Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...