Homeಕರ್ನಾಟಕಇಂದಿನಿಂದ 'ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ' ಜಾರಿ

ಇಂದಿನಿಂದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜಾರಿ

- Advertisement -
- Advertisement -

‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಯನ್ನು ಮೇ 15ರಂದು (ಇಂದು) ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.

ನಗರದ ಆಡಳಿತವನ್ನು ಸುಗಮಗೊಳಿಸುವುದು, ಮೂಲಸೌಕರ್ಯ, ಸಂಚಾರ ಮತ್ತು ನಗರ ವಿಸ್ತರಣೆ ಸೇರಿದಂತೆ ನಗರದ ಬೆಳೆಯುತ್ತಿರುವ ಸವಾಲುಗಳನ್ನು ಪರಿಹರಿಸುವ ಉದ್ದೇಶ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಹೊಂದಿದೆ ಎಂದು ಸರ್ಕಾರ ಹೇಳಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ. ಅದಕ್ಕೆ ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರದೇಶ (ಜಿಬಿಎ) ಗಡಿಗುರುತು ನಡೆಯಲಿದೆ. ಆನಂತರ ನಿಧಾನವಾಗಿ ಬಿಬಿಎಂಪಿ ಅಸ್ತಿತ್ವ ಕಳೆದುಕೊಳ್ಳಲಿದೆ.

“ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ರಚನೆ ಶೀಘ್ರದಲ್ಲೇ ಆಗಲಿದೆ. ಹೊಸ ಪ್ರಾಧಿಕಾರವು ಬಿಬಿಎಂಪಿಯನ್ನು ಬಹು ಪಾಲಿಕೆಗಳಾಗಿ ವಿಭಜಿಸುವ ಮೂಲಕ ಬೆಂಗಳೂರಿನ ನಾಗರಿಕ ಆಡಳಿತವನ್ನು ಪುನರ್‌ರಚಿಸಲಿದೆ. ಇದು ದಕ್ಷತೆಯನ್ನು ಹೆಚ್ಚಿಸಲು ಮತ್ತು ಆಡಳಿತವನ್ನು ಸ್ಥಳೀಕರಿಸಲು ವಿನ್ಯಾಸಗೊಳಿಸಲಾದ ಕ್ರಮವಾಗಿದೆ” ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಳೆದ ವಾರ ಹೇಳಿದ್ದಾರೆ.

ಫೆಬ್ರವರಿ 2024ರಲ್ಲಿ ವಿಧಾನಮಂಡಲದ ಉಭಯ ಸದನಗಳು ಅನುಮೋದಿಸಿದ ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ ಜನಸಂಖ್ಯೆಯ ಮಿತಿ ಮೀರಿದ ಬೆಳವಣಿಗೆ, ಮೂಲಸೌಕರ್ಯಗಳ ಕೊರತೆ, ಪರಿಸರ ಸಂರಕ್ಷಣೆಯ ಸವಾಲು ಸೇರಿದಂತೆ ಬೆಂಗಳೂರು ಮಹಾನಗರದ ಸಂಪೂರ್ಣ ಆಡಳಿತದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದೆ ಎಂಬುವುದು ಸರ್ಕಾರದ ವಾದ.

ಪ್ರಸ್ತುತ ಇರುವ 709 ಚದರ ಕಿ.ಮೀ ಬಿಬಿಎಂಪಿ ವ್ಯಾಪ್ತಿ ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಾ ರಚನೆಯಾದ ಬಳಿಕ 1000 ಚದರ ಕಿ.ಮೀಗೆ ವಿಸ್ತರಣೆಯಾಗಲಿದೆ. ನಗರೀಕರಣಗೊಂಡಿರುವ ಕೆಲವು ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ. ಆದರೆ, ಇದು ನಿಧಾನವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಸದ್ಯಕ್ಕೆ ಬಿಬಿಎಂಪಿ ಪ್ರದೇಶವೇ ಪ್ರಾಧಿಕಾರದ ವ್ಯಾಪ್ತಿಯಾಗಿರಲಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರು ನಗರದ ಕೈಗಾರಿಕಾ ಪ್ರದೇಶಗಳಲ್ಲದೆ ಎಲೆಕ್ಟ್ರಾನಿಕ್‌ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶ, ಬೊಮ್ಮಸಂದ್ರ, ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ, ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ಕ್ಕೆ ಸೇರಿಸಿಕೊಂಡು ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆ ಇದೆ ಎಂದು ವರದಿಗಳು ವಿವರಿಸಿವೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯ ಪ್ರಕಾರ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ನೇಮಿಸುತ್ತದೆ. ಮುಖ್ಯಮಂತ್ರಿ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಅವರು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಶಾಸಕರು–ಸಚಿವರು, ನಗರಾಭಿವೃದ್ಧಿ ಸಚಿವರು, ಪಾಲಿಕೆಗಳ ಮೇಯರ್‌ಗಳು, ಬಿಡಿಎ ಆಯುಕ್ತ, ಬೆಂಗಳೂರು ಜಲಮಂಡಳಿ ಅಧ್ಯಕ್ಷ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಕಂದಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಹಾನಗರ ಆಯುಕ್ತ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಪ್ರಾಧಿಕಾರದ ಮುಖ್ಯ ಆಯುಕ್ತರ ಅಧಿಕಾರಾವಧಿ ಮೂರು ವರ್ಷಗಳು. ಮಸೂದೆಯ ಆರಂಭದಲ್ಲಿ ಇದ್ದ ದುಷ್ಕೃತ್ಯ, ನಿರ್ಲಕ್ಷ್ಯ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮೂರನೇ ಎರಡರಷ್ಟು ಬಹುಮತದಿಂದ ಆಯುಕ್ತರನ್ನು ತೆಗೆದು ಹಾಕಬಹುದು ಎಂಬ ನಿಬಂಧನೆಯನ್ನು ಅಂತಿಮ ಮಸೂದೆ ತೆಗೆದು ಹಾಕಿದೆ. ಇದು ಆಯುಕ್ತರ ಅಧಿಕಾರವಧಿಯನ್ನು ಬಲಪಡಿಸಿದೆ.

ವರದಿಗಳ ಪ್ರಕಾರ, ಮುಖ್ಯ ಆಯುಕ್ತರನ್ನು ಸರ್ಕಾರ ನೇರವಾಗಿ ನೇಮ ಮಾಡುವುದಕ್ಕೆ ನಾಗರಿಕ ಗುಂಪುಗಳು ಮತ್ತು ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸ್ಥಳೀಯ ಸ್ವ-ಆಡಳಿತಕ್ಕೆ ಒತ್ತು ನೀಡುವ 74ನೇ ಸಾಂವಿಧಾನಿಕ ತಿದ್ದುಪಡಿಯನ್ನು ದುರ್ಬಲಗೊಳಿಸುತ್ತದೆ ಎಂಬುವುದು ಅವರ ವಾದವಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದರೂ ತೆರಿಗೆ ಪಾವತಿ, ವ್ಯಾಪ್ತಿ, ಅಧಿಕಾರಿಗಳ ಕರ್ತವ್ಯಗಳಲ್ಲಿ ಚಲಾವಣೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...