Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...