Homeಮುಖಪುಟಚೀನಾದ 'ಗ್ಲೋಬಲ್ ಟೈಮ್ಸ್', 'ಕ್ಸಿನ್ಹುವಾ', ಟರ್ಕಿಯ 'ಟಿಆರ್‌ಟಿ ವರ್ಲ್ಡ್' ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ...

ಚೀನಾದ ‘ಗ್ಲೋಬಲ್ ಟೈಮ್ಸ್’, ‘ಕ್ಸಿನ್ಹುವಾ’, ಟರ್ಕಿಯ ‘ಟಿಆರ್‌ಟಿ ವರ್ಲ್ಡ್’ ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

- Advertisement -
- Advertisement -

ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್‌ಟಿ ವರ್ಲ್ಡ್‌ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ ಹೇಳಿದೆ.

ಗ್ಲೋಬಲ್ ಟೈಮ್ಸ್ ಎಂಬುದು ಚೀನಾದ ಕಮ್ಯುನಿಸ್ಟ್ ಪಕ್ಷದ ಒಡೆತನದ ಪೀಪಲ್ಸ್ ಡೈಲಿಗೆ ಸಂಯೋಜಿತವಾಗಿರುವ ಇಂಗ್ಲಿಷ್ ಭಾಷೆಯ ಪತ್ರಿಕೆಯಾಗಿದೆ. ಕ್ಸಿನ್ಹುವಾ ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯಾಗಿದೆ. ಟಿಆರ್‌ಟಿ ವರ್ಲ್ಡ್ ಎಂಬುದು ದೇಶದ ಸಾರ್ವಜನಿಕ ಪ್ರಸಾರಕರಾದ ಟರ್ಕಿಶ್ ರೇಡಿಯೋ ಮತ್ತು ಟೆಲಿವಿಷನ್ ಕಾರ್ಪೊರೇಷನ್ ನಿರ್ವಹಿಸುವ ಟಿವಿ ಚಾನೆಲ್ ಆಗಿದೆ. ಅದಾಗ್ಯೂ, ಸುದ್ದಿ ಸಂಸ್ಥೆಗಳನ್ನು ನಿರ್ಬಂಧಿಸಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಮೇ 7 ರಂದು, ಭಾರತ ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿದ ಗಂಟೆಗಳ ನಂತರ, ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗ್ಲೋಬಲ್ ಟೈಮ್ಸ್‌ನ ಪೋಸ್ಟ್ ಅನ್ನು “ಆಧಾರರಹಿತ” ಎಂದು ಕರೆದು ಫ್ಯಾಕ್ಟ್‌ಚೆಕ್ ಮಾಡಿತ್ತು.

“ಹಲವಾರು ಪಾಕಿಸ್ತಾನ ಪರ ಹ್ಯಾಂಡಲ್‌ಗಳು ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಆಧಾರರಹಿತ ಹೇಳಿಕೆಗಳನ್ನು ಹರಡುತ್ತಿದ್ದು, ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಮಾಧ್ಯಮ ಸಂಸ್ಥೆಗಳು ಮೂಲಗಳನ್ನು ಪರಿಶೀಲಿಸದೆ ಅಂತಹ ಮಾಹಿತಿಯನ್ನು ಹಂಚಿಕೊಂಡಾಗ, ಅದು ಜವಾಬ್ದಾರಿಯುತ ಪತ್ರಿಕೋದ್ಯಮ ನೀತಿಶಾಸ್ತ್ರದಲ್ಲಿನ ಗಂಭೀರ ಲೋಪವನ್ನು ಪ್ರತಿಬಿಂಬಿಸುತ್ತದೆ.” ಎಂದು ರಾಯಭಾರ ಕಚೇರಿ ಹೇಳಿದೆ.

ಚೀನಾದಿಂದ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾ ಮಾಡಿದ ಹೊಸ ಪ್ರಯತ್ನಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ. ಇದನ್ನು “ಅಸಂಬದ್ಧ” ಪ್ರಯತ್ನ ಎಂದು ಹೇಳಿರುವ ಭಾರತ, ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಆಗಿದ್ದು ಮತ್ತು ಮುಂದೆಯೂ ಅದು ಭಾರತದ್ದೆ ಆಗಿರುತ್ತದೆ ಎಂದು ಹೇಳಿದೆ.

2024ರ ಏಪ್ರಿಲ್ ತಿಂಗಳ ವೇಳೆ ಚೀನಾ ಅರುಣಾಚಲ ಪ್ರದೇಶದ 30 ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಕೂಡಾ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು.

ಅದಕ್ಕೂ ಮೊದಲು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017 ರಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ನಂತರ 2021 ರಲ್ಲಿ 15 ಸ್ಥಳಗಳ ಎರಡನೇ ಪಟ್ಟಿಯನ್ನು ಮತ್ತು 2023 ರಲ್ಲಿ 11 ಸ್ಥಳಗಳನ್ನು ಹೆಸರಿಸಿದ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಚೀನಾವು ಅರುಣಾಚಲ ಪ್ರದೇಶದ ಹೆಚ್ಚಿನ ಭಾಗವು ತಮ್ಮದು ಎಂದು ವಾದಿಸುತ್ತದೆ. ಅದು ರಾಜ್ಯವನ್ನು “ದಕ್ಷಿಣ ಟಿಬೆಟ್” ಎಂದು ಹೇಳಿಕೊಳ್ಳುತ್ತದೆ. ಅದಾಗ್ಯೂ, ಭಾರತ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...