Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...