Homeಅಂತರಾಷ್ಟ್ರೀಯಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

- Advertisement -
- Advertisement -

ಭಾರತೀಯ ನೌಕಪಡೆಯ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪದ ಕುರಿತು ತಜ್ಞರು ತನಿಖೆ ಪ್ರಾರಂಭಿಸಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಈ ಕುರಿತು ಮೇ 15ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ “ಕಳೆದ ವಾರ ರೋಹಿಂಗ್ಯಾ ನಿರಾಶ್ರಿತರನ್ನು ಭಾರತೀಯ ನೌಕಾಪಡೆಯ ಹಡಗಿನಿಂದ ಅಂಡಮಾನ್ ಬಳಿ ಬಲವಂತವಾಗಿ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ವಿಶ್ವಾಸಾರ್ಹ ವರದಿಗಳಿಂದ ಗಾಬರಿಗೊಂಡ ವಿಶ್ವಸಂಸ್ಥೆಯ ತಜ್ಞರು, ಇಂತಹ ‘ಊಹಿಸಲಾಗದ’ ಮತ್ತು ‘ಒಪ್ಪಿಕೊಳ್ಳಲಾಗದ’ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ” ಎಂದಿದೆ.

ಮ್ಯಾನ್ಮಾರ್‌ನ ಅಪಾಯಕಾರಿ ಪರಿಸ್ಥಿತಿಗೆ ವಾಪಸ್ ಕಳುಹಿಸುವುದು ಸೇರಿದಂತೆ ಅಮಾನವೀಯ ಮತ್ತು ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರೋಹಿಂಗ್ಯಾ ನಿರಾಶ್ರಿತರನ್ನು ನಡೆಸಿಕೊಳ್ಳುವುದನ್ನು ಭಾರತ ಸರ್ಕಾರ ನಿಲ್ಲಿಸಬೇಕು ಎಂದು ಇದೇ ವೇಳೆ ಮಂಡಳಿ ಆಗ್ರಹಿಸಿದೆ.

“ರೋಹಿಂಗ್ಯಾ ನಿರಾಶ್ರಿತರನ್ನು ನೌಕಾಪಡೆಯ ಹಡಗುಗಳಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಕಲ್ಪನೆಯು ಅತಿರೇಕದ ಸಂಗತಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯವನ್ನು ನಾನು ಹುಡುಕುತ್ತಿದ್ದೇನೆ. ಏನಾಯಿತು ಎಂಬುದರ ಸಂಪೂರ್ಣ ವರದಿಯನ್ನು ಒದಗಿಸುವಂತೆ ಭಾರತ ಸರ್ಕಾರವನ್ನು ಕೋರಿದ್ದೇನೆ” ಎಂದು ಮ್ಯಾನ್ಮಾರ್‌ನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ರ್ಯೂಸ್ ತಿಳಿಸಿದ್ದಾರೆ.

“ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವವರ ಜೀವನ ಮತ್ತು ಸುರಕ್ಷತೆಯ ಬಗ್ಗೆ ಸ್ಪಷ್ಟವಾಗಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಇಂತಹ ಕ್ರೂರ ಕ್ರಮಗಳು ಮಾನವ ಸಭ್ಯತೆಗೆ ಅವಮಾನವಾಗಿದೆ ಮತ್ತು ಜೀವ ಅಥವಾ ಸ್ವಾತಂತ್ರ್ಯಕ್ಕೆ ಬೆದರಿಕೆ ಇರುವ ಜನರನ್ನು ಬಲವಂತವಾಗಿ ವಾಪಸ್ ಕಳಿಸುವುದನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವ ಸ್ಪಷ್ಟ ಉಲ್ಲಂಘನೆಯಾಗಿದೆ ಆಂಡ್ರ್ಯೂಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ, ಕಿರುಕುಳ ಮತ್ತು ಇತರ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ಬೆದರಿಕೆಯನ್ನು ಎದುರಿಸುತ್ತಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಲವಂತವಾಗಿ ವಾಪಸ್ ಕಳುಹಿಸುವುದನ್ನು ಕೊನೆಗೊಳಿಸಬೇಕು” ಎಂದು ಆಂಡ್ರ್ಯೂಸ್ ಆಗ್ರಹಿಸಿದ್ದಾರೆ.

ಕಳೆದ ವಾರದ ಕೊನೆಯಲ್ಲಿ ಭಾರತೀಯ ಅಧಿಕಾರಿಗಳು ದೆಹಲಿಯಲ್ಲಿ ವಾಸಿಸುತ್ತಿದ್ದ ಹಲವಾರು ರೋಹಿಂಗ್ಯಾ ನಿರಾಶ್ರಿತರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಅಥವಾ ಎಲ್ಲರೂ ನಿರಾಶ್ರಿತರ ಗುರುತಿನ ದಾಖಲೆಗಳನ್ನು ಹೊಂದಿದ್ದರು. ಈ ಗುಂಪಿನ ಸುಮಾರು 40 ಸದಸ್ಯರ ಕಣ್ಣುಗಳಿಗೆ ಬಟ್ಟೆ ಕಟ್ಟಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಕರೆದೊಯ್ಯಲಾಗಿದೆ. ನಂತರ ಭಾರತೀಯ ನೌಕಾಪಡೆಯ ಹಡಗಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹಡಗು ಅಂಡಮಾನ್ ಸಮುದ್ರವನ್ನು ದಾಟಿದ ನಂತರ, ನಿರಾಶ್ರಿತರಿಗೆ ಲೈಫ್ ಜಾಕೆಟ್‌ಗಳನ್ನು ನೀಡಿ, ಬಲವಂತವಾಗಿ ಸಮುದ್ರಕ್ಕೆ ಇಳಿಸಿ, ಮ್ಯಾನ್ಮಾರ್ ಪ್ರದೇಶದ ದ್ವೀಪಕ್ಕೆ ಈಜುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ನಿರಾಶ್ರಿತರು ದಡಕ್ಕೆ ಈಜುವ ಮೂಲಕ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ, ಆದರೆ ಅವರ ಪ್ರಸ್ತುತ ಸ್ಥಳ ಮತ್ತು ಸ್ಥಿತಿ ಗೊತ್ತಾಗಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತೀಯ ಅಧಿಕಾರಿಗಳು ಅಸ್ಸಾಂ ರಾಜ್ಯದ ಬಂಧನ ಕೇಂದ್ರದಿಂದ ಸುಮಾರು 100 ಮಂದಿ ರೋಹಿಂಗ್ಯಾ ನಿರಾಶ್ರಿತರ ಗುಂಪನ್ನು ಬಾಂಗ್ಲಾದೇಶದ ಗಡಿಯಲ್ಲಿರುವ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ. ಈ ಗುಂಪಿನ ಪ್ರಸ್ತುತ ಸ್ಥಳ ಮತ್ತು ಸ್ಥಿತಿಯೂ ತಿಳಿದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

“ಮಾರ್ಚ್ 3, 2025ರಂದು, ವಿಶೇಷ ವರದಿಗಾರ ಆಂಡ್ರ್ಯೂಸ್ ಅವರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ರೋಹಿಂಗ್ಯಾಗಳು ಸೇರಿದಂತೆ ಇತರ ನಿರಾಶ್ರಿತರ ವ್ಯಾಪಕ, ಅನಿಯಂತ್ರಿತ ಮತ್ತು ಅನಿರ್ದಿಷ್ಟ ಬಂಧನ ಹಾಗೂ ರೋಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್‌ ನಿರಾಶ್ರಿತರನ್ನು ಅನಿಯಂತ್ರಿತ ಬಂಧನದಿಂದ ಮುಕ್ತಗೊಳಿಸಬೇಕು ಮತ್ತು ಬಂಧನ ಸ್ಥಳಗಳಿಗೆ ಅವರಿಗೆ ಪ್ರವೇಶ ಅವಕಾಶ ನೀಡಬೇಕು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.”

“ಭಾರತ ಸರ್ಕಾರವು ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಎಲ್ಲಾ ರೀತಿಯ ಒಪ್ಪಿಕೊಳ್ಳಲಾಗದ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ಮ್ಯಾನ್ಮಾರ್‌ಗೆ ಅವರನ್ನು ಗಡಿಪಾರು ಮಾಡುವುದನ್ನು ಕೊನೆಗಳಿಸಬೇಕು. ಭಾರತದ ಅಂತಾರಾಷ್ಟ್ರೀಯ ಬಾಧ್ಯತೆಗಳ ಈ ಸ್ಪಷ್ಟ ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬುವುದಾಗಿ ಆಂಡ್ರ್ಯೂಸ್ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...