Homeಮುಖಪುಟಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

- Advertisement -
- Advertisement -

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ ನೀಡಿದ್ದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರೊಫೆಸರ್ ಅಲಿ ಅವರ ಹೇಳಿಕೆಯು, ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ಅವಹೇಳನವಾಗಿದ್ದು ಮತ್ತು ಕೋಮು ಸೌಹಾರ್ದತೆಯನ್ನು ಹಾಳುಗೆಡವುವ ಉದ್ದೇಶ ಹೊಂದಿದೆ ಎಂದು ಆಯೋಗ ಆರೋಪಿಸಿದೆ.

ವಿಶ್ವವಿದ್ಯಾನಿಲಯದ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಅಲಿ ಅವರನ್ನು ಬುಧವಾರ ಆಯೋಗದ ಮುಂದೆ ಹಾಜರಾಗಲು ನಿರ್ದೇಶಿಸಲಾಗಿದೆ. ಪ್ರೊಫೆಸರ್ ಅಲಿ ಅವರು ಮೇ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿಯನ್ನು ಹೊಗಳುತ್ತಿರುವ ಹಿಂದುತ್ವವಾದಿಗಳ ದ್ವಿಮುಖ ನೀತಿಯನ್ನು ಎತ್ತಿ ತೋರಿಸಿದ್ದರು.

“ಬಹುಶಃ ಅವರು ಗುಂಪು ಹತ್ಯೆಗಳು, ಅನಿಯಂತ್ರಿತ ಬುಲ್ಡೋಜಿಂಗ್ ಮತ್ತು ಬಿಜೆಪಿಯ ದ್ವೇಷ ಪ್ರಚಾರಕ್ಕೆ ಬಲಿಯಾದ ಇತರರ ಬಗ್ಗೆ ಕೂಡಾ ಭಾರತೀಯ ನಾಗರಿಕರಾಗಿ ಅವರನ್ನು ರಕ್ಷಿಸಬೇಕೆಂದು ಅಷ್ಟೇ ಜೋರಾಗಿ ಒತ್ತಾಯಿಸಬಹುದಿತ್ತು” ಎಂದು ಅವರು ಹೇಳಿದ್ದರು.

ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಪತ್ರಿಕಾಗೋಷ್ಠಿಗಳ ಮೂಲಕ ಹೇಳಲು ಹೊರಟಿದ್ದನ್ನು ವಾಸ್ತವವಾಗಿ ಕೂಡಾ ಮಾಡಬೇಕು. ಇಲ್ಲವೆಂದರೆ ಅದು ಕೇವಲ ಬೂಟಾಟಿಕೆ ಎಂದು ಪ್ರೊಫೆಸರ್ ಹೇಳಿದ್ದರು.

“ವಾಸ್ತವದಲ್ಲಿ ಮುಸ್ಲಿಮರು ಎದುರಿಸುತ್ತಿರುವುದು ಸರ್ಕಾರವು ತೋರಿಸಲು ಪ್ರಯತ್ನಿಸಿದಕ್ಕಿಂತ ಭಿನ್ನವಾಗಿದೆ. ಆದರೆ ಪತ್ರಿಕಾಗೋಷ್ಠಿಗಳು ಭಾರತವು ತನ್ನ ವೈವಿಧ್ಯತೆಯನ್ನು ಒಗ್ಗಟ್ಟಾಗಿದೆ ಎಂಬ ಒಂದು ಕಲ್ಪನೆಯಾಗಿ ಸಂಪೂರ್ಣವಾಗಿ ಸತ್ತಿಲ್ಲ ಎಂದು ತೋರಿಸಿದವು” ಎಂದು ಅವರು ಹೇಳಿದ್ದರು.

ಭಾನುವಾರ ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು, “ನಾಗರಿಕರು ಯಾವಾಗಲೂ ಯುದ್ಧದ ದುಷ್ಪರಿಣಾಮಗಳಿಗೆ ಒಳಗಾಗುತ್ತಲೆ ಇದ್ದಾರೆ… ಹಾಗಾದರೆ ನೀವು ಯುದ್ಧಕ್ಕಾಗಿ ಕೂಗಾಡಿದಾಗ ಅಥವಾ ಒಂದು ದೇಶವನ್ನು ನಾಶಮಾಡಬೇಕೆಂದು ಕರೆ ನೀಡಿದಾಗ, ನಿಖರವಾಗಿ ನೀವು ಏನು ಕೇಳುತ್ತಿದ್ದೀರಿ? ಇಡೀ ಜನರ ನರಮೇಧಕ್ಕಾಗಿಯೆ?” ಎಂದು ಶ್ನಿಸಿದ್ದರು.

ಮೇ 8 ರಂದು, ಆಪರೇಷನ್ ಸಿಂಧೂರ ಭಯೋತ್ಪಾದನೆಯನ್ನು ಎದುರಿಸುವ ಭಾರತದ ವಿಧಾನದಲ್ಲಿ ಕಾರ್ಯತಂತ್ರದ ಬದಲಾವಣೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳುತ್ತಾ ಯುದ್ಧಪ್ರೇಮಿಗಳ ವಿರುದ್ಧ ಎಚ್ಚರಿಕೆ ನೀಡಿದ್ದರು. ಈ ಯುದ್ಧದಿಂದಾಗಿ “ಬಡವರು ಅಸಮಾನವಾಗಿ ಬಳಲುತ್ತಿದ್ದಾರೆ ಮತ್ತು ಪ್ರಯೋಜನ ಪಡೆಯುವ ಏಕೈಕ ಜನರೆಂದರೆ ರಾಜಕಾರಣಿಗಳು ಮತ್ತು ರಕ್ಷಣಾ ಕಂಪನಿಗಳು” ಎಂದು ಅವರು ಹೇಳಿದ್ದರು.

ಪ್ರೊಫೆಸರ್ ಅಲಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ರಾಜ್ಯ ಮಹಿಳಾ ಆಯೋಗವು ಕಳವಳಗಳ ವ್ಯಕ್ತಪಡಿಸಿದೆ. ಪ್ರೊಫೆಸರ್ ಅವರು ಮಹಿಳಾ ಅಧಿಕಾರಿಗಳ ಬಗ್ಗೆ ಅಗೌರವ, ಭಯೋತ್ಪಾದನೆಯ ಮೇಲಿನ ಮಿಲಿಟರಿ ಕ್ರಮದ ದೂಷಣೆ, ಸತ್ಯಗಳ ತಪ್ಪು ನಿರೂಪಣೆ, ಕೋಮು ಅಶಾಂತಿಯ ಪ್ರಚೋದನೆ, ಮಹಿಳೆಯರ ಘನತೆಯ ಉಲ್ಲಂಘನೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಗದಿಪಡಿಸಿದ ನೈತಿಕ ಮಾನದಂಡಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಮಹಿಳಾ ಆಯೋಗ ಆರೋಪಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ಹೇಳಿಕೆಗಳು ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರವನ್ನು ದುರ್ಬಲಗೊಳಿಸುತ್ತವೆ ಮತ್ತು ಮಿಲಿಟರಿ ಕ್ರಮಗಳ ಹಿಂದೆ ಕೋಮು ಉದ್ದೇಶಗಳಿವೆ ಎಂದು ಪ್ರತಿಪಾದಿಸುತ್ತಿವೆ ಎಂದು ಆಯೋಗ ಆರೋಪಿಸಿದೆ. ಪ್ರೊಫೆಸರ್ ಅವರು ಲಿಖಿತ ವಿವರಣೆ ನೀಡಿ, ಅವರ ಪ್ರತಿಪಾದನೆಗೆ ಸಂಬಂಧಿತ ದಾಖಲೆಗಳು, ವಿಶ್ವವಿದ್ಯಾಲಯದ ನೀತಿ ಸಂಹಿತೆಯ ಪ್ರತಿ ಮತ್ತು ಅವರ ಅಧ್ಯಾಪಕರ ಒಪ್ಪಂದವನ್ನು ಸಲ್ಲಿಸಬೇಕು ಎಂದು ಆಯೋಗ ಕೇಳಿದೆ.

“ನಿರ್ದೇಶಿತ ಅವಧಿಯೊಳಗೆ ಸಾಕಷ್ಟು ಕಾರಣವಿಲ್ಲದೆ ಹಾಜರಾಗಲು ವಿಫಲವಾದರೆ, ಆಯೋಗದ ಸಂಬಂಧಿತ ಕಾನೂನುಗಳು ಮತ್ತು ಅಧಿಕಾರಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಮಹಿಳಾ ಆಯೋಗ ಎಚ್ಚರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...