Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್...

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಶಿಕ್ಷಕಿಯ ಆಜ್ಞೆಯ ಮೇರೆಗೆ 2023ರಲ್ಲಿ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಝಫ್ಫರ್‌ನಗರದ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣದ ವೆಚ್ಚವನ್ನು ಭರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ (ಯುಪಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, “ಸರ್ಕಾರ ಬಾಲಕನ ಶಾಲಾ ವೆಚ್ಚಗಳನ್ನು ಭರಿಸುವಂತೆ ಶಾಲೆಯ ಆಡಳಿತ ಮಂಡಳಿಯ ಮನವೊಲಿಸಬಹುದು. ಆದರೆ, ವೆಚ್ಚ ಭರಿಸುವ ಪ್ರಾಥಮಿಕ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ ಎಂಬುವುದಾಗಿ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕ ಮತ್ತು ಸಾರಿಗೆ ವೆಚ್ಚವನ್ನು ಭರಿಸುವುದು ರಾಜ್ಯ ಸರ್ಕಾರದ ಬಾಧ್ಯತೆಯಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಆಗಸ್ಟ್ 2023ರಲ್ಲಿ, ಶಾಲಾ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಏಳು ವರ್ಷದ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ಮುಸ್ಲಿಂ ವಿದ್ಯಾರ್ಥಿಯ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ, ಆತನಿಗೆ ಹೊಡೆಯುವಂತೆ ಸಹಪಾಠಿಗಳನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕನಿಗೆ ಕಪಾಳಮೋಕ್ಷದ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ನಂತರ ವಿದ್ಯಾರ್ಥಿಯನ್ನು ಬೇರೆ ಶಾಲೆಗೆ ವರ್ಗಾಯಿಸಲಾಯಿತು.

ಈ ವಿಷಯದ ಬಗ್ಗೆ ಕಾಲಮಿತಿಯ ಮತ್ತು ಸ್ವತಂತ್ರ ತನಿಖೆ ಮಾಡಬೇಕು. ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಾಂಧಿಯವರು ತನ್ನ ಅರ್ಜಿಯಲ್ಲಿ ಕೋರಿದ್ದರು.

ಶಾಲಾ ಶಿಕ್ಷಕಿಯ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅಕ್ಟೋಬರ್ 2023ರಲ್ಲಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನಂತರ ಆರೋಪಿ ಶಿಕ್ಷಕಿ ನ್ಯಾಯಾಲಯದ ಮುಂದೆ ಶರಣಾಗಿದ್ದರು, ಮತ್ತು ಜಾಮೀನು ಪಡೆದರು.

ಪ್ರಕರಣದ ಸಂಬಂಧ ಕಳೆದ ವರ್ಷ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯ ಶಾಲಾ ವೆಚ್ಚವನ್ನು ಭರಿಸಲು ರಾಜ್ಯವು ಪ್ರಾಯೋಜಕರನ್ನು ಹುಡುಕಬೇಕೆಂದು ಸೂಚಿಸಿತ್ತು.

ಬುಧವಾರ ತುಷಾರ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಶದನ್ ಫರಾಸತ್, “ರಾಜ್ಯ ಸರ್ಕಾರ ಮಗುವಿನ ಶಾಲಾ ಸಮವಸ್ತ್ರದ ಶುಲ್ಕ ಮತ್ತು ಬೋಧನಾ ಶುಲ್ಕವನ್ನು ಭರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಸೈಯದ್ ಮುರ್ತಾಜಾ ಸ್ಮಾರಕ ಟ್ರಸ್ಟ್ ವಿದ್ಯಾರ್ಥಿಯ ವೆಚ್ಚ ಭರಿಸಲು ಮುಂದಾಗಿದೆ ಎಂದು ಹೇಳಿದೆ.

“ನಾವು ದಾಖಲೆಗಾಗಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬಹುದು. ಆದರೆ, ಬಾಲಕನ ವೆಚ್ಚವನ್ನು ಟ್ರಸ್ಟ್ ನೇರವಾಗಿ ಶಾಲೆಗೆ ಪಾವತಿಸುತ್ತದೆ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಆದಾಗ್ಯೂ, ಬಾಲಕನ ಶಾಲಾ ಶಿಕ್ಷಣ ಮುಗಿಯುವವರೆಗೆ ಆತನ ಶೈಕ್ಷಣಿಕ ವೆಚ್ಚ ಭರಿಸುವುದು ಪ್ರಾಥಮಿಕವಾಗಿ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಟ್ರಸ್ಟ್ ಒಂದು ವರ್ಷವರೆಗೆ ಬಾಲಕನ ವೆಚ್ಚ ಭರಿಸುವುದಾಗಿ ತಿಳಿಸಲಾಗಿದೆ. ಇನ್ನು ಹೆಚ್ಚಿನ ಅವಧಿಗೆ ವೆಚ್ಚ ಭರಿಸಲು ಟ್ರಸ್ಟ್‌ನ ಮನವೊಲಿಸಲು ಸರ್ಕಾಕ್ಕೆ ಅವಕಾವಶವಿದೆ. ಆದರೆ, ಪ್ರಾಥಮಿಕವಾಗಿ ವೆಚ್ಚ ಭರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಅಕ್ಟೋಬರ್ 17 ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದೆ.

ಸಾರ್ವತ್ರಿಕ ಸಬಲೀಕರಣಕ್ಕೆ ಜಾತಿ ಜನಗಣತಿ ನನ್ನ ಬಹುಕಾಲದ ಬೇಡಿಕೆಯಾಗಿದೆ: ರಾಮದಾಸ್ ಅಠಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...