Homeಮುಖಪುಟನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10...

ನಕಲಿ ಮದ್ಯ ದುರಂತ | 21 ದಿನಗೂಲಿ ಕಾರ್ಮಿಕರು ಸಾವು: ನಾಲ್ವರು ಅಧಿಕಾರಿಗಳು ಅಮಾನತು, 10 ಜನರ ಬಂಧನ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದಲ್ಲಿ ನಕಲಿ ವಿಷಪೂರಿತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸುಮಾರು 10 ಜನರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಸಂಜೆ ಮಜಿತಾ ಪ್ರದೇಶದ ಸುಮಾರು ಐದು ಹಳ್ಳಿಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ಈ ಬೆನ್ನಲ್ಲೇ ಹಲವರು ಅಸ್ವಸ್ಥಗೊಂಡಿದ್ದು, ಈ ಪೈಕಿ ಕೆಲವರು ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಆದರೆ, ಈ ವಿಚಾರವನ್ನು ಮುಚ್ಚಿಟ್ಟಿದ್ದ ಗ್ರಾಮಸ್ಥರು, ಮೃತರ ಅಂತ್ಯ ಸಂಸ್ಕಾರ ಮುಗಿಸಿದ್ದರು.

ಸೋಮವಾರ ಸಂಜೆಯ ವೇಳೆ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣ ವೈದ್ಯರ ತಂಡವೊಂದನ್ನು ಹಳ್ಳಿಗಳಿಗೆ ಕಳಿಸಿದ್ದರು. ವೈದ್ಯರು ಮನೆ ಮನೆಗೆ ಹೋಗಿ ನಕಲಿ ಮದ್ಯ ಕುಡಿದವರನ್ನು ತಪಾಸಣೆ ನಡೆಸಿದ್ದರು ಮತ್ತು ಗಂಭೀರ ಸ್ಥಿತಿಯಲ್ಲಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೂ, ಮಂಗಳವಾರ ಸಂಜೆಯ ವೇಳೆ ಸಾವಿನ ಸಂಖ್ಯೆ 15 ಆಗಿತ್ತು. ಇಂದು ಮುಂಜಾನೆ ಅದು 21ಕ್ಕೆ ತಲುಪಿದೆ.

ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ. ಮಜಿತಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಸ್ಥಳೀಯ ಅಬಕಾರಿ ಮತ್ತು ತೆರಿಗೆ ಅಧಿಕಾರಿ (ಇಟಿಒ) ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸಾವಿಗೀಡಾದವರು ಮತ್ತು ಸೋಮವಾರದಿಂದ ಆಸ್ಪತ್ರೆಗೆ ದಾಖಲಾದ ಹೆಚ್ಚಿನ ಜನರು ದಿನಗೂಲಿ ಕಾರ್ಮಿಕರು. ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಾಗಿರುವ 10 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಹೇಳಿದ್ದಾರೆ.

ಮಜಿಥಿಯಾದ ಭಂಗಲಿ, ಪಾತಾಳಪುರಿ, ಮರಾರಿ ಕಲನ್ ಮತ್ತು ಥೆರೆವಾಲ್ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೆಥನಾಲ್ ಎಂಬ ಅಗ್ಗದ ಕೈಗಾರಿಕಾ ಮದ್ಯವು ಸಣ್ಣ ಪ್ರಮಾಣದಲ್ಲಿಯೂ ಸಹ ಮಾರಕವಾಗಿದ್ದು, ಅದನ್ನು ಅಕ್ರಮ ಮದ್ಯವನ್ನು ತಯಾರಿಸಲು ಆನ್‌ಲೈನ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸಲಾಗಿದೆ ಎಂದು ತಿಳಿದುಬಂದಿದೆ.

ಜನ ಪ್ರತಿನಿಧಿಗಳು, ಪೊಲೀಸ್ ಮತ್ತು ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ದುರಂತ ಸಂಭವಿಸಿದ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ವೈದ್ಯಕೀಯ ತಂಡವೊಂದನ್ನು ಗ್ರಾಮಗಳಲ್ಲಿ ನೇಮಿಸಲಾಗಿದೆ. ಅವರು ಯಾವುದೇ ಅನಾರೋಗ್ಯ ಲಕ್ಷಣ ಇಲ್ಲದಿದ್ದವರೂ ಸೇರಿದಂತೆ, ನಕಲಿ ಮದ್ಯ ಸೇವಿಸಿದ ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಿ ಆಸ್ಪತ್ರೆ ಸೇರಿಸುತ್ತಿದ್ದಾರೆ.

ದುರಂತ ಸ್ಥಳಕ್ಕೆ ಸಿಎಂ ಭೇಟಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ದುರಂತ ಸಂಭವಿಸಿದ ಗ್ರಾಮಗಳಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳು ಇದ್ದರೂ, ಅವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್‌ನ ಮಹಿಳೆ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...