Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...