂದಿದ್ದ “ಭೂ ತಿದ್ದುಪಡಿ ಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರು ಕಾಯ್ದೆ” ಮುಂತಾದವನ್ನು ಕೊಟ್ಟ ಮಾತಿನಂತೆ ಈ ಕೂಡಲೇ ಹಿಂಪಡೆಯಬೇಕು. ರೈತರಿಗೆ ಬೆಲೆ ಖಾತ್ರಿ ಕಾಯ್ದೆ, ಬಗರ್‌ ಹುಕುಂ ರೈತರಿಗೆ ಹಕ್ಕುಪತ್ರ, ದುಡಿಯುವ ಜನರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು. ಇವು ನಮ್ಮ ಹಕ್ಕೊತ್ತಾಯಗಳು ಎಂದು ಸಂಯುಕ್ತ ಹೋರಾಟವು ಹೇಳಿಕೆಯಲ್ಲಿ ತಿಳಿಸಿದೆ.

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...