Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...