Homeಮುಖಪುಟಬಿಹಾರ: ತಳ ಸಮುದಾಯಗಳ 'ಭಯದಿಂದ' ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

- Advertisement -
- Advertisement -

ಪಾಟ್ನಾ: ದೇಶದ ತಳ ಸಮುದಾಯಗಳ “ಭಯದಿಂದ” ಪ್ರಧಾನಿ ನರೇಂದ್ರ ಮೋದಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ, ವಿರೋಧ ಪಕ್ಷಗಳು ಈ ವಂಚಿತ ವರ್ಗಗಳ ಪರವಾಗಿ ನಿಲ್ಲುತ್ತಿವೆ ಎಂದು ಪ್ರತಿಪಾದಿಸಿದರು.

ಕೆಲ ತಿಂಗಳುಗಳ ನಂತರ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇಲ್ಲಿಯ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೇಲ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿ ತಲುಪುತ್ತಿದ್ದಂತೆ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಇದನ್ನು ದಿಕ್ಕರಿಸಿ ರಾಹುಲ್ ಅಲ್ಲಿ ತಮ್ಮ ಭಾಷಣವನ್ನು ಮಾಡಿದರು.

“ನಿಮ್ಮ ತಲೆಯಿಂದ ಸಂವಿಧಾನವನ್ನು ಮುಟ್ಟಿ ಎಂದು ನಾವು ಮೋದಿಗೆ ಹೇಳಿದ್ದೆವು ಮತ್ತು ಅವರು ಹಾಗೆ ಮಾಡಿದರು. ನೀವು ಜಾತಿ ಜನಗಣತಿ ನಡೆಸಬೇಕಾಗುತ್ತದೆ ಎಂದು ನಾವು ಅವರಿಗೆ ಹೇಳಿದ್ದೆವು. ಎರಡೂ ಸಂದರ್ಭಗಳಲ್ಲಿ ಜನರಿಂದ ಪ್ರತಿಕ್ರಿಯೆ ಸಿಗಬಹುದೆಂಬ ಭಯದಿಂದ ಮೋದಿ ಬೇಡಿಕೆಗಳಿಗೆ ಒಪ್ಪಿಕೊಂಡರು” ಎಂದು ಗಾಂಧಿ ಹೇಳಿಕೊಂಡರು.

“ಆದರೆ ಅವರ ಸರ್ಕಾರವು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗಳನ್ನು ಪೂರೈಸುತ್ತದೆ ಎಂಬುದು ವಾಸ್ತವ. ಕೇಂದ್ರ ಸರಕಾರವು ದೇಶದ ಜನಸಂಖ್ಯೆಯ ಶೇ.5ರಷ್ಟು ಇರುವ ಈ ಬಂಡವಾಳಿಗರ ಪ್ರಯೋಜನಕ್ಕಾಗಿ ಕೆಲಸ ಮಾಡುತ್ತಿದೆ. ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಯಾವುದೇ ಹಕ್ಕುಗಳನ್ನು ನೀಡುತ್ತಿಲ್ಲ” ಎಂದು ಅವರು ಆರೋಪಿಸಿದರು.

ಇದಕ್ಕೂ ಮೊದಲು, ರಾಹುಲ್ ಗಾಂಧಿಯವರ ಕಾರ್ಯಕ್ರಮ ಸ್ಥಳವನ್ನು ಡಾ. ಅಂಬೇಡ್ಕರ್ ವೆಲ್ಫೇರ್ ಹಾಸ್ಟೆಲ್‌ನಿಂದ ನಗರ ನಿಗಮ ಕಚೇರಿಯ ಬಳಿಯ ನಗರಭವನಕ್ಕೆ ಸ್ಥಳಾಂತರಿಸುವ ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (ಡಿಪಿಆರ್‌ಒ) ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

“ನಿಮಗೆಲ್ಲರಿಗೂ ತಿಳಿದಿರುವಂತೆ, ನನ್ನ ಕಾರನ್ನು (ಮಿಥಿಲಾ ವಿಶ್ವವಿದ್ಯಾಲಯದ) ಗೇಟ್‌ನಲ್ಲಿ ನಿಲ್ಲಿಸಲಾಯಿತು. ಆದರೆ ನಾನು ಹಿಂಜರಿಯಲಿಲ್ಲ. ನಾನು ಹೊರಬಂದು ಇಲ್ಲಿಗೆ ಕಾಲ್ನಡಿಗೆಯಲ್ಲಿ ತಲುಪಲು ವೃತ್ತಾಕಾರದ ಮಾರ್ಗವನ್ನು ತೆಗೆದುಕೊಂಡೆ” ಎಂದು ಗಾಂಧಿ ಹೇಳಿದರು. ಸಾರ್ವಜನಿಕ ಸಂವಾದ ಕಾರ್ಯಕ್ರಮವಾದ ‘ಶಿಕ್ಷಾ ನ್ಯಾಯ ಸಂವಾದ’ವನ್ನು ಉದ್ಘಾಟಿಸಿದರು.

“ಬಿಹಾರದ ಸರ್ಕಾರ ನನ್ನನ್ನು ತಡೆಯಲು ಏಕೆ ಸಾಧ್ಯವಾಗಲಿಲ್ಲ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನೀವು ಸಾಕಾರಗೊಳಿಸುವ ಅಪಾರ ಶಕ್ತಿಯ ಸಂಗ್ರಹದಿಂದ ನಾನು ಮುನ್ನಡೆಯುತ್ತಿದ್ದೇನೆ. ನರೇಂದ್ರ ಮೋದಿ ತಲೆಬಾಗಬೇಕಾದ ಅದೇ ಶಕ್ತಿ ಅದು” ಎಂದು ಗಾಂಧಿ ಹೇಳಿದರು.

ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ನಡೆಸಿದ “ಪರಿಣಾಮಕಾರಿ” ಜಾತಿ ಜನಗಣತಿ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮೀಸಲಾತಿ ಮತ್ತು ಎಸ್‌ಸಿ/ಎಸ್‌ಟಿ ಉಪ ಯೋಜನೆಯಡಿಯಲ್ಲಿ ಹಣವನ್ನು ಬಿಡುಗಡೆ ಮಾಡುವುದು. ಇವೇ ಮೂರು ಬೇಡಿಕೆಗಳ ಮೇಲೆ ಗಮನಹರಿಸುವಂತೆ ರಾಯ್ ಬರೇಲಿ ಸಂಸದ ಯುವಕರನ್ನು ಒತ್ತಾಯಿಸಿದರು.

“ನೀವು ಎನ್‌ಡಿಎಯಿಂದ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದಾಗ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳಲಾಗುವುದು ಎಂದು ಖಚಿತವಾಗಿರಿ, ಅದು ಬಿಹಾರದಲ್ಲಾಗಲಿ ಅಥವಾ ಕೇಂದ್ರದಲ್ಲಾಗಲಿ” ಎಂದು ಗಾಂಧಿ ಹೇಳಿದರು.

ಭದ್ರತೆ ಮತ್ತು ಕಾನೂನು ಸಮಸ್ಯೆಗಳಿಂದಾಗಿ ಸದರಿ ಹಾಸ್ಟೆಲ್‌ನಲ್ಲಿ ಕಾರ್ಯಕ್ರಮವನ್ನು ನಡೆಸುವ ಪ್ರಯತ್ನವನ್ನು ಅನುಮತಿಸಲಾಗುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರಾಜೀವ್ ರೌಶನ್ ಸ್ಪಷ್ಟಪಡಿಸಿದರು. ಟೌನ್ ಹಾಲ್ ಅನ್ನು ಕಾಯ್ದಿರಿಸಲು ಮಾಜಿ ಕಾಂಗ್ರೆಸ್ ಸಚಿವ ಮದನ್ ಮೋಹನ್ ಝಾ ಅವರಿಂದ ಅರ್ಜಿಯನ್ನು ಸ್ವೀಕರಿಸಿದ ನಂತರ ನಗರ ಭವನವನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದರು. ಇದನ್ನು ಧಿಕ್ಕರಿಸಿ ಇಲ್ಲಿಗೆ ರಾಹುಲ್ ಗಾಂಧಿ ಹಾಸ್ಟೇಲ್ ಕಾರ್ಯಕ್ರಮಕ್ಕೆ ಆಗಮಿಸಿದರು.

ಕರ್ನಲ್ ಸೋಫಿಯಾ ಖುರೇಷಿ ಕುರಿತು ಸಚಿವನ ಹೇಳಿಕೆ: ಬಿಜೆಪಿ ಕ್ರಮಕ್ಕಾಗಿ ದೇಶವೇ ಕಾಯುತ್ತಿದೆ; ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...