Homeಅಂತರಾಷ್ಟ್ರೀಯ'ನಾವು ಪಾಕಿಸ್ತಾನದ ಭಾಗವಲ್ಲ': ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

- Advertisement -
- Advertisement -

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’, ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. “ನಾವು ಪಾಕಿಸ್ತಾನದ ಭಾಗವಲ್ಲ , ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ ಮೀರ್ ಯಾರ್ ಬಲೂಚ್ ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೇ 14ರಂದು ಸರಣಿ ಪೋಸ್ಟ್‌ಗಳನ್ನು ಹಾಕಿರುವ ಮೀರ್ ಯಾರ್” ಪಾಕಿಸ್ತಾನ ಸೈನ್ಯ ಬಲೂಚ್ ನೆಲವನ್ನು ತೊರೆದಾಗ ಬಲೂಚಿಸ್ತಾನದ ಸ್ವಾತಂತ್ರ್ಯದ ದಿನಾಂಕವನ್ನು ಘೋಷಿಸಲಾಗುತ್ತದೆಯೇ? ಎಂದು ಒಬ್ಬರು ಖ್ಯಾತ ಪತ್ರಕರ್ತರು ಕೇಳಿದರು. ಅದಕ್ಕೆ ನಾನು “ಬ್ರಿಟಿಷರು ಬಲೂಚಿಸ್ತಾನ್ ಮತ್ತು ಉಪಖಂಡವನ್ನು ತೊರೆದಾಗಲೇ, ಅಂದರೆ ಆಗಸ್ಟ್ 11, 1947 ರಂದು ನಾವು ಸ್ವಾತಂತ್ರ್ಯ ಘೋಷಿಸಿಕೊಂಡಿದ್ದೇವೆ ಎಂಬುವುದಾಗಿ ಉತ್ತರಿಸಿದ್ದೇನೆ” ಎಂದು ಹೇಳಿದ್ದಾರೆ.

“ಆತ್ಮೀಯ ಭಾರತೀಯರೇ, ದೇಶಭಕ್ತ ಮಾಧ್ಯಮಗಳೇ, ಯೂಟ್ಯೂಬ್ ಒಡನಾಡಿಗಳೇ, ಭಾರತವನ್ನು ರಕ್ಷಿಸಲು ಹೋರಾಡುವ ಬುದ್ಧಿಜೀವಿಗಳೇ, ಬಲೂಚ್‌ಗಳನ್ನು ‘ಪಾಕಿಸ್ತಾನದ ಸ್ವಂತ ಜನರು’ ಎಂದು ಕರೆಯಬೇಡಿ. ನಾವು ಪಾಕಿಸ್ತಾನಿಗಳಲ್ಲ, ನಾವು ಬಲೂಚಿಸ್ತಾನಿಗಳು. ಪಾಕಿಸ್ತಾನದ ಸ್ವಂತ ಜನರು ಪಂಜಾಬಿಗಳು, ಅವರು ಎಂದಿಗೂ ವಾಯು ಬಾಂಬ್ ದಾಳಿ, ಬಲವಂತದ ಸ್ಥಳಾಂತರ ಮತ್ತು ನರಮೇಧವನ್ನು ಎದುರಿಸಿಲ್ಲ” ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಉಂಟಾದಾಗ ಬಲೂಚಿಸ್ತಾನ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿತ್ತು.

“ಬಲೂಚಿಸ್ತಾನ ಪ್ರಜಾಸತ್ತಾತ್ಮಕ ಗಣರಾಜ್ಯದ ಜನರು ಭಾರತದ ಜನರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ” ಎಂದು ಆ ವೇಳೆ ಮೀರ್ ಯಾರ್ ಪೋಸ್ಟ್ ಹಾಕಿದ್ದರು.

“ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ. ಆದರೆ, ಬಲೂಚಿಸ್ತಾನ ಮತ್ತು ಅದರ ಜನರು ಭಾರತ ಸರ್ಕಾರಕವನ್ನು ಬೆಂಬಲಿಸುತ್ತಿದ್ದಾರೆ. ಪ್ರೀತಿಯ ನರೇಂದ್ರ ಮೋದಿಯವರೇ ನೀವು ಒಬ್ಬಂಟಿಯಲ್ಲ, ನಿಮಗೆ 60 ಮಿಲಿಯನ್ ಬಲೂಚ್ ದೇಶಭಕ್ತರ ಬೆಂಬಲವಿದೆ” ಎಂದು ಬರೆದುಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಪೋಸ್ಟ್ ಟ್ಯಾಗ್ ಮಾಡಿದ್ದರು.

ಬಲೂಚಿಸ್ತಾನದ ಜನರು ಸುದೀರ್ಘ ಸಮಯದಿಂದ ಸ್ವತಂತ್ರ ರಾಷ್ಟ್ರದ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿದ್ದಾರೆ. ಇದಕ್ಕಾಗಿ ಬಂಡಾಯದ ಪಡೆಯನ್ನೂ ಕಟ್ಟಿದ್ದಾರೆ. ಪಾಕಿಸ್ತಾನದ ವಿರುದ್ದ ಅವರು ಭಾರತವನ್ನು ಬೆಂಬಲಿಸುತ್ತಿದ್ದಾರೆ.

ಈ ಎಲ್ಲದರ ನಡುವೆ ಅಲ್ಲಿ ಮಾನವ ಹಕ್ಕುಗಳ ತೀವ್ರ ಉಲ್ಲಂಘನೆಯ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ. ಜನರನ್ನು ಬಲವಂತದಿಂದ ಸ್ಥಳಾಂತರಿಸುವುದು, ಹತ್ಯೆಗಳು ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ನಿಗ್ರಹಿಸುವುದು ಇವುಗಳಲ್ಲಿ ಸೇರಿವೆ. ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿ ಗುಂಪುಗಳು ಇದರಲ್ಲಿ ಭಾಗಿಯಾಗಿರುವ ಆರೋಪಗಳನ್ನು ಎದುರಿಸುತ್ತಿವೆ.

ನಾಗರಿಕರು ದೀರ್ಘಕಾಲದ ಸಂಘರ್ಷದ ಹೊರೆಯನ್ನು ಇನ್ನೂ ಹೊರುತ್ತಿದ್ದಾರೆ. ಸೀಮಿತ ಮಾಧ್ಯಮ ಪ್ರಸಾರ ಮತ್ತು ಕಾನೂನು ಸಹಾಯದ ಕೊರತೆಯನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ.

‘ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ವ್ಯಾಪಾರ ಅಸ್ತ್ರ ಬಳಸಿದೆ’: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...