Homeಮುಖಪುಟಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

- Advertisement -
- Advertisement -

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ ನೀಡಿದ್ದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರೊಫೆಸರ್ ಅಲಿ ಅವರ ಹೇಳಿಕೆಯು, ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ಅವಹೇಳನವಾಗಿದ್ದು ಮತ್ತು ಕೋಮು ಸೌಹಾರ್ದತೆಯನ್ನು ಹಾಳುಗೆಡವುವ ಉದ್ದೇಶ ಹೊಂದಿದೆ ಎಂದು ಆಯೋಗ ಆರೋಪಿಸಿದೆ.

ವಿಶ್ವವಿದ್ಯಾನಿಲಯದ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಅಲಿ ಅವರನ್ನು ಬುಧವಾರ ಆಯೋಗದ ಮುಂದೆ ಹಾಜರಾಗಲು ನಿರ್ದೇಶಿಸಲಾಗಿದೆ. ಪ್ರೊಫೆಸರ್ ಅಲಿ ಅವರು ಮೇ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿಯನ್ನು ಹೊಗಳುತ್ತಿರುವ ಹಿಂದುತ್ವವಾದಿಗಳ ದ್ವಿಮುಖ ನೀತಿಯನ್ನು ಎತ್ತಿ ತೋರಿಸಿದ್ದರು.

“ಬಹುಶಃ ಅವರು ಗುಂಪು ಹತ್ಯೆಗಳು, ಅನಿಯಂತ್ರಿತ ಬುಲ್ಡೋಜಿಂಗ್ ಮತ್ತು ಬಿಜೆಪಿಯ ದ್ವೇಷ ಪ್ರಚಾರಕ್ಕೆ ಬಲಿಯಾದ ಇತರರ ಬಗ್ಗೆ ಕೂಡಾ ಭಾರತೀಯ ನಾಗರಿಕರಾಗಿ ಅವರನ್ನು ರಕ್ಷಿಸಬೇಕೆಂದು ಅಷ್ಟೇ ಜೋರಾಗಿ ಒತ್ತಾಯಿಸಬಹುದಿತ್ತು” ಎಂದು ಅವರು ಹೇಳಿದ್ದರು.

ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಪತ್ರಿಕಾಗೋಷ್ಠಿಗಳ ಮೂಲಕ ಹೇಳಲು ಹೊರಟಿದ್ದನ್ನು ವಾಸ್ತವವಾಗಿ ಕೂಡಾ ಮಾಡಬೇಕು. ಇಲ್ಲವೆಂದರೆ ಅದು ಕೇವಲ ಬೂಟಾಟಿಕೆ ಎಂದು ಪ್ರೊಫೆಸರ್ ಹೇಳಿದ್ದರು.

“ವಾಸ್ತವದಲ್ಲಿ ಮುಸ್ಲಿಮರು ಎದುರಿಸುತ್ತಿರುವುದು ಸರ್ಕಾರವು ತೋರಿಸಲು ಪ್ರಯತ್ನಿಸಿದಕ್ಕಿಂತ ಭಿನ್ನವಾಗಿದೆ. ಆದರೆ ಪತ್ರಿಕಾಗೋಷ್ಠಿಗಳು ಭಾರತವು ತನ್ನ ವೈವಿಧ್ಯತೆಯನ್ನು ಒಗ್ಗಟ್ಟಾಗಿದೆ ಎಂಬ ಒಂದು ಕಲ್ಪನೆಯಾಗಿ ಸಂಪೂರ್ಣವಾಗಿ ಸತ್ತಿಲ್ಲ ಎಂದು ತೋರಿಸಿದವು” ಎಂದು ಅವರು ಹೇಳಿದ್ದರು.

ಭಾನುವಾರ ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು, “ನಾಗರಿಕರು ಯಾವಾಗಲೂ ಯುದ್ಧದ ದುಷ್ಪರಿಣಾಮಗಳಿಗೆ ಒಳಗಾಗುತ್ತಲೆ ಇದ್ದಾರೆ… ಹಾಗಾದರೆ ನೀವು ಯುದ್ಧಕ್ಕಾಗಿ ಕೂಗಾಡಿದಾಗ ಅಥವಾ ಒಂದು ದೇಶವನ್ನು ನಾಶಮಾಡಬೇಕೆಂದು ಕರೆ ನೀಡಿದಾಗ, ನಿಖರವಾಗಿ ನೀವು ಏನು ಕೇಳುತ್ತಿದ್ದೀರಿ? ಇಡೀ ಜನರ ನರಮೇಧಕ್ಕಾಗಿಯೆ?” ಎಂದು ಶ್ನಿಸಿದ್ದರು.

ಮೇ 8 ರಂದು, ಆಪರೇಷನ್ ಸಿಂಧೂರ ಭಯೋತ್ಪಾದನೆಯನ್ನು ಎದುರಿಸುವ ಭಾರತದ ವಿಧಾನದಲ್ಲಿ ಕಾರ್ಯತಂತ್ರದ ಬದಲಾವಣೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳುತ್ತಾ ಯುದ್ಧಪ್ರೇಮಿಗಳ ವಿರುದ್ಧ ಎಚ್ಚರಿಕೆ ನೀಡಿದ್ದರು. ಈ ಯುದ್ಧದಿಂದಾಗಿ “ಬಡವರು ಅಸಮಾನವಾಗಿ ಬಳಲುತ್ತಿದ್ದಾರೆ ಮತ್ತು ಪ್ರಯೋಜನ ಪಡೆಯುವ ಏಕೈಕ ಜನರೆಂದರೆ ರಾಜಕಾರಣಿಗಳು ಮತ್ತು ರಕ್ಷಣಾ ಕಂಪನಿಗಳು” ಎಂದು ಅವರು ಹೇಳಿದ್ದರು.

ಪ್ರೊಫೆಸರ್ ಅಲಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ರಾಜ್ಯ ಮಹಿಳಾ ಆಯೋಗವು ಕಳವಳಗಳ ವ್ಯಕ್ತಪಡಿಸಿದೆ. ಪ್ರೊಫೆಸರ್ ಅವರು ಮಹಿಳಾ ಅಧಿಕಾರಿಗಳ ಬಗ್ಗೆ ಅಗೌರವ, ಭಯೋತ್ಪಾದನೆಯ ಮೇಲಿನ ಮಿಲಿಟರಿ ಕ್ರಮದ ದೂಷಣೆ, ಸತ್ಯಗಳ ತಪ್ಪು ನಿರೂಪಣೆ, ಕೋಮು ಅಶಾಂತಿಯ ಪ್ರಚೋದನೆ, ಮಹಿಳೆಯರ ಘನತೆಯ ಉಲ್ಲಂಘನೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಗದಿಪಡಿಸಿದ ನೈತಿಕ ಮಾನದಂಡಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಹಿಳಾ ಆಯೋಗ ಆರೋಪಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ಹೇಳಿಕೆಗಳು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರವನ್ನು ದುರ್ಬಲಗೊಳಿಸುತ್ತವೆ ಮತ್ತು ಮಿಲಿಟರಿ ಕ್ರಮಗಳ ಹಿಂದೆ ಕೋಮು ಉದ್ದೇಶಗಳಿವೆ ಎಂದು ಪ್ರತಿಪಾದಿಸುತ್ತಿವೆ ಎಂದು ಆಯೋಗ ಆರೋಪಿಸಿದೆ. ಪ್ರೊಫೆಸರ್ ಅವರು ಲಿಖಿತ ವಿವರಣೆ ನೀಡಿ, ಅವರ ಪ್ರತಿಪಾದನೆಗೆ ಸಂಬಂಧಿತ ದಾಖಲೆಗಳು, ವಿಶ್ವವಿದ್ಯಾಲಯದ ನೀತಿ ಸಂಹಿತೆಯ ಪ್ರತಿ ಮತ್ತು ಅವರ ಅಧ್ಯಾಪಕರ ಒಪ್ಪಂದವನ್ನು ಸಲ್ಲಿಸಬೇಕು ಎಂದು ಆಯೋಗ ಕೇಳಿದೆ.

“ನಿರ್ದೇಶಿತ ಅವಧಿಯೊಳಗೆ ಸಾಕಷ್ಟು ಕಾರಣವಿಲ್ಲದೆ ಹಾಜರಾಗಲು ವಿಫಲವಾದರೆ, ಆಯೋಗದ ಸಂಬಂಧಿತ ಕಾನೂನುಗಳು ಮತ್ತು ಅಧಿಕಾರಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಮಹಿಳಾ ಆಯೋಗ ಎಚ್ಚರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...