Homeಮುಖಪುಟಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

- Advertisement -
- Advertisement -

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ ನೀಡಿದ್ದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರೊಫೆಸರ್ ಅಲಿ ಅವರ ಹೇಳಿಕೆಯು, ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ಅವಹೇಳನವಾಗಿದ್ದು ಮತ್ತು ಕೋಮು ಸೌಹಾರ್ದತೆಯನ್ನು ಹಾಳುಗೆಡವುವ ಉದ್ದೇಶ ಹೊಂದಿದೆ ಎಂದು ಆಯೋಗ ಆರೋಪಿಸಿದೆ.

ವಿಶ್ವವಿದ್ಯಾನಿಲಯದ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಅಲಿ ಅವರನ್ನು ಬುಧವಾರ ಆಯೋಗದ ಮುಂದೆ ಹಾಜರಾಗಲು ನಿರ್ದೇಶಿಸಲಾಗಿದೆ. ಪ್ರೊಫೆಸರ್ ಅಲಿ ಅವರು ಮೇ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿಯನ್ನು ಹೊಗಳುತ್ತಿರುವ ಹಿಂದುತ್ವವಾದಿಗಳ ದ್ವಿಮುಖ ನೀತಿಯನ್ನು ಎತ್ತಿ ತೋರಿಸಿದ್ದರು.

“ಬಹುಶಃ ಅವರು ಗುಂಪು ಹತ್ಯೆಗಳು, ಅನಿಯಂತ್ರಿತ ಬುಲ್ಡೋಜಿಂಗ್ ಮತ್ತು ಬಿಜೆಪಿಯ ದ್ವೇಷ ಪ್ರಚಾರಕ್ಕೆ ಬಲಿಯಾದ ಇತರರ ಬಗ್ಗೆ ಕೂಡಾ ಭಾರತೀಯ ನಾಗರಿಕರಾಗಿ ಅವರನ್ನು ರಕ್ಷಿಸಬೇಕೆಂದು ಅಷ್ಟೇ ಜೋರಾಗಿ ಒತ್ತಾಯಿಸಬಹುದಿತ್ತು” ಎಂದು ಅವರು ಹೇಳಿದ್ದರು.

ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಪತ್ರಿಕಾಗೋಷ್ಠಿಗಳ ಮೂಲಕ ಹೇಳಲು ಹೊರಟಿದ್ದನ್ನು ವಾಸ್ತವವಾಗಿ ಕೂಡಾ ಮಾಡಬೇಕು. ಇಲ್ಲವೆಂದರೆ ಅದು ಕೇವಲ ಬೂಟಾಟಿಕೆ ಎಂದು ಪ್ರೊಫೆಸರ್ ಹೇಳಿದ್ದರು.

“ವಾಸ್ತವದಲ್ಲಿ ಮುಸ್ಲಿಮರು ಎದುರಿಸುತ್ತಿರುವುದು ಸರ್ಕಾರವು ತೋರಿಸಲು ಪ್ರಯತ್ನಿಸಿದಕ್ಕಿಂತ ಭಿನ್ನವಾಗಿದೆ. ಆದರೆ ಪತ್ರಿಕಾಗೋಷ್ಠಿಗಳು ಭಾರತವು ತನ್ನ ವೈವಿಧ್ಯತೆಯನ್ನು ಒಗ್ಗಟ್ಟಾಗಿದೆ ಎಂಬ ಒಂದು ಕಲ್ಪನೆಯಾಗಿ ಸಂಪೂರ್ಣವಾಗಿ ಸತ್ತಿಲ್ಲ ಎಂದು ತೋರಿಸಿದವು” ಎಂದು ಅವರು ಹೇಳಿದ್ದರು.

ಭಾನುವಾರ ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು, “ನಾಗರಿಕರು ಯಾವಾಗಲೂ ಯುದ್ಧದ ದುಷ್ಪರಿಣಾಮಗಳಿಗೆ ಒಳಗಾಗುತ್ತಲೆ ಇದ್ದಾರೆ… ಹಾಗಾದರೆ ನೀವು ಯುದ್ಧಕ್ಕಾಗಿ ಕೂಗಾಡಿದಾಗ ಅಥವಾ ಒಂದು ದೇಶವನ್ನು ನಾಶಮಾಡಬೇಕೆಂದು ಕರೆ ನೀಡಿದಾಗ, ನಿಖರವಾಗಿ ನೀವು ಏನು ಕೇಳುತ್ತಿದ್ದೀರಿ? ಇಡೀ ಜನರ ನರಮೇಧಕ್ಕಾಗಿಯೆ?” ಎಂದು ಶ್ನಿಸಿದ್ದರು.

ಮೇ 8 ರಂದು, ಆಪರೇಷನ್ ಸಿಂಧೂರ ಭಯೋತ್ಪಾದನೆಯನ್ನು ಎದುರಿಸುವ ಭಾರತದ ವಿಧಾನದಲ್ಲಿ ಕಾರ್ಯತಂತ್ರದ ಬದಲಾವಣೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳುತ್ತಾ ಯುದ್ಧಪ್ರೇಮಿಗಳ ವಿರುದ್ಧ ಎಚ್ಚರಿಕೆ ನೀಡಿದ್ದರು. ಈ ಯುದ್ಧದಿಂದಾಗಿ “ಬಡವರು ಅಸಮಾನವಾಗಿ ಬಳಲುತ್ತಿದ್ದಾರೆ ಮತ್ತು ಪ್ರಯೋಜನ ಪಡೆಯುವ ಏಕೈಕ ಜನರೆಂದರೆ ರಾಜಕಾರಣಿಗಳು ಮತ್ತು ರಕ್ಷಣಾ ಕಂಪನಿಗಳು” ಎಂದು ಅವರು ಹೇಳಿದ್ದರು.

ಪ್ರೊಫೆಸರ್ ಅಲಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ರಾಜ್ಯ ಮಹಿಳಾ ಆಯೋಗವು ಕಳವಳಗಳ ವ್ಯಕ್ತಪಡಿಸಿದೆ. ಪ್ರೊಫೆಸರ್ ಅವರು ಮಹಿಳಾ ಅಧಿಕಾರಿಗಳ ಬಗ್ಗೆ ಅಗೌರವ, ಭಯೋತ್ಪಾದನೆಯ ಮೇಲಿನ ಮಿಲಿಟರಿ ಕ್ರಮದ ದೂಷಣೆ, ಸತ್ಯಗಳ ತಪ್ಪು ನಿರೂಪಣೆ, ಕೋಮು ಅಶಾಂತಿಯ ಪ್ರಚೋದನೆ, ಮಹಿಳೆಯರ ಘನತೆಯ ಉಲ್ಲಂಘನೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಗದಿಪಡಿಸಿದ ನೈತಿಕ ಮಾನದಂಡಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಹಿಳಾ ಆಯೋಗ ಆರೋಪಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ಹೇಳಿಕೆಗಳು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರವನ್ನು ದುರ್ಬಲಗೊಳಿಸುತ್ತವೆ ಮತ್ತು ಮಿಲಿಟರಿ ಕ್ರಮಗಳ ಹಿಂದೆ ಕೋಮು ಉದ್ದೇಶಗಳಿವೆ ಎಂದು ಪ್ರತಿಪಾದಿಸುತ್ತಿವೆ ಎಂದು ಆಯೋಗ ಆರೋಪಿಸಿದೆ. ಪ್ರೊಫೆಸರ್ ಅವರು ಲಿಖಿತ ವಿವರಣೆ ನೀಡಿ, ಅವರ ಪ್ರತಿಪಾದನೆಗೆ ಸಂಬಂಧಿತ ದಾಖಲೆಗಳು, ವಿಶ್ವವಿದ್ಯಾಲಯದ ನೀತಿ ಸಂಹಿತೆಯ ಪ್ರತಿ ಮತ್ತು ಅವರ ಅಧ್ಯಾಪಕರ ಒಪ್ಪಂದವನ್ನು ಸಲ್ಲಿಸಬೇಕು ಎಂದು ಆಯೋಗ ಕೇಳಿದೆ.

“ನಿರ್ದೇಶಿತ ಅವಧಿಯೊಳಗೆ ಸಾಕಷ್ಟು ಕಾರಣವಿಲ್ಲದೆ ಹಾಜರಾಗಲು ವಿಫಲವಾದರೆ, ಆಯೋಗದ ಸಂಬಂಧಿತ ಕಾನೂನುಗಳು ಮತ್ತು ಅಧಿಕಾರಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಮಹಿಳಾ ಆಯೋಗ ಎಚ್ಚರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...