Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...