Homeಮುಖಪುಟ'ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ': ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ...

‘ಸರ್ಕಾರ ಕೋರ್ಟ್ ಆದೇಶ ಪಾಲಿಸುತ್ತದೆ’: ಕರ್ನಲ್ ಖುರೇಷಿ ವಿರುದ್ಧದ ಸಚಿವರ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕ ಸಹೋದರಿ ಎಂದು ಹೇಳಿದ್ದ ತನ್ನ ಸಚಿವರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ತಮ್ಮ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿದ್ದು, ಅದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ‘ಸರ್ಕಾರ ಕೋರ್ಟ್

ಗುರುವಾರ ರೋಶನ್‌ಪುರ ಚೌಕದಲ್ಲಿ ಬಿಜೆಪಿಯ ತಿರಂಗ ಯಾತ್ರೆಯ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕರ್ನಲ್ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಶಾ ಅವರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದು, ಕಾಂಗ್ರೆಸ್ ಈ ಬಗ್ಗೆ ತೀವ್ರವಾಗಿ ಒತ್ತಾಯಿಸುತ್ತಿದೆ.

ಈ ಬಗ್ಗೆ ಮಾತನಾಡಿದ ಅವರು, ಅಂತಹ ವಿನಂತಿಗಳನ್ನು ಮಾಡಲು ಕಾಂಗ್ರೆಸ್‌ಗೆ ನೈತಿಕ ಅಧಿಕಾರವಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ನಮ್ಮ ಸರ್ಕಾರ ಎಲ್ಲಾ ನ್ಯಾಯಾಂಗ ಆದೇಶಗಳನ್ನು ಪಾಲಿಸಿದೆ ಮತ್ತು ನ್ಯಾಯಾಲಯದ ನಿರ್ಧಾರಗಳನ್ನು ಗೌರವಿಸುವುದನ್ನು ಮುಂದುವರಿಸುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಚಿವ ಶಾ ರಾಜೀನಾಮೆ ನೀಡಬೇಕೆಂಬ ವಿರೋಧ ಪಕ್ಷದ ಬೇಡಿಕೆಯ ಬಗ್ಗೆ ಹೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಅಂತಹ ಬೇಡಿಕೆಗಳನ್ನು ಮಾಡುತ್ತಲೇ ಇದೆ. ಅವರು ಮೊದಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಕೇಳಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ದ್ವಿಮುಖ ನೀತಿಯನ್ನು ಹೊಂದಿದ್ದು, (ದೆಹಲಿ ಮಾಜಿ ಸಿಎಂ) ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದಾಗಲೂ ಕಾಂಗ್ರೆಸ್ ಅವರ ಬೆಂಬಲಕ್ಕೆ ನಿಂತಿತ್ತು. ಆಗ ಅವರ ಆಕ್ರೋಶ ಎಲ್ಲಿತ್ತು? ನೈತಿಕತೆಯ ಬಗ್ಗೆ ಮಾತನಾಡುವ ಹಕ್ಕು ಅವರಿಗೆ ಇಲ್ಲ. ಕಾಂಗ್ರೆಸ್‌ನಷ್ಟು ನಾಚಿಕೆಯಿಲ್ಲದ ನಡವಳಿಕೆಯನ್ನು ಯಾವುದೇ ಪಕ್ಷ ಪ್ರದರ್ಶಿಸಿಲ್ಲ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಅವರ ಹೇಳಿಕೆ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಮೇ 14 ರ ಆದೇಶವನ್ನು ಪ್ರಶ್ನಿಸಿ ಸಚಿವ ಶಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅವರ ಅರ್ಜಿಯ ವಿಚಾರಣೆ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಶಾ ಅವರ ಹೇಳಿಕೆಗಳನ್ನು “ಸ್ವೀಕಾರಾರ್ಹವಲ್ಲ ಮತ್ತು ಸಂವೇದನಾಶೀಲವಲ್ಲ” ಎಂದು ಕರೆದಿದ್ದಾರೆ. ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳು ತಮ್ಮ ಸಾರ್ವಜನಿಕ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮವನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ.

“ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸ್ವಲ್ಪ ಸಂವೇದನಾಶೀಲತೆಯನ್ನು ತೋರಿಸಬೇಕು. ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿ” ಎಂದು ಸಿಜೆಐ ಟೀಕಿಸಿದ್ದಾರೆ. ಅವರ ಹೇಳಿಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿ, ಬುಧವಾರ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು.

ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಆದೇಶವನ್ನು ವಿಳಂಬವಿಲ್ಲದೆ ಪಾಲಿಸುವಂತೆ ಹೈಕೋರ್ಟ್ ಸೂಚಿಸಿದ್ದು, ಹಾಗೆ ಮಾಡದಿದ್ದರೆ ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಲಿದೆ ಎಂದು ಎಚ್ಚರಿಸಿತ್ತು. ಇದರ ಬೆನ್ನಲ್ಲೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹೈಕೋರ್ಟ್ ನಿರ್ದೇಶನದ ನಂತರ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕಚೇರಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, “ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ನಂತರ, ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಚಿವ ವಿಜಯ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದಾರೆ.” ಎಂದು ಹೇಳಿತ್ತು. ‘ಸರ್ಕಾರ ಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...