Homeಮುಖಪುಟಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಬಾಲಕಿಯರ ವಿದ್ಯಾರ್ಥಿ ವೇತನ | ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ವಿಸ್ತರಣೆ

- Advertisement -
- Advertisement -

ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.

ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.

ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ

ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.

ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. We are proud that our people citizens of Karnataka coastal districts are brave and they are ready to sacrifice anything for the general public.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...