Homeಕರ್ನಾಟಕಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಸುಳ್ಳು ಪೋಸ್ಟ್: ಎಫ್‌ಐಆರ್ ದಾಖಲು

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಸುಳ್ಳು ಪೋಸ್ಟ್: ಎಫ್‌ಐಆರ್ ದಾಖಲು

- Advertisement -
- Advertisement -

ಸೇನಾಧಿಕಾರಿ ಸೋಫಿಯಾ ಖುರೇಷಿ ಅವರ ಅತ್ತೆ ಮಾವನ ಮನೆಯ ಮೇಲೆ “ದಾಳಿ” ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಸುದ್ದಿ ಹರಡಿದ ಪೋಸ್ಟ್‌ಗೆ ಸಂಬಂಧಿಸಿದಂತೆ ಗುರುವಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರೇಷನ್ ಸಿಂಧೂರದ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸತತವಾಗಿ ಭಾಗವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆಯಾಗಿದ್ದು ಅವರ ಪತಿ ಕೂಡಾ ಸೇನೆಯಲ್ಲಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ

ಪೊಲೀಸ್ ಅಧಿಕಾರಿಯ ದೂರಿನ ಮೇರೆಗೆ, ಎಕ್ಸ್‌ ಬಳಕೆದಾರ ಅನಿಸ್ ಉದ್ದೀನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 353(2) (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು ಮತ್ತು 192 (A) (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಅಡಿಯಲ್ಲಿ ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆಪಾದಿತ ನಕಲಿ ಪೋಸ್ಟ್ ಅನ್ನು ಮರುಟ್ವೀಟ್ ಮಾಡಿದ್ದಕ್ಕಾಗಿ ಇತರ ಇಬ್ಬರು ಎಕ್ಸ್‌ ಬಳಕೆದಾರರಾದ ಖುಬಾನಿ ಮತ್ತು ಡ್ರುಮಿ ಎಂಬವರ ಹೆಸರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಖಾತೆದಾರರ ಗುರುತನ್ನು ಇನ್ನಷ್ಟೆ ಪರಿಶೀಲಿಸಬೇಕಾಗಿದೆ.

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಲೇದ್ ಬುಧವಾರ ಮಾತನಾಡಿ, “ಅಂತಹ ಯಾವುದೇ ಘಟನೆ ನಡೆದಿಲ್ಲ” ಎಂದು ದೃಢಪಡಿಸಿದ್ದು, ಈ ಪೋಸ್ಟ್ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಇದೀಗ ಆಪಾದಿತ ಪೋಸ್ಟ್‌ ಅನ್ನು ಅಳಿಸಲಾಗಿದ್ದು, ಅದಾಗ್ಯೂ, ಈ ಪೋಸ್ಟ್ ಭಾರತದ ಹೊರಗಿನಿಂದ ಬಂದಿದೆ ಎಂದು ನಂಬಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಪ್ರಕರಣ ಪ್ರಮುಖ ಆರೋಪಿ ಉದ್ದೀನ್ ಕೆನಡಾದ ಬ್ರಿಟಿಷ್ ಕೊಲಂಬಿಯಾ ನಿವಾಸಿ ಎಂದು ಸೂಚಿಸಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

ಈ ಮೊದಲು ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಅವರು, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

“ಅವರು ಬೆಳಗಾವಿಯ ಸೊಸೆ, ಅವರ ಪತಿ ಬೆಳಗಾವಿಯವರು. ಈಗಾಗಲೇ ಅಲ್ಲಿನ ಎಸ್‌ಪಿ ಹೇಳಿಕೆ ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿ ಕೇಂದ್ರ ಸರ್ಕಾರಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಲು ನಾವು ಕೇಳಿದ್ದೇವೆ. ಅವರು ಅದನ್ನು ಮಾಡುತ್ತಾರೆ… ಇದು ರಾಜ್ಯ ಮತ್ತು ದೇಶಕ್ಕೆ ಮಾಡಿದ ಅವಮಾನ. ಇದು ಸಮರ್ಥನೀಯವಲ್ಲ” ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ, ಸ್ಥಳೀಯ ಪೊಲೀಸ್ ತಂಡವು ಗೋಕಾಕ್ ತಾಲ್ಲೂಕಿನಲ್ಲಿರುವ ಕರ್ನಲ್ ಖುರೇಷಿ ಅವರ ಅತ್ತೆಯ ಮನೆಗೆ ಭೇಟಿ ನೀಡಿತ್ತು ಮತ್ತು ಅವರ ಮನೆಯ ಹೊರಗೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಕರ್ನಲ್ ಖುರೇಷಿ ಸಶಸ್ತ್ರ ಪಡೆಗಳಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಅವರು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜೊತೆಗೆ ಆಪರೇಷನ್ ಸಿಂಧೂರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...