Homeಮುಖಪುಟಪತ್ರಕರ್ತ ರೆಜಾಝ್ ಸೈದಿಕ್ ವಿರುದ್ಧ ಯುಎಪಿಎ ಪ್ರಕರಣ ದಾಖಲು; ತನಿಖೆ ಕೈಗೆತ್ತಿಕೊಂಡ ಮಹಾರಾಷ್ಟ್ರ ಎಟಿಎಸ್

ಪತ್ರಕರ್ತ ರೆಜಾಝ್ ಸೈದಿಕ್ ವಿರುದ್ಧ ಯುಎಪಿಎ ಪ್ರಕರಣ ದಾಖಲು; ತನಿಖೆ ಕೈಗೆತ್ತಿಕೊಂಡ ಮಹಾರಾಷ್ಟ್ರ ಎಟಿಎಸ್

- Advertisement -
- Advertisement -

ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ಕೇರಳ ಮೂಲದ ಸ್ವತಂತ್ರ ಪತ್ರಕರ್ತ ರೆಜಾಝ್ ಎಂ ಶೀಬಾ ಸೈದಿಕ್ ವಿರುದ್ಧದ ಪ್ರಕರಣಗಳ ತನಿಖೆಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ವಹಿಸಿಕೊಂಡಿದೆ.

ಸೈದಿಕ್ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್ 38 ಮತ್ತು 39 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗುರುವಾರ (ಮೇ 15) ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಹಾರಾಷ್ಟ್ರ ಎಟಿಎಸ್ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ತಿಳಿಸಿದೆ.

ಹಿಝ್ಬುಲ್ ಮುಜಾಹಿದ್ದೀನ್, ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್), ಮತ್ತು ಸಿಪಿಐ (ಮಾವೋವಾದಿ) ಸೇರಿದಂತೆ ನಿಷೇಧಿತ ಸಂಘಟನೆಗಳೊಂದಿಗೆ ಸೈದಿಕ್ ಅವರಿಗೆ ಸಂಪರ್ಕವಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀಕ್ಷ್ಣ ವರದಿ ಮಾಡುವಿಕೆಗೆ ಹೆಸರುವಾಸಿಯಾದ ಮತ್ತು ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(ಡಿಎಸ್ಎ) ನೊಂದಿಗೆ ಸಂಬಂಧ ಹೊಂದಿರುವ ಸೈದಿಕ್ ಅವರನ್ನು ಮೇ 7 ರಂದು ನಾಗ್ಪುರದ ಲಕಡ್ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ನಂತರ ಬಂಧಿಸಲಾಗಿದೆ.

ಸೈದಿಕ್ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಕಾನೂನುಬಾಹಿರ ಉಗ್ರಗಾಮಿ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಅವರನ್ನು ಸಿಪಿಐ (ಮಾವೋವಾದಿ) ನ ಶಂಕಿತ ಸದಸ್ಯ ಎಂಬುವುದಾಗಿ ಗುರುತಿಸಲಾಗಿದೆ ಎಂದು ವರದಿಯಾಗಿದೆ.

ಸೈದಿಕ್ ಬಂದೂಕುಗಳನ್ನು ಬಳಸುತ್ತಿದ್ದರು ಎಂದು ತೋರಿಸುವ ಫೋಟೋ ಪುರಾವೆ ತಮ್ಮ ಬಳಿ ಇವೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಸೈದಿಕ್ ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 149 (ಸರ್ಕಾರದ ವಿರುದ್ಧ ಯುದ್ಧ ಮಾಡಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು), ಸೆಕ್ಷನ್ 192 (ಗಲಭೆಯನ್ನು ಪ್ರಚೋದಿಸುವ ಉದ್ದೇಶದಿಂದ ಪ್ರಚೋದನೆ) ಮತ್ತು ಸೆಕ್ಷನ್ 353 ರ ವಿವಿಧ ಸಬ್‌ ಕ್ಲಾಸ್‌ಗಳಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ. ಹೆಚ್ಚುವರಿಯಾಗಿ, ಅವರ ವಿರುದ್ಧ ಮಾಹಿತಿ ಮತ್ತು ಗುಪ್ತಚರ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆ ಮುಂದುವರಿಸಲು ಸೈದಿಕ್ ಅವರನ್ನು ಪ್ರಾಸಿಕ್ಯೂಷನ್ 10 ದಿನಗಳ ಪೊಲೀಸ್ ಕಸ್ಟಡಿಗೆ ಕೋರಿತ್ತು. ಆದರೆ, ಮೇ 11 ರಂದು ಕೇರಳದಿಂದ ಸಂಗ್ರಹಿಸಲಾದ ಸಾಕ್ಷ್ಯಗಳಿಗೆ ಸಂಬಂಧಿಸಿದ ವಶಪಡಿಸಿಕೊಂಡ ದಾಖಲೆಗಳು ಮತ್ತು ಪಂಚನಾಮವನ್ನು ಸಲ್ಲಿಸಲು ವಿಫಲವಾದ ಮಹಾರಾಷ್ಟ್ರ ಪೊಲೀಸರನ್ನು ನ್ಯಾಯಾಲಯ ಟೀಕಿಸಿತ್ತು. ಎನ್‌ಐಎ ನ್ಯಾಯಾಲಯ ಮೇ 18 ರವರೆಗೆ ಕಸ್ಟಡಿಗೆ ನೀಡಿದೆ.

ಕೇರಳ ವಿಶ್ವವಿದ್ಯಾಲಯದಿಂದ ಸಮಾಜಕಾರ್ಯದಲ್ಲಿ ಪದವಿ ಪಡೆದಿರುವ ರೆಜಾಝ್, ಮಕ್ತೂಬ್ ಮತ್ತು ಕೌಂಟರ್ ಕರೆಂಟ್ಸ್‌ನಂತಹ ಸ್ವತಂತ್ರ ಮಾಧ್ಯಮಗಳಿಗೆ ಕೆಲಸ ಮಾಡುತ್ತಿದ್ದರು. ಅವರ ವರದಿಗಳು ಪೊಲೀಸ್ ದೌರ್ಜನ್ಯ, ವ್ಯವಸ್ಥಿತ ತಾರತಮ್ಯ ಮತ್ತು ಭಾರತದಲ್ಲಿನ ಕೈದಿಗಳ ದುಃಸ್ಥಿತಿಯ ಮೇಲೆ ಕೇಂದ್ರೀಕರಿಸುತ್ತಿದ್ದವು.

ಪ್ರಸ್ತು ಮಹಾರಾಷ್ಟ್ರ ಎಟಿಎಸ್ ಪ್ರಕರಣದ ತನಿಖೆ ವಹಿಸಿಕೊಂಡಿದೆ. ಆರಂಭದಲ್ಲಿ ನಾಗ್ಪುರ ಪೊಲೀಸರು ತನಿಖೆ ಕೈಗೊಂಡು ಕೇರಳದಲ್ಲಿರುವ ರೆಜಾಝ್ ಮನೆಯಲ್ಲಿ ಶೋಧ ನಡೆಸಿದ್ದರು.

ಗುಜರಾತ್‌| ಪ್ರಮುಖ ದಿನಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...