Homeಕರ್ನಾಟಕಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು...

ಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು ಸಂಯುಕ್ತ ಹೋರಾಟ ಕರೆ

- Advertisement -
- Advertisement -

ಬೆಂಗಳೂರು: ಇದೇ ಮೇ 20ರಂದು ಜೆಸಿಟಿಯು ಮತ್ತು ಎಸ್‌ ಕೆ ಎಂ‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಮಿಕರೊಂದಿಗೆ ಅಂದು ರೈತರು ಕೂಡ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಎರಡರ ವಿರುದ್ಧವೂ ಪ್ರತಿಭಟನೆಯನ್ನು ದಾಖಲಿಸಬೇಕಿದೆ ಎಂದು ರಾಜ್ಯ ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ-ಕರ್ನಾಟಕವು ಹೇಳಿಕೆಯಲ್ಲಿ ಕರೆ ನೀಡಿದೆ.

ಅಂಬಾನಿ-ಅದಾನಿಯಂತಹ ಬಕಾಸುರ ಕಂಪನಿಗಳ ಕಣ್ಣಿ ಬಿದ್ದಿರುವುದು ಕಾರ್ಮಿಕರ ಶ್ರಮ ಮತ್ತು ಸಾರ್ವಜನಿಕ ಸಂಪತ್ತಿನ ಮೇಲೆ ಮಾತ್ರವಲ್ಲ ರೈತರ ಭೂಮಿ ಮತ್ತು ಬೆಳೆಯ ಮೇಲೆ ಸಹ. ನಮ್ಮ ಭೂಮಿಯನ್ನು ಅವರು ಕಬಳಿಸಬೇಕಿದೆ, ನಮ್ಮ ಬೆಳೆಯನ್ನು ಅವರು ನಿಯಂತ್ರಿಸಬೇಕಿದೆ. ಆದ್ದರಿಂದ ಭೂಮಿಯ ಖರೀದಿಯ ಮೇಲೆ, ಭೂಮಿಯ ಗುತ್ತಿಗೆ ಮೇಲೆ ಇದ್ದ ನಿರ್ಬಂಧಗಳನ್ನೆಲ್ಲಾ ತೆಗೆದು, ಯಾರು ಎಷ್ಟು ಬೇಕಾದರೂ ಖರೀದಿಸಬಹುದು, ಯಾರು ಯಾರಿಂದ ಬೇಕಾದರೂ ಭೂಮಿಯನ್ನು ಗುತ್ತಿಗೆಗೆ ಪಡೆದುಕೊಳ್ಳಬಹುದು ಎಂಬ ಕಾನೂನುಗಳನ್ನು ತರಲಾಗುತ್ತಿದೆ. ಇವುಗಳನ್ನೆಲ್ಲಾ ಪ್ರತಿಭಟಿಸಿ ನಾವು ಮೇ 20ರ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ರೈತ ವರ್ಗಕ್ಕೆ ಕರೆ ನೀಡುತ್ತೇವೆ ಎಂದು ಸಂಯುಕ್ತ ಹೋರಾಟ ಹೇಳಿದೆ.

ರೈತರ ಬೆಳೆಯ ಬೆಲೆ ನಿಗದಿ, ಬೆಲೆ ನಿಯಂತ್ರಣ ಹಾಗೂ ಬೆಂಬಲ ಬೆಲೆಯ ಜಾರಿಗಾಗಿ ಇದ್ದ ಎಪಿಎಂಸಿಗಳನ್ನು ದುರ್ಬಲಗೊಳಿಸಿ, ಮುಚ್ಚಿಹಾಕಿ ಕೃಷಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಖಾಸಗೀ ಕಂಪನಿಗಳಿಗೆ ಒಪ್ಪಿಸುವ ಸಂಚು ರೂಪಗೊಂಡಿದೆ. ರೈತರ ಬೆಳೆಯನ್ನೆಲ್ಲಾ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ, ರೇಟಿನ ಜೂಜಾಟ ನಡೆಸಿ, ಮನಬಂದ ಬೆಲೆಗೆ ಮಾರಿ ರೈತರನ್ನೂ ಮತ್ತು ಸಾರ್ವಜನಿಕರನ್ನು ಇಬ್ಬರನ್ನೂ ದೋಚುವ ಪರವಾನಗಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ರೈತರು ತಮ್ಮ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ತರಬೇಕೆಂದು ಒತ್ತಾಯಿಸುತ್ತಿದ್ದರೂ, ಐತಿಹಾಸಿಕ ದೆಹಲಿ ರೈತಾಂದೋಲನಕ್ಕೆ ಮಣಿದು, ಅದನ್ನು ಜಾರಿ ಮಾಡುವುದಾಗಿ ತಾತ್ವಿಕವಾಗಿ ಒಪ್ಪಿಕೊಂಡಿದ್ದರೂ, ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯನ್ನೂ ಇಡದೆ, ರೈತರನ್ನು ಖಾಸಗೀ ಮಾರುಕಟ್ಟೆಯ ಜೂಜಾಟಕ್ಕೆ ತಳ್ಳುವ ಹುನ್ನಾರಗಳೇ ಚಾಲ್ತಿಯಲ್ಲಿವೆ. ಅದಕ್ಕಾಗಿಯೇ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿ ರಾಷ್ಟ್ರೀಯ ಚೌಕಟ್ಟು ನೀತಿ”ಯನ್ನು ಕೇಂದ್ರ ಸರ್ಕಾರವು ಸಿದ್ಧಪಡಿಸಿ ರಾಜ್ಯಗಳ ಮೂಲಕ ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅದು ಆರೋಪಿಸಿದೆ.

ಮೋದಿ ಸರ್ಕಾರವು ಇದುವರೆಗೆ ಕಾರ್ಪೊರೇಟ್‌ ಕಂಪನಿಗಳ 50 ಲಕ್ಕ ಕೋಟಿಗೂ ಹೆಚ್ಚಿನ ಸಾಲವನ್ನು ಮನ್ನಾ ಮಾಡಿ ಪೋಷಿಸಿದೆ. ಆದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು ಅಗತ್ಯವಿರುವ 5 ಲಕ್ಷ ಕೋಟಿ ಹಣ ತನ್ನ ಬಳಿ ಇಲ್ಲ ಎಂದು ನಾಟಕವಾಡುತ್ತಿದೆ. ವಾಸ್ತವದಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಬದಲು, ಅವರನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿ, ಅವರು ಭೂಮಿಯನ್ನು ಬಂಡವಾಳಿಗರಿಗೆ ಮಾರಿಕೊಂಡು ಹಳ್ಳಿಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ. ಕಾರ್ಪೊರೇಟ್‌ ಪರವಾಗಿ ನಡೆಯುತ್ತಿರುವ ಈ ಹುನ್ನಾರುಗಳು ರೈತರು ಮತ್ತು ಕಾರ್ಮಿಕರನ್ನು ಮಾತ್ರವಲ್ಲ,ಇಡೀ ದೇಶದ ಜನರ ಮೇಲೆ ವಿಪರೀತಕರ ಪರಿಣಾಮಗಳನ್ನು ಬೀರಲಿವೆ. ಮುಖ್ಯವಾಗಿ ಸರ್ವ ಕ್ಷೇತ್ರಗಳ ಖಾಸಗೀಕರಣ ಮತ್ತು ಕೇಂದ್ರ ಸರ್ಕಾರ ನಡೆಸಿರುವ ಜಿ ಎಸ್‌ ಟಿ ಮತ್ತು ಸೆಸ್‌ ಲೂಟಿಯಿಂದಾಗಿ ಬೆಲೆಗಳು ಏರುತ್ತಾ ಹೋಗಲಿದೆ, ಬದುಕು ದುಬಾರಿಯಾಗುತ್ತಾ ಹೋಗಲಿದೆ. ಮತ್ತೊಂದೆಡೆ ರೈತರನ್ನು ಭೂಮಿಯಿಂದ ಬಿಡಿಸುವ, ಮತ್ತು ಆದಾಯವನ್ನು ಕುಗ್ಗಿಸುತ್ತವೆ. ಒಟ್ಟಾರೆ ಕಂಪನಿಗಳ ಹಿತ ಕಾಯಲು ರೈತರ, ಕಾರ್ಮಿಕರ, ಯುವ ತಲೆಮಾರಿನ ಹಾಗೂ ಎಲ್ಲಾ ಜನಸಾಮಾನ್ಯರ ಬದುಕನ್ನು ಸಂಕಷ್ಟದ ಕೂಪಕ್ಕೆ ತಳ್ಳಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಸಂಯುಕ್ತ ಹೋರಾಟವು ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರವಂತೂ ಜನಸಾಮಾನ್ಯರ ಪರವಾಗಿ ಇದ್ದಿದ್ದಿಲ್ಲ, ಅದು ಸದಾ ಕಂಪನಿಗಳ ಪರ, ಖಾಸಗೀಕರಣದ ಪರ ನಿಲುವನ್ನೇ ತಾಳಿದೆ. ಹಾಗಾಗಿ ಅದರ ಜೊತೆ ಗುದ್ದಾಡಬೇಕೇ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವ ಸ್ಥಿತಿ ಇಲ್ಲ. ಆದರೆ ಬಿಜೆಪಿ ತರುತ್ತಿರುವ ಈ ನೀತಿಗಳನ್ನೆಲ್ಲ ವಿರೋಧ ಪಕ್ಷವಾಗಿದ್ದಾಗ ವಿರೋಧಿಸಿದ್ದ ಮತ್ತು ತಾನು ಅಧಿಕಾರಕ್ಕೆ ಬಂದರೆ ಅವನ್ನೆಲ್ಲಾ ರದ್ದು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಲಿಖಿತ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಪಕ್ಷ ಅದಿಕಾರಕ್ಕೆ ಬಂದ ನಂತರ ಚಾಚೂ ತಪ್ಪದೆ ಬಿಜೆಪಿಯ ನೀತಿಗಳನ್ನೇ ಪಾಲಿಸುತ್ತಿದೆ. ಬಗರ್‌ ಹುಕುಂ ರೈತರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಇದ್ದಬದ್ದ ಭೂಮಿಯನ್ನೂ ರೈತರಿಂದ ಕಸಿದು ಕಂಪನಿಗಳಿಗೆ ನೀಡುವ ಕೆಲಸ ಮಾಡುತ್ತಿದೆ. ಇದೊಂದು ವಿಶ್ವಾಸ ದ್ರೋಹದ ಕೆಲಸವಾಗಿದೆ ಎಂದು ಅದು ತಿಳಿಸಿದೆ.

ಹೀಗಾಗಿಯೇ ಮೇ 20ರಂದು ದೇಶವ್ಯಾಪಿಯಾಗಿ ನಡೆಸುತ್ತಿರುವ ಮುಷ್ಕರದಲ್ಲಿ ನಾಡಿನ ರೈತರೆಲ್ಲಾ ಭಾಗವಹಿಸಲು ಕರೆ ನೀಡುತ್ತೇವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ನಮ್ಮ ಜಿಲ್ಲೆಯ ಎಲ್ಲಾ ರೈತರು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸಬೇಕಿದೆ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸಬೇಕಿದೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸಬೇಕಿದೆ ಎಂದು ಅದು ಎಚ್ಚರಿಸಿದೆ.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಬಿಜೆಪಿ ಜಾರಿಗೆ ತಂದಿದ್ದ “ಭೂ ತಿದ್ದುಪಡಿ ಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರು ಕಾಯ್ದೆ” ಮುಂತಾದವನ್ನು ಕೊಟ್ಟ ಮಾತಿನಂತೆ ಈ ಕೂಡಲೇ ಹಿಂಪಡೆಯಬೇಕು. ರೈತರಿಗೆ ಬೆಲೆ ಖಾತ್ರಿ ಕಾಯ್ದೆ, ಬಗರ್‌ ಹುಕುಂ ರೈತರಿಗೆ ಹಕ್ಕುಪತ್ರ, ದುಡಿಯುವ ಜನರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು. ಇವು ನಮ್ಮ ಹಕ್ಕೊತ್ತಾಯಗಳು ಎಂದು ಸಂಯುಕ್ತ ಹೋರಾಟವು ಹೇಳಿಕೆಯಲ್ಲಿ ತಿಳಿಸಿದೆ.

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...