Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...