Homeಮುಖಪುಟಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್...

ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ | ಟಿಎಂಸಿ ಸಂಸದ ಸಾಕೇತ್ ಗೋಖಲೆಗೆ ದೆಹಲಿ ಹೈಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ, ಎರಡು ವಾರಗಳಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ಆದೇಶಿಸಿದೆ.

ಜುಲೈ 2024 ರಲ್ಲಿ, ಗೋಖಲೆ ಅವರು ಪುರಿ ಅವರ ಬಗ್ಗೆ “ತಪ್ಪು ಮತ್ತು ಸುಳ್ಳು” ಆರೋಪಗಳನ್ನು ಮಾಡಿದ್ದಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪುರಿ ಅವರು ಸ್ವಿಟ್ಜರ್ಲೆಂಡ್‌ನಲ್ಲಿ ಅಕ್ರಮ ಆಸ್ತಿಯನ್ನು ಖರೀದಿಸಿದ್ದಾರೆ ಎಂಬ ಗೋಖಲೆ ಅವರ ಹೇಳಿಕೆಗಳು ಸೇರಿವೆ.

ಗೋಖಲೆ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅಸಮಾಧನ ವ್ಯಕ್ತಪಡಿಸಿದ್ದ ಪುರಿ, ಅವರ ಹೇಳಿಕೆ  “ಮಾನನಷ್ಟಕರ, ದುರುದ್ದೇಶಪೂರಿತ ಮತ್ತು ಸುಳ್ಳು ಮಾಹಿತಿಯನ್ನು ಆಧರಿಸಿವೆ” ಎಂದು ಆರೋಪಿಸಿ ಅವರ ವಿರುದ್ಧ ಮೊಕದ್ದಮೆ ಹೂಡಿದ್ದರು.

ಪ್ರಮುಖ ಇಂಗ್ಲಿಷ್ ದಿನಪತ್ರಿಕೆ ಮತ್ತು ಅವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಗೋಖಲೆ ಕ್ಷಮೆಯಾಚಿಸಬೇಕು ಎಂದು ತನ್ನ ತೀರ್ಪಿನಲ್ಲಿ ನ್ಯಾಯಾಲಯವು ಆದೇಶಿಸಿದ್ದು, ಅವರಿಗೆ 50 ಲಕ್ಷ ರೂ. ಪರಿಹಾರವನ್ನು ಪಾವತಿಸಲು ಸಹ ಸೂಚಿಸಿದೆ.

ಜುಲೈ 2024ರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಗೋಖಲೆ ಆಗ್ರಹಿದ್ದು, ತನ್ನ ವಕೀಲರು ಹಾಜರಾಗುವುದನ್ನು ನಿಲ್ಲಿಸಿದ ನಂತರ ವಿಚಾರಣೆಯನ್ನು ಪಕ್ಷಪಾತಿಯಾಗಿ ಅಥವಾ ಅವರ ಅನುಪಸ್ಥಿತಿಯಲ್ಲಿ ನೀಡಲಾಗಿದೆ ಎಂದು ವಾದಿಸಿದ್ದರು.

ಈ ಮಧ್ಯೆ, ಪುರಿ ಅವರು ಆದೇಶವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದೇಶವನ್ನು ಪಾಲಿಸದಿದ್ದಕ್ಕಾಗಿ ಅವರು ಗೋಖಲೆ ವಿರುದ್ಧ ನ್ಯಾಯಾಲಯ ನಿಂದನೆಯ ಪ್ರಕರಣವನ್ನೂ ಹೂಡಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಗೋಖಲೆ ಅವರ ವಕೀಲರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇತ್ಯರ್ಥವಾಗುವವರೆಗೆ ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚನೆ ಸಲ್ಲಿಸುವುದಾಗಿ ಪ್ರಸ್ತಾಪಿಸಿದ್ದರು. ಆದಾಗ್ಯೂ, ನ್ಯಾಯಮೂರ್ತಿ ಅನೀಶ್ ದಯಾಳ್ ಮೇ 9 ರಂದು ವಿನಂತಿಯನ್ನು ವಜಾಗೊಳಿಸಿ, ಎರಡು ವಾರಗಳಲ್ಲಿ ಸಾರ್ವಜನಿಕ ಕ್ಷಮೆಯಾಚಿಸುವಂತೆ ಗೋಖಲೆ ಅವರಿಗೆ ಆದೇಶಿಸಿದ್ದಾರೆ. ಈ ಆದೇಶವನ್ನು ಗುರುವಾರ ಹೈಕೋರ್ಟ್ಬ ಹಿರಂಗಪಡಿಸಿದೆ.

“ಪ್ರತಿವಾದಿ [ಗೋಖಲೆ] ಸುಮ್ಮನೆ ತಡಮಾಡಿದ್ದು, ವಿಳಂಬ ಮಾಡುತ್ತಿದ್ದಾರೆ. ಇನ್ನೂ ತೀರ್ಪನ್ನು ಪಾಲಿಸಿಲ್ಲ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಮೇ 2 ರಂದು, 50 ಲಕ್ಷ ರೂ. ಪಾವತಿಸುವಂತೆ ನಿರ್ದೇಶಿಸಿದ ತನ್ನ ಆದೇಶವನ್ನು ಹಿಂಪಡೆಯಲು ನ್ಯಾಯಾಲಯ ನಿರಾಕರಿಸಿದೆ.

ಗೋಖಲೆ ಅವರು 50 ಲಕ್ಷ ರೂ. ಪರಿಹಾರವಾಗಿ ಠೇವಣಿ ಇಡುವ ಆದೇಶವನ್ನು ಪಾಲಿಸಲು ವಿಫಲವಾದ ಕಾರಣ ಅವರ ಮಾಸಿಕ ವೇತನ ರೂ. 1.9 ಲಕ್ಷವನ್ನು ಪ್ರತಿ ತಿಂಗಳು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಏಪ್ರಿಲ್ 24 ರಂದು ನಿರ್ದೇಶಿಸಿತ್ತು.

ವಿಶ್ವಸಂಸ್ಥೆಯ ಮಾಜಿ ಸಹಾಯಕ ಮಹಾಕಾರ್ಯದರ್ಶಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿ ಪುರಿ 2021 ರಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜಿನೀವಾದಲ್ಲಿನ ಅಪಾರ್ಟ್ಮೆಂಟ್ ಕುರಿತು ಗೋಖಲೆ ಅವರು ನೀಡಿದ್ದ ಹೇಳಿಕೆಯು “ಅಜಾಗರೂಕ ಮತ್ತು ಸುಳ್ಳು ಆರೋಪಗಳಿಂದ” ಕೂಡಿದ್ದು, ಅದು ತನ್ನ ಖ್ಯಾತಿಗೆ ಕಳಂಕ ತಂದಿದೆ ಎಂದು ಅವರು ವಾದಿಸಿದ್ದರು.

ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನಕ್ಕೆ ನಿಯೋಜನೆಗೊಂಡ ಭಾರತೀಯ ವಿದೇಶಾಂಗ ಸೇವೆಯ ಮಾಜಿ ಅಧಿಕಾರಿಯಾಗಿರುವ ಪುರಿ ತಮ್ಮ ಆದಾಯದ ಮೇಲೆ ಆಸ್ತಿಯನ್ನು ಮಾಡುತ್ತಿದ್ದಾರೆ ಎಂದು ಗೋಖಲೆ ಪ್ರಶ್ನಿಸಿದ್ದರು. ಅವರು ತಮ್ಮ ಪೋಸ್ಟ್‌ಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟ್ಯಾಗ್ ಮಾಡಿ, ಈ ವಿಷಯದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಗೆ ಕರೆ ನೀಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ತೆಲಂಗಾಣ| ಮಿಸ್ ವರ್ಲ್ಡ್ ಸ್ಪರ್ಧಿಗಳ ಪಾದ ತೊಳೆದ ಸ್ಥಳೀಯ ಮಹಿಳೆಯರು; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....