Homeಎಕಾನಮಿನರೇಂದ್ರ ಮೋದಿ ಸರ್ಕಾರವನ್ನು ಬಹಿರಂಗವಾಗಿ ಟೀಕಿಸಲು ಸಾಧ್ಯವಾಗುತ್ತಿಲ್ಲ: ಅಮಿತ್‌ ಶಾ ಎದುರೆ ರಾಹುಲ್‌ ಬಜಾಜ್‌ ಹೇಳಿಕೆ

ನರೇಂದ್ರ ಮೋದಿ ಸರ್ಕಾರವನ್ನು ಬಹಿರಂಗವಾಗಿ ಟೀಕಿಸಲು ಸಾಧ್ಯವಾಗುತ್ತಿಲ್ಲ: ಅಮಿತ್‌ ಶಾ ಎದುರೆ ರಾಹುಲ್‌ ಬಜಾಜ್‌ ಹೇಳಿಕೆ

- Advertisement -
- Advertisement -

ಜನರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಭಯಭೀತರಾಗಿದ್ದಾರೆ. ಜನರ ಟೀಕೆಗಳನ್ನು ಸರ್ಕಾರ ಆರೋಗ್ಯಕರ ರೀತಿಯಲ್ಲಿ ಸ್ವೀಕರಿಸುತ್ತದೆ ಎಂಬ ಭರವಸೆಯಿಲ್ಲ ಎಂದು ಕೈಗಾರಿಕೋದ್ಯಮಿ ರಾಹುಲ್‌ ಬಜಾಜ್‌ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಎಕಾನಾಮಿಕ್ಸ್‌ ಟೈಮ್ಸ್‌ ಪ್ರಶಸ್ತಿ-2019ರ ಪ್ರದಾನ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ವೇದಿಕೆಯಲ್ಲಿರುವಾಗಲೇ ರಾಹುಲ್‌ ಬಜಾಜ್‌ ಮೇಲಿನ ಹೇಳಿಕೆ ನೀಡಿದ್ದಾರೆ.

ಹಿಂದಿನ ಮನಮೋಹನ್‌ ಸಿಂಗ್‌ ಸರ್ಕಾರದ ಅವಧಿಯಲ್ಲಿ ಯಾರನ್ನು ಬೇಕಾದರೂ ಟೀಕಿಸುವ ಸ್ವಾತಂತ್ಯ್ರವಿತ್ತು. ಆದರೆ ಈಗಿನ ಸಂದರ್ಭದಲ್ಲಿ ಬಹಿರಂಗವಾಗಿ ಮೋದಿ ಸರ್ಕಾರವನ್ನು ಟೀಕಿಸುವ ಪರಿಸ್ಥಿತಿಯಿಲ್ಲ ಎಂದಿದ್ದಾರೆ.

ಯುಪಿಎ 2ರ ಅವಧಿಯಲ್ಲಿ ಯಾರನ್ನು ಬೇಕಾದರೂ ನಾವು ಟೀಕಿಸಬಹುದಿತ್ತು. ನೀವು ಒಳ್ಳೆಯ ಕೆಲಸವನ್ನೇ ಮಾಡುತ್ತಿದ್ದೀರಿ ಆದರೆ ಬಹಿರಂಗವಾಗಿ ನಿಮ್ಮನ್ನು ಟೀಕಿಸಲು ಸಾಧ್ಯವಿಲ್ಲ. ನೀವದನ್ನು ಪ್ರಶಂಸಿಸುತ್ತೀರಿ ಎಂಬ ಭರವಸೆಯಿಲ್ಲ. ನಾನು ಹೇಳುತ್ತಿರುವುದು ಬಹುಶಃ ತಪ್ಪಿರಬಹುದು ಆದರೆ ಎಲ್ಲರೂ ರೀತಿ ಭಾವಿಸಿದ್ದಾರೆ ಎಂದು ರಾಹುಲ್‌ ಬಜಾಜ್‌ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್‌ ಶಾ, ಯಾರೂ ಭಯಪಡುವ ಅಗತ್ಯವಿಲ್ಲ. ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಸಿ ಎಂದಿದ್ದಾರೆ.

ಆನಂತರ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ವಿಷಯ ಪ್ರಸ್ತಾಪಿಸಿದ ರಾಹುಲ್‌ ಬಜಾಜ್‌, ಸಂಸತ್ತಿನಲ್ಲಿ ಗೋಡ್ಸೆಯನ್ನು ದೇಶಭಕ್ತ ಎಂದ ಪ್ರಗ್ಯಾ ಬಿಜೆಪಿ ಬೆಂಬಲದಿಂದ ಗೆದ್ದು ಬಂದಿದ್ದಾರೆ. ಗಾಂಧಿಯನ್ನು ಗೋಡ್ಸೆ ಕೊಂದಿದ್ದರೆ ಬಗ್ಗೆ ಯಾರಿಗಾದರೂ ಸಂಶಯವಿದೆಯೇ? ನನಗಂತೂ ಗೊತ್ತಿಲ್ಲ ಎಂದಿದ್ದಾರೆ.

ಕಳೆದ ಮೇ ತಿಂಗಳಿನಲ್ಲಿಯೇ ಆಕೆ ಇದೇ ರೀತಿಯಾಗಿ ಗಾಂಧಿ ಕೊಂದ ಗೋಡ್ಸೆಯನ್ನು ದೇಶಭಕ್ತ ಎಂದಿದ್ದರು. ಆಗ ಆಕೆಯನ್ನು ಕ್ಷಮಿಸಲು ಪ್ರಧಾನಿ ನರೇಂದ್ರ ಮೋದಿಯವರು ತುಂಬಾ ಕಷ್ಟವಾಗಿತ್ತು ಎಂದು ಹೇಳಿದ್ದರು. ಆದರೂ ಆಕೆಯನ್ನು ಆನಂತರ ರಕ್ಷಣಾ ಸಲಹಾ ಸಮಿತಿಗೆ  ತೆಗೆದುಕೊಂಡರು ಎಂದು ರಾಹುಲ್‌ ಬಜಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ ಪ್ರಗ್ಯಾ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ಮಹಮೋಹನ್‌ ಸಿಂಗ್‌ರವರು ಆರ್ಥಿಕ ಸ್ಥಿತಿಗತಿಯ ಕುರಿತು ಮಾತನಾಡಿದರೆ ಭಯ ಮತ್ತು ಕಿರುಕುಳ ನೀಡುವ ವಾತವಾರಣ ಸೃಷ್ಠಿಯಾಗಿದೆ ಎಂದು ಹೇಳಿದ ನಂತರ ರಾಹುಲ್‌ ಬಜಾಜ್‌ರವರು ಮಾತನಾಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ಕೃಪೆ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...