Homeಮುಖಪುಟಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

ಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಗೋಖಲೆ ಅವರ ಎಕ್ಸ್‌ ಪೋಸ್ಟ್‌ಗಳು ಮಾನಹಾನಿಕರ ಎಂದು ಕಳೆದ ವರ್ಷ ಹೈಕೋರ್ಟ್ ತೀರ್ಪು ನೀಡಿತ್ತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಮತ್ತು ಅವರ ಎಕ್ಸ್ ಹ್ಯಾಂಡಲ್‌ನಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವುದರ ಜೊತೆಗೆ ಲಕ್ಷ್ಮಿ ಪುರಿ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಿತ್ತು.

ಈ ನಿರ್ದೇಶನಗಳನ್ನು ಪಾಲಿಸದೆ ಗೋಖಲೆ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಪುರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಗೋಖಲೆ ಅವರ ವಕೀಲರು, ಹೈಕೋರ್ಟ್‌ನ 2024 ರ ನಿರ್ದೇಶನಗಳ ವಿರುದ್ಧ ಗೋಖಲೆ ಸಲ್ಲಿಸಿದ ಅರ್ಜಿಯನ್ನು ಅಂತಿಮವಾಗಿ ತೀರ್ಮಾನಿಸುವವರೆಗೆ ಮುಚ್ಚಿದ ಲಕೋಟೆಯಲ್ಲಿ ಅವರು ಕ್ಷಮೆಯಾಚಿಸಬಹುದು ಎಂದು ವಾದಿಸಿದ್ದರು.

ಆದರೆ, ಈ ವಾದವನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ಅವರು ತಿರಸ್ಕರಿಸಿದ್ದಾರೆ ಮತ್ತು ಎರಡು ವಾರಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವಂತೆ ಗೋಖಲೆ ಅವರಿಗೆ ನಿರ್ದೇಶನ ನೀಡಿದ್ದಾರೆ.

ಲಕ್ಷ್ಮಿ ಪುರಿ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿಯಾಗಿದ್ದು, 2021 ರಲ್ಲಿ, ಅವರು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ತಮ್ಮ ಆದಾಯ ಮೀರಿ ಕೆಲವು ಆಸ್ತಿಯನ್ನು ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾಕೇತ್ ಹಾಕಿದ್ದ ಪೋಸ್ಟ್‌ಗಳ ವಿರುದ್ಧ ಮೊಕದ್ದಮೆ ಹೂಡಿದ್ದರು.

ಜುಲೈ 2021ರಲ್ಲಿ, ನ್ಯಾಯಾಲಯವು ಗೋಖಲೆ ಅವರಿಗೆ ಎಕ್ಸ್‌ ಪೋಸ್ಟ್‌ಗಳನ್ನು ತೆಗೆದುಹಾಕಲು ಮತ್ತು ಪುರಿ ವಿರುದ್ಧ ಯಾವುದೇ ಮಾನನಷ್ಟಕರ ವಿಷಯವನ್ನು ಪೋಸ್ಟ್ ಮಾಡದಂತೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿತ್ತು.

ಜುಲೈ 2024 ರಲ್ಲಿ ನೀಡಿದ ಅಂತಿಮ ತೀರ್ಪಿನಲ್ಲಿ, ಹೈಕೋರ್ಟ್ ಗೋಖಲೆ ಅವರಿಗೆ ಲಕ್ಷ್ಮಿ ಪುರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲು ಮತ್ತು ಕ್ಷಮೆಯಾಚನೆಯನ್ನು ಪ್ರಕಟಿಸಲು ನಿರ್ದೇಶಿಸಿತ್ತು.

ನಂತರ ಗೋಖಲೆ ಅವರು ಪರಿಹಾರವನ್ನು ಪಾವತಿಸಲು ಆದೇಶಿಸಿದ ತೀರ್ಪನ್ನು ಹಿಂಪಡೆಯಲು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಮೇ 2, 2025 ರಂದು, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಗೋಖಲೆ ಅವರು ಹೈಕೋರ್ಟ್‌ನ 2024 ರ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿ ಲಕ್ಷ್ಮಿ ಪುರಿ ಈ ವರ್ಷದ ಆರಂಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೂಡಿದ್ದರು.

ಪರಿಹಾರ ಪಾವತಿಸುವಂತೆ ನೀಡಿದ್ದ ಆದೇಶ ಹಿಂಪಡೆಯಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಗೋಖಲೆ ಪರ ವಕೀಲರು ಇತ್ತಿಚೆಗೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಲ್ಲದೆ, 50 ಲಕ್ಷ ರೂ. ಠೇವಣಿ ಇಡುವವರೆಗೆ ಗೋಖಲೆ ಅವರ ಸಂಬಳದ ಒಂದು ಭಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ ಎಂದು ಅವರು ಗಮನಸೆಳೆದಿದ್ದಾರೆ.

ಈ ಮೇಲ್ಮನವಿ ಅಂತಿಮವಾಗಿ ಇತ್ಯರ್ಥವಾಗುವವರೆಗೆ ಗೋಖಲೆ ಅವರು ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚಿಸಬಹುದು ಎಂದು ವಕೀಲರು ವಾದಿಸಿದ್ದಾರೆ.

ಆದಾಗ್ಯೂ, ನ್ಯಾಯಾಲಯವು ಅಂತಹ ಯಾವುದೇ ದಯೆ ತೋರಿಸಲು ನಿರಾಕರಿಸಿದೆ.

ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...